ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 10 ನೇ ತರಗತಿ ಪಠ್ಯಪುಸ್ತಕದಲ್ಲಿ ಬರುವ ಪ್ರಮುಖ ಇಸ್ವಿಗಳು | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Saturday, October 06, 2018

10 ನೇ ತರಗತಿ ಪಠ್ಯಪುಸ್ತಕದಲ್ಲಿ ಬರುವ ಪ್ರಮುಖ ಇಸ್ವಿಗಳು

  Pundalik       Saturday, October 06, 2018

10 ನೇ ತರಗತಿ ಪಠ್ಯಪುಸ್ತಕದಲ್ಲಿ ಬರುವ ಪ್ರಮುಖ ಇಸ್ವಿಗಳು


      ಇತಿಹಾಸ

•1453 – ಅಟೋಮನ್ ಟರ್ಕರಿಂದ ಕಾನಸ್ಟಾಂಟಿನೋಪಲ್ವಶ

•1498 – ವಾಸ್ಕೋಡಿಗಾಮ ಭಾರತದ ಕಲ್ಲಿಕೋಟೆಗೆ ಆಗಮನ

•1757 – ಪ್ಲಾಸಿ ಕದನ (ಬಂಗಾಳದ ನವಾಬ ಸಿರಾಜುದ್ದೌಲ್ ಹಾಗೂ ಬ್ರಿಟೀಷರ ನಡುವೆ)

•1764 – ಬಕ್ಸಾರ್ ಕದನ ( ಷಾ ಅಲಂ, ಷೂಜ ಉದ್ದೌಲ್, ಮೀರ್ ಕಾಸಿಮರ ತ್ರಿಮೈತ್ರಿಕೂಟ ಹಾಗೂ ಬ್ರಿಟೀಷರ ನಡುವೆ)

•1765 – ರಾಬರ್ಟ್ ಕ್ಲೈವ್ ನಿಂದ ದ್ವಿಮುಖ ಸರ್ಕಾರ ಜಾರಿಗೆ.

•1784 – ಮಂಗಳೂರು ಶಾಂತಿ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)

•1792 – ಶ್ರೀರಂಗಪಟ್ಟಣ ಒಪ್ಪಂದ ( ಟಿಪ್ಪು ಮತ್ತ ಬ್ರಿಟೀಷರ ನಡುವೆ)

•1799 – 4ನೇ ಆಂಗ್ಲೋ ಮೈಸೂರು ಯುದ್ಧ,( ಟಿಪ್ಪು ಮರಣ )

•1773 – ರೆಗ್ಯುಲೆಟಿಂಗ್ ಶಾಸನ ( ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯ ಸ್ಥಾಪನೆ )

•1784 – ಪಿಟ್ಸ್ ಇಂಡಿಯಾ ಶಾಸನ

•1861 – ಭಾರತದ ಕೌನ್ಸಿಲ್ ಕಾಯ್ದೆ ( ಕಾರ್ಯಕಾರಿ ಸಮಿತಿಯಲ್ಲಿ ಭಾರತೀಯರ ನಾಮಕರಣಕ್ಕೆ ಅವಕಾಶ )

•1909 – ಮಿಂಟೋ-ಮಾರ್ಲೆ ಸುಧಾರಣೆಗಳು (ಮತೀಯ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ಕ್ಷೇತ್ರಗಳ ಆರಂಭ )

•1919 – ಮಾಂಟೆಗ್ಯೂ-ಚೆಮ್ಸಫರ್ಡ್ ಸುಧಾರಣೆ  (ಕೇಂದ್ರದಲ್ಲಿ 2 ಸದನಗಳ ಶಾಸನಸಭೆ ರಚನೆ )

•1935 – ಅಖಿಲ ಭಾರತೀಯ ಸಂಯುಕ್ತ ವ್ಯವಸ್ಥೆಗೆ ಅವಕಕಾಶ

•1916 – ಹೋಂರೂಲ್ ಚಳುವಳಿ ಆರಂಭ ( ಆನಿ ಬೆಸೆಂಟರಿಂದ )

•1857 – ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ

•1858 – ಬ್ರಿಟನ್ ರಾಣಿಯ ಘೋಷಣೆ

•1853 – ಭಾರತದಲ್ಲಿ ಪ್ರಥಮ ರೈಲು ಸಂಚಾರ ಆರಂಭ ( ಮುಂಬೈ-ಠಾಣಾ ನಡುವೆ )

•1780 – ಭಾರತದ ಮೊದಲ ಪತ್ರಿಕೆ “ದಿ ಬೆಂಗಾಲ್ ಗೆಜೆಟ್” ಆರಂಭ

•1878 – ದೇಶೀಯ ಪತ್ರಿಕೆಗಳ ನಿಯಂತ್ರಣ ಕಾಯ್ದೆ ಜಾರಿಗೆ

•1885 – ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆ ( ಎ ಓ ಹ್ಯೂಮ್ ರಿಂದ )

•1905 – ಬಂಗಾಳ ವಿಭಜನೆ

•1906 – ಮುಸ್ಲಿಂ ಲೀಗ್ ಸ್ಥಾಪನೆ

•1920-1947 – ಗಾಂಧೀಯುಗ

•1920  - ಅಸಹಕಾರ ಚಳುವಳಿ

•1924 – ಬೆಳಗಾವಿ ಕಾಂಗ್ರೆಸ್ ಅಧಿವೇಶನ ( ಗಾಂಧೀಜಿ ಅಧ್ಯಕ್ಷರಾಗಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ )

•1929 – ಲಾಹೋರ್ ಕಾಂಗ್ರೆಸ್ ಅಧಿವೇಶನ ( “ಸಂಪೂರ್ಣ ಸ್ವರಾಜ್ಯ ನಮ್ಮ ಗುರಿ” ಎಂದು ಘೋಷಣೆ )

•1930 – ಕಾನೂನು ಭಂಗ ಚಳುವಳಿ ( ದಂಡಿ ಸತ್ಯಾಗ್ರಹ )

•1930 ಮೊದಲ ದುಂಡು ಮೇಜಿನ ಅಧಿವೇಶನ

•1931 – ಎರಡನೆಯ ದುಂಡು ಮೇಜಿನ ಅಧಿವೇಶನ

•1932 – ಮೂರನೆಯ ದುಂಡು ಮೇಜಿನ ಅಧಿವೇಶನ

•1942 ಕ್ವಿಟ್ ಇಂಡಿಯಾ ಚಳುವಳಿ

•1947 – ಭಾರತ ಸ್ವಾತಂತ್ರ ಕಾಯ್ದೆ ( ಭಾರತಕ್ಕೆ ಸ್ವಾತಂತ್ರ )

•1948  - ಗಾಂಧೀಜಿ ಹತ್ಯೆ ( ಜನವರಿ 30 – ನಾಥೋರಾಮ್  ಗೂಡ್ಸೆಯಿಂದ )

•1950 – ಜನವರಿ 26- ಭಾರತ ಸಂವಿಧಾನ ಜಾರಿಗೆ

•1953 – ರಾಜ್ಯ ಪುನರ್ವಿಂಗಡನಾ ಆಯೋಗ ಸ್ಥಾಪನೆ ( ಅಧ್ಯಕ್ಷ : ಫಜಲ್ ಅಲಿ )

•1956 ನವೆಂಬರ್ 1 – ಮೈಸೂರು ರಾಜ್ಯ ಅಸ್ತಿತ್ವ

•1973 ನವೆಂಬರ್ 1 - ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ

•1914-18 – ಮೊದಲ ಮಹಾಯುದ್ಧ

•1917 – ರಷ್ಯಾ ಕ್ರಾಂತಿ

•1939-45 – ಎರಡನೆಯ ಮಹಾಯುದ್ಧ


        ರಾಜ್ಯಶಾಸ್ತ್ರ

•1956 – ಭಾಷಾವಾರು ಪ್ರಾಂತ್ಯಗಳ (ರಾಜ್ಯ) ರಚನೆ

•2001 – ಸರ್ವ ಶಿಕ್ಷಣ ಅಭಿಯಾನ ಆರಂಭ ( 6 ರಿಂದ 14 ವರ್ಷದ ಮಕ್ಕಳಿಗೆ ಶಿಕ್ಷಣ ಒದಗಿಸಲು )

•1988 – ರಾಷ್ಟ್ರೀಯ ಸಾಕ್ಷರತಾ ಮಿಷನ್ ಸ್ಥಾಪನೆ

•2009 – ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ

•1986 – ಲೋಕಾಯುಕ್ತ ಅದಿನಿಯಮ ಜಾರಿಗೆ

•1954 – ಪಂಚಶೀಲ ತತ್ವಗಳಿಗೆ ಸಹಿ ( ನೆಹರು ಮತ್ತು ಚೌ ಎನ್ ಲಾಯ್ )

•1948.ಡಿಸೆಂಬರ್ 10 – ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘೋಷಣೆ

•1945.ಅಕ್ಟೋಬರ್ 24 – ವಿಶ್ವಸಂಸ್ಥೆ ಸ್ಥಾಪನೆ

•1945 – ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆ

•1948 – ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪನೆ

•1946 – ಯುನೆಸ್ಕೋ ಸ್ಥಾಪನೆ

•1946 – ಯುನಿಸೆಫ್ ಸ್ಥಾಪನೆ

•1947 – ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಸ್ಥಾಪನೆ

•1992 – ಯೂರೋಪಿಯನ್ ಯೂನಿಯನ್ ಸ್ಥಾಪನೆ

•1967 ಆಸಿಯನ್ ಸ್ಥಾಪನೆ

•1963 ಆಫ್ರಿಕನ್ ಒಕ್ಕೂಟ ಸ್ಥಾಪನೆ.


      ಸಮಾಜಶಾಸ್ತ್ರ

•1955 – ಅಸ್ಪೃಶ್ಯತಾ ಅಪರಾಧಗಳ ಕಾಯ್ದೆ ಜಾರಿಗೆ

•1976 ನಾಗರಿಕ ಹಕ್ಕುಗಳ ಸಂರಕ್ಷಣಾ ಕಾಯ್ದೆ ಜಾರಿಗೆ

•1989 (ಕಾಯ್ದೆ) -  ಅಸ್ಪೃಶ್ಯತೆಯ ನಿರ್ಮೂಲನೆ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿದೆ

•1986 – ಬಾಲಕಾರ್ಮಿಕ ನಿಷೇಧ ಮತ್ತು ನಿಯಣತ್ರಣ ಕಾಯ್ದೆ ಜಾರಿಗೆ ( 20000 ರೂ ದಂಡ )

•1988 – ರಾಷ್ಟ್ಟೀಯ ಬಾಲಕಾರ್ಮಿಕ ಯೋಜನೆ ಜಾರಿಗೆ

•2006 – ಬಾಲಶ್ರಮ ನಿರ್ಮೂಲನ ಮತ್ತು ಪುನರ್ವಸತೀಕರಣ ಕಾಯ್ದೆ ಜಾರಿಗೆ

•1961 – ವರದಕ್ಷಿಣೆ ನಿಷೇದ ಕಾಯ್ದೆ  ( 1986 ರಲ್ಲಿ ತಿದ್ದುಪಡಿ )

•1994 – ಪ್ರಸವ ಪೂರ್ವ ಲಿಂಗ ಪರೀಕ್ಷೆ ಪ್ರಯಿಬಂಧಕ ಕಾಯ್ದೆ ಜಾರಿಗೆ.


        ಅರ್ಥಶಾಸ್ತ್ರ

•1950 – ಭಾರತದ ಯೋಜನಾ ಆಯೋಗ ಸ್ಥಾಪನೆ ( ಈಗ ನೀತಿ ಆಯೋಗ ಎಂದು ಕರೆಯಲಾಗುತ್ತದೆ )

•1952 – ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸ್ಥಾಪನೆ (ಪಂಚವಾರ್ಷಿಕ ಯೋಜನೆಗಳಿಗೆ ಅನುಮೋದನೆ ನೀಡುತ್ತದೆ )

•1951.ಏಪ್ರಿಲ್ 1 – ಮೊದಲ ಪಂಚವಾರ್ಷಿಕ ಯೋಜನೆ ಆರಂಭ

•1995.ಜನವರಿ 1 – ವಿಶ್ವ ವ್ಯಾಪಾರ ಸಂಘಟನೆ ಅಸ್ತಿತ್ವಕ್ಕೆ ಬಂದಿತು.

logoblog

Thanks for reading 10 ನೇ ತರಗತಿ ಪಠ್ಯಪುಸ್ತಕದಲ್ಲಿ ಬರುವ ಪ್ರಮುಖ ಇಸ್ವಿಗಳು

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *