ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 ಹತ್ತಕ್ಕೂ ಹೆಚ್ಚು ಜಿಂಕೆ–ಕೃಷ್ಣಮೃಗ ಸಾವು | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Sunday, October 07, 2018

ಹತ್ತಕ್ಕೂ ಹೆಚ್ಚು ಜಿಂಕೆ–ಕೃಷ್ಣಮೃಗ ಸಾವು

  Pundalik       Sunday, October 07, 2018

ಬೆಟಗೇರಿ ಗ್ರಾಮದಲ್ಲಿ ನಡೆದ ಘಟನೆ: ಪ್ರಾಣಿಪ್ರಿಯರ ಬೇಸರ


ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ಕೃಷ್ಣಮೃಗದ ಮೃತದೇಹ ಶನಿವಾರ ಕಂಡು ಬಂದಿತು –ಪ್ರಜಾವಾಣಿ ಚಿತ್ರ/ಭರತ್ ಕಂದಕೂರ
ಸಿದ್ದನಗೌಡ ಪಾಟೀಲ
ಕೊಪ್ಪಳ: ತಾಲ್ಲೂಕಿನ ಬೆಟಗೇರಿ ಹಾಗೂ ಅಳವಂಡಿ ಗ್ರಾಮಗಳಲ್ಲಿ ಮೂರು ದಿನಗಳಲ್ಲಿ ಹತ್ತಕ್ಕೂ ಹೆಚ್ಚು ಜಿಂಕೆ ಹಾಗೂ ಕೃಷ್ಣಮೃಗಗಳು ಮೃತಪಟ್ಟಿವೆ.
ಸೈನಿಕಹುಳು ರೋಗ ನಿಯಂತ್ರಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಔಷಧಿ ಸಿಂಪರಣೆ ಮಾಡಿದ್ದ ಬೆಳೆ ಹಾಗೂ ಮೆಕ್ಕೆಜೋಳದ ಎಳೆಸುಳಿ ತಿಂದು ಈ ಪ್ರಾಣಿಗಳು ಮೃತಪಟ್ಟಿವೆ ಎನ್ನಲಾಗುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ಶನಿವಾರ ಮತ್ತೆರೆಡು ಕೃಷ್ಣಮೃಗಗಳ ಮೃತದೇಹ ಪತ್ತೆಯಾಗಿದ್ದು, ಕಣ್ಣುಗುಡ್ಡೆಗಳು ಹೊರಗೆ ಬಿದ್ದಿದ್ದು, ದೇಹಗಳು ಊದಿಕೊಂಡಿವೆ. ಜಿಂಕೆಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಜಿಲ್ಲಾ ಅರಣ್ಯ ಅಧಿಕಾರಿ ಯಶಪಾಲ್ ಕ್ಷೀರಸಾಗರ ಅವರನ್ನು ಸಂಪರ್ಕಿಸಿದಾಗ 'ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ' ಎಂದು ಹೇಳಿದರು.
‘ಈ ಭಾಗದಲ್ಲಿ ಜಿಂಕೆ–ಕೃಷ್ಣಮೃಗಗಳ ಹಾವಳಿ ಮಿತಿ ಮೀರಿದ್ದು, ಅಲ್ಪ ಮಳೆ
ಯಲ್ಲಿಯೇ ರೈತರು ಬೆಳೆದಿದ್ದ ಮೆಕ್ಕೆ
ಜೋಳ, ಶೇಂಗಾ ಮುಂತಾದ ಬೆಳೆಗಳನ್ನು ತಿಂದು ಹಾಳು ಮಾಡಿವೆ. ಯಾರೋ ಬೆಳೆಗಳಿಗೆ ಹೆಚ್ಚಿನ ಪ್ರಮಾಣದ ರಾಸಾಯನಿಕ ಮಿಶ್ರಣ ಮಾಡಿದ್ದರಿಂದ ಈ ರೀತಿ ಸತ್ತಿವೆ’ ಎಂದು ರೈತ ವಿರೂಪಾಕ್ಷಪ್ಪ 
ಅವರು ತಿಳಿಸಿದರು.
ಗ್ರಾಮಕ್ಕೆ ಭೇಟಿ ನೀಡಿದಾಗ ರಾಸಾಯನಿಕ ಸಿಂಪರಣೆ ಮಾಡಿದ ಹೊಲಗಳ ವ್ಯಾಪ್ತಿಯಲ್ಲಿ ಇವು ಸತ್ತು ಬಿದ್ದಿದ್ದು, ರೈತರ ಸಂಶಯಕ್ಕೆ ಪುಷ್ಟಿ ನೀಡಿದೆ. ಎಲ್ಲ ರೀತಿಯಿಂದಲೂ ತನಿಖೆ ನಡೆಸುತ್ತಿರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನರಿ, ತೋಳ, ಕತ್ತೆ ಕಿರುಬಗಳ ಉಗುರಿನ ಗುರುತು ಸತ್ತ ಪ್ರಾಣಿಗಳ ಮೇಲೆ ಕಂಡು ಬಂದಿದೆ. ವಿಷಪ್ರಾಶನವಾಗಿದೆಯೇ ಎಂಬ ನಿಟ್ಟಿನಲ್ಲಿಯೂ ತನಿಖೆ ನಡೆಸಲಾಗುತ್ತದೆ ಯಶಪಾಲ್ ಕ್ಷೀರಸಾಗ, 
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ, ಕೊಪ್ಪಳ
logoblog

Thanks for reading ಹತ್ತಕ್ಕೂ ಹೆಚ್ಚು ಜಿಂಕೆ–ಕೃಷ್ಣಮೃಗ ಸಾವು

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *