ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 ಸಿಗಡಿ ರಫ್ತು: ಮಾರ್ಗಸೂಚಿ ಸಿದ್ಧಪಡಿಸಲು ಒಪ್ಪಿಗೆ | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Wednesday, September 19, 2018

ಸಿಗಡಿ ರಫ್ತು: ಮಾರ್ಗಸೂಚಿ ಸಿದ್ಧಪಡಿಸಲು ಒಪ್ಪಿಗೆ

  Pundalik       Wednesday, September 19, 2018

ದಕ್ಷಿಣ ವಲಯ ಪರಿಷತ್‌ ಸಭೆ ಯಶಸ್ವಿ; 27 ವಿಷಯಗಳ ಪೈಕಿ 22 ಇತ್ಯರ್ಥ


ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಸ್ವಾಗತಿಸಿದರು. ಆಂಧ್ರಪ್ರದೇಶದ ಹಣಕಾಸು ಸಚಿವ ಯನಮಲ ರಾಮಕೃಷ್ಣುಡು, ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ, ತಮಿಳುನಾಡಿನ ಉಪ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ ಮತ್ತು ಕೇರಳದ ಹಣಕಾಸು ಸಚಿವ ಥಾಮಸ್ ಐಸಾಕ್ ಇದ್ದಾರೆ
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸಿಗಡಿ ರಫ್ತು ಸಂದರ್ಭದಲ್ಲಿ ಅವುಗಳಲ್ಲಿರುವ ಜೀವಪ್ರತಿರೋಧಕ ಅಂಶಗಳನ್ನು ಪತ್ತೆ ಹಚ್ಚಿ ನಿಯಂತ್ರಣ ಹೇರುವ ವಿಚಾರಕ್ಕೆ ಸಂಬಂಧಿಸಿ ಮಾರ್ಗಸೂಚಿ ಸಿದ್ಧಪಡಿಸಲು ದಕ್ಷಿಣ ವಲಯ (ಅಂತರರಾಜ್ಯ) ಪರಿಷತ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಪರಿಷತ್‌ನ 28ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಗೃಹ ಸಚಿವ ರಾಜನಾಥ್‌ ಸಿಂಗ್‌, ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ 
ಮಾತನಾಡಿದರು.
‘ಸಭೆಯಲ್ಲಿ ಚರ್ಚೆಗೆ ಎತ್ತಿಕೊಂಡ 27 ವಿಷಯಗಳ ಪೈಕಿ 22ರನ್ನು ಚರ್ಚಿಸಿ ಇತ್ಯರ್ಥಪಡಿಸಲಾಗಿದೆ. ಉಳಿದಿರುವ ವಿಷಯಗಳ ಕುರಿತು ತಮಿಳುನಾಡಿನಲ್ಲಿ ನಡೆಯಲಿರುವ ಮುಂದಿನ ಸಭೆ ಚರ್ಚಿಸಲಾಗುವುದು’ ಎಂದು ಅವರು ತಿಳಿಸಿದರು.
ಮೀನುಗಾರರಿಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಬಯೋ ಮೆಟ್ರಿಕ್‌ ಕಾರ್ಡ್‌ಗಳನ್ನು ನೀಡಲಾಗುತ್ತಿದ್ದು, ಈವರೆಗೆ ಶೇ 95ರಷ್ಟು ಮಂದಿಗೆ ವಿತರಿಸಲಾಗಿದೆ. ಎಸ್‌ಸಿ, ಎಸ್‌ಟಿ ಸಮುದಾಯದ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಎಲ್ಲ ಕೋರ್ಸ್ ಗಳಲ್ಲಿ ಶಿಷ್ಯವೇತನ ನೀಡಲು ಏಕರೂಪದಲ್ಲಿ ಅನುದಾನ ಬಿಡುಗಡೆ, ನವೀಕರಿಸಬಹುದಾದ ಇಂಧನದ ಸದ್ಬಳಕೆ, ಪ್ರವಾಸೋದ್ಯಮ ರೈಲುಗಳ ವಿಸ್ತರಣೆ ವಿಷಯಗಳ ಕುರಿತು ಚರ್ಚೆ ನಡೆಯಿತು ಎಂದರು.
ಪವಿತ್ರವಾದ ಶೇಷಾಚಲಂ‌ ಬೆಟ್ಟದಿಂದ (ಆಂಧ್ರಪ್ರದೇಶ) ರಕ್ತ ಚಂದನ ಅಕ್ರಮ ‌ಸಾಗಣೆ ವಿಷಯದಲ್ಲಿ ಅಂತಿಮ ‌ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಈ ಕುರಿತು ಸಮಿತಿ ರಚಿಸಲು‌ ನಿರ್ಧರಿಸಲಾಗಿದೆ. ಪುದುಚೇರಿ ವಿಮಾನ ನಿಲ್ದಾಣ ಅಭಿವೃದ್ಧಿ, ಚೆನ್ನೈ ನಗರಕ್ಕೆ ಕುಡಿಯುವ ನೀರು ಪೂರೈಕೆ, ಪೊಲೀಸ್ ಇಲಾಖೆ ಆಧುನೀಕರಣ, ಎಲ್‌ಪಿಜಿ‌ ಗೋದಾಮುಗಳಿಗೆ ನಿವೇಶನ ಯೋಜನೆಗಳಿಗೆ ನಿರಕ್ಷೇಪಣಾ ಪತ್ರ (ಎನ್‌ಓಸಿ) ನೀಡುವ ವಿಷಯದಲ್ಲಿ ರಾಜ್ಯಗಳ ಮಧ್ಯೆ ಎದುರಾಗುವ ಗೊಂದಲಗಳನ್ನು ಪರಸ್ಪರ ಚರ್ಚಿಸಿ, ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ತೀರ್ಮಾನಿಸಲಾಯಿತು ಎಂದು ಅವರು ವಿವರಿಸಿದರು.
ಪುದುಚೇರಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ತಮಿಳುನಾಡು ರಾಜ್ಯದ ಭೂಮಿ ಅಗತ್ಯ ಇದೆ. ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿದ್ದು, ಭೂ ಸ್ವಾಧೀನಕ್ಕೆ ಹಣದ ಅಗತ್ಯವಿದೆ. ಹೀಗಾಗಿ, ಈ ವಿಷಯದಲ್ಲಿ ಅಂತಿಮ‌ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಪುಲಿಕಾಟ್ ಕೆರೆಯಲ್ಲಿ ಮೀನುಗಾರಿಕೆ ನಡೆಸುವ ವಿಷಯದಲ್ಲಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಮೀನುಗಾರರ ಮಧ್ಯೆ ಇರುವ ಬಿಕ್ಕಟ್ಟು ಇತ್ಯರ್ಥಪಡಿಸಲು ಕೂಡಾ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದರು.
‘ಗಡಿ ಸಮಸ್ಯೆ, ಭಾಷಾ ಅಲ್ಪಸಂಖ್ಯಾತರು ಮತ್ತು ಅಂತರರಾಜ್ಯ ಸಾರಿಗೆ ಸೇರಿದಂತೆ ಆರ್ಥಿಕ ಮತ್ತು ಸಾಮಾಜಿಕ ಯೋಜನೆಗಳ ವಿಷಯದ ಕುರಿತು ವಲಯ ಪರಿಷತ್‌ ಸಭೆಯಲ್ಲಿ ಚರ್ಚಿಸಿ, ತೀರ್ಮಾನಗಳನ್ನು ಕೈಗೊಳ್ಳುವುದು ಕಡ್ಡಾಯ. ಆ ಮೂಲಕ, ಸಾಮಾನ್ಯ ವಿಷಯಗಳಲ್ಲಿ ರಾಜ್ಯಗಳ ನಡುವಿನ ಸಮಸ್ಯೆಗಳನ್ನು ಪರಸ್ಪರ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ಸಾಧ್ಯ’ ಎಂದೂ ರಾಜನಾಥ್‌ ಸಿಂಗ್‌ ಅಭಿಪ್ರಾಯಪಟ್ಟರು.
ನದಿಯ ನೀರು ಹಂಚಿಕೆಗೆ ಸಮಿತ: ‘ಚೆನ್ನೈ ನಗರದ ಕುಡಿಯುವ ನೀರಿ ಅಗತ್ಯವನ್ನು ಈಡೇರಿಸಲು ಕೃಷ್ಣಾ ಅಚ್ಚುಕಟ್ಟು ಪ್ರದೇಶ ಹೊಂದಿರುವ ರಾಜ್ಯಗಳು ನದಿಯ ನೀರು ಹಂಚಿಕೆ ಸಂಬಂಧ ಸಮಿತಿ ರಚಿಸಲು ಒಪ್ಪಿವೆ’ ಎಂದು ದಕ್ಷಿಣ ವಲಯ ಪರಿಷತ್‌ನ ಕಾರ್ಯದರ್ಶಿ ಆರ್‌. ಬುಹರಿಲ್‌ ತಿಳಿಸಿದರು.
ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಪುದುಚೇರಿ ಮುಖ್ಯಮಂತ್ರಿ ಸಿ. ನಾರಾಯಣಸ್ವಾಮಿ, ತಮಿಳುನಾಡು ಉಪ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ, ಆಂಧ್ರಪ್ರದೇಶ ಮತ್ತು ಕೇರಳದ ಸಚಿವರು ಸಭೆಯಲ್ಲಿ 
ಇದ್ದರು.


Friends, If you like this post,kindly comment below the post and do share your Response, (Thanks for Reading....)
logoblog

Thanks for reading ಸಿಗಡಿ ರಫ್ತು: ಮಾರ್ಗಸೂಚಿ ಸಿದ್ಧಪಡಿಸಲು ಒಪ್ಪಿಗೆ

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *