ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 ಲಲಿತಕಲಾ ಪ್ರಶಸ್ತಿ ಪ್ರದಾನ | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Saturday, October 06, 2018

ಲಲಿತಕಲಾ ಪ್ರಶಸ್ತಿ ಪ್ರದಾನ

  Pundalik       Saturday, October 06, 2018

ಸಾಹಿತಿ ಚಂದ್ರಶೇಖರ ಕಂಬಾರ ಅವರು ಕಲಾವಿದರಾದ ಎಸ್.ಎಂ ಜಂಬುಕೇಶ್ವರ, ಉಪಾಧ್ಯಾಯ ಮೂಡುಬೆಳ್ಳೆ, ಮತ್ತು ಮಧು ದೇಸಾಯಿ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ ನೀಡುವ ಗೌರವ ಪ್ರಶಸ್ತಿ ಪ್ರದಾನ ಮಾಡಿದರು. (ಎಡದಿಂದ) ಅಕಾಡೆಮಿ ಸದಸ್ಯ ಡಿ.ಅಭಿಲಾಷ್ , ರಿಜಿಸ್ಟ್ರಾರ್ ಎಚ್‌.ವಿ.ಇಂದ್ರಮ್ಮ, ದಿ ಐಡಿಯಲ್ ಫೈನ್ ಆರ್ಟ್ ಸೊಸೈಟಿಯ ಕಾರ್ಯದರ್ಶಿ ಡಾ.ವಿ.ಜಿ ಅಂದಾನಿ ಮತ್ತು ಅಕಾಡೆಮಿ ಅಧ್ಯಕ್ಷೆ ಪ್ರೊ.ಎಂ.ಜೆ ಕಮಲಾಕ್ಷಿ ಇದ್ದಾರೆ --–ಪ್ರಜಾವಾಣಿ ಚಿತ್ರ

ಪ್ರಜಾವಾಣಿ ವಾರ್ತೆ
ಬೆಂಗಳೂರು: ಕಲಾವಿದ ರಾದ ಧಾರವಾಡದ ಮಧು ದೇಸಾಯಿ, ಮೈಸೂರಿನ ಎಸ್‌.ಎಂ.ಜಂಬುಕೇಶ್ವರ, ಉಡುಪಿಯ ಉಪಾಧ್ಯಾಯ ಮೂಡು
ಬೆಳ್ಳೆ ಅವರಿಗೆ 2018ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ನಗರದ ರವೀಂದ್ರ ಕಲಾಕ್ಷೇತ್ರ
ದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಚಂದ್ರಶೇಖರ ಕಂಬಾರ ಅವರು ಪ್ರಶಸ್ತಿ ನೀಡಿ ಗೌರವಿಸಿದರು.
47ನೇ ವಾರ್ಷಿಕ ಕಲಾಪ್ರದರ್ಶನ ಬಹುಮಾನವನ್ನು ಬಾಗಲಕೋಟೆಯ ಇಂದ್ರಕುಮಾರ ಬಿ.ದಸ್ತೇನವರ, ಹಾವೇರಿಯ ಕರಿಯಪ್ಪ ಹಂಚಿನಮನಿ, ಬೆಳಗಾವಿಯ ಶಂಕರ ಬಿ.ಲೋಹಾರ, ಬೆಂಗಳೂರಿನ ಆರ್‌.ವೆಂಕಟರಾಮನ್‌, ಬಾಗೂರು ಮಾರ್ಕಾಂಡೇಯ, ಶಿವಮೊಗ್ಗದ ಕೋಟೆಗದ್ದೆ ಎಸ್‌.ರವಿ, ಕಲಬುರ್ಗಿಯ ಡಾ.ಸುಬ್ಬಯ್ಯ ಎಂ.ನೀಲಾ, ಶ್ರೀಶೈಲ ಗುಡೇದ, ಮಂಡ್ಯದ ವಿ.ಇ. ಅಕ್ಷಯ್‌ ಕುಮಾರ್‌, ಹುಬ್ಬಳ್ಳಿಯ ಗಣೇಶ ಎಸ್‌.ಸಾಬೋಜಿ ಅವರಿಗೆ ನೀಡಿ ಗೌರವಿಸಲಾಯಿತು.
ಗೌರವ ಪ್ರಶಸ್ತಿಗೆ ₹ 50 ಸಾವಿರ ಹಾಗೂ ಕಲಾಪ್ರದರ್ಶನ ಬಹುಮಾನ ಪಡೆದ ಹತ್ತು ಕಲಾವಿದರಿಗೆ ₹25 ಸಾವಿರ ನಗದು ಬಹುಮಾನ ನೀಡಲಾಯಿತು.
ಚಂದ್ರಶೇಖರ ಕಂಬಾರ ಮಾತನಾಡಿ, ‘ಚಿತ್ರಗಳನ್ನು ನೋಡಿ ಕೂಡ ನಾನು ಪದ್ಯ ಬರೆದಿದ್ದೇನೆ. ಎಲ್ಲಾ ಪ್ರಕಾರದ ಕಲೆಗೂ ಒಂದೇ ರೀತಿಯ ಮನ್ನಣೆ ಸಿಗಬೇಕು. ಬ್ರಿಟಿಷರು ಭಾರತಕ್ಕೆ ಬರುವ ಮೊದಲು ಇದೇ ವ್ಯವಸ್ಥೆ ಇತ್ತು. ಆದರೆ ಆ ನಂತರ ಕಲೆ, ಸಾಹಿತ್ಯ ಬೇರೆ, ಬೇರೆ ಎನ್ನುವ ಮನಸ್ಥಿತಿ ಹುಟ್ಟಿಕೊಂಡಿದೆ’ ಎಂದು ಅವರು ಅಭಿಪ್ರಾಯಪಟ್ಟರು.
‘ಪ್ರಶಸ್ತಿ ಪಡೆದವರು ಚಿತ್ರಕಲೆಯ ಮೂಲಕ ಪ್ರೌಢಭಾಷೆಯನ್ನು ಬಳಸಿ
ದ್ದಾರೆ. ಕಲಾವಿದರ ಚಿತ್ರಗಳನ್ನು ನೋಡಿ
ದಾಗ ಆಶಾಭಾವನೆ ಮೂಡಿಬರುತ್ತದೆ’ ಎಂದರು.

logoblog

Thanks for reading ಲಲಿತಕಲಾ ಪ್ರಶಸ್ತಿ ಪ್ರದಾನ

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *