ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 2014 ವಿದ್ಯಮಾನ– ಮಾಹಿತಿ | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Thursday, March 05, 2015

2014 ವಿದ್ಯಮಾನ– ಮಾಹಿತಿ

  Pundalik       Thursday, March 05, 2015
* ಭಾರತ ಸರ್ಕಾರ ಪ್ರತಿ ವರ್ಷ ಜನವರಿಯಲ್ಲಿ (7ರಿಂದ 9ರವರೆಗೆ) ‘ಪ್ರವಾಸಿ ಭಾರತೀಯ ದಿವಸ’ವನ್ನು ಆಚರಿಸುತ್ತದೆ. ಇದನ್ನು ‘ಅನಿವಾಸಿ ಭಾರತೀಯರ ದಿವಸ’ ಎಂದು ಸಹ ಕರೆಯಲಾಗುತ್ತದೆ. ವಿಶ್ವದ ನಾನಾ ಭಾಗಗಳಲ್ಲಿ ನೆಲೆಸಿರುವ ಭಾರತೀಯರು ಭಾಗವಹಿಸುತ್ತಾರೆ. ದೇಶದ ಸಂಸ್ಕೃತಿ, ಬಂಡವಾಳ ಹೂಡಿಕೆ, ಶಿಕ್ಷಣ, ಪ್ರವಾಸೋಧ್ಯಮ ಕುರಿತಂತೆ ಈ ಸಮಾವೇಶದಲ್ಲಿ ಚರ್ಚಿಸಲಾಗುವುದು. 2003ರಲ್ಲಿ ಮೊದಲ ಪ್ರವಾಸಿ ಭಾರತೀಯ ದಿವಸವನ್ನು ಆಚರಿಸಲಾಯಿತು.

*80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2014ರ ಜನವರಿ 7, 8 ಮತ್ತು 9ರಂದು ಮಡಿಕೇರಿಯಲ್ಲಿ ನಡೆಯಿತು. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಾ.ಡಿಸೋಜ ಅವರು ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇದು ಮಡಿಕೇರಿಯಲ್ಲಿ ನಡೆದ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನವಾಗಿದೆ.

*ಸಂಪೂರ್ಣವಾಗಿ ಸ್ವದೇಶಿ ನಿರ್ಮಿತ ಕ್ರಯೋಜೆನಿಕ್‌ ಎಂಜಿನ್‌ ಅಭಿವೃದ್ಧಿಪಡಿಸುವ ಮೂಲಕ ಭಾರತವು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಹೊಸ ದಾಖಲೆ ಬರೆದಿದೆ. ಈ ರಾಕೆಟ್‌ ಮೂಲಕ ಜನವರಿ 5ರಂದು ಜಿಎಸ್‌ಎಲ್‌ವಿ–ಡಿ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಕ್ರಯೋಜಿನಿಕ್‌ ತಂತ್ರಜ್ಞಾನದಲ್ಲಿ ತಂಪಾಗಿರುವ ದ್ರವ ಇಂಧನ (cold liquid fuel) ಬಳಸಲಾಗುತ್ತದೆ. ಇದರಿಂದ ಭಾರೀ ತೂಕದ ಉಪಕರಣಗಳನ್ನು ಬ್ಯಾಹ್ಯಾಕಾಶಕ್ಕೆ ಸುಲಭವಾಗಿ ರವಾನಿಸಬಹುದು.

*ಭಾರತದಲ್ಲಿ ಬಾರೀ ಸಂಚಲನ ಉಂಟುಮಾಡಿದ್ದ ಜನ ಲೋಕಪಾಲ ಮಸೂದೆಗೆ ಜನವರಿ 1ರಂದು ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅಂಕಿತ ಹಾಕಿದರು. ಜನ ಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಅವರು ಹೋರಾಟ ನಡೆಸಿದ್ದರು. 1968ರಿಂದ 2001ರ ನಡುವೆ ವಿವಿಧ ಸರ್ಕಾರಗಳು ಲೋಕಪಾಲ ಮಸೂದೆಯನ್ನು 8 ಸಲ ಮಂಡನೆ ಮಾಡಿದ್ದವು ಆದರೆ ಈ ಮಸೂದೆ ಅಂಗೀಕಾರ ಪಡೆದಿರಲಿಲ್ಲ.

*ಜೈಪುರ ಸಾಹಿತ್ಯ ಉತ್ಸವ ಜನವರಿ 17 ರಿಂದ 21ರವರೆಗೆ ಜೈಪುರದಲ್ಲಿ ನಡೆಯಿತು. ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್‌ ಈ ಸಾಹಿತ್ಯ ಉತ್ಸವವನ್ನು ಉದ್ಘಾಟಿಸಿದರು. ಈ ಉತ್ಸವದಲ್ಲಿ ಸೈರಸ್‌ ಮಿಸ್ತ್ರಿ ಅವರು ಬರೆದ ‘ಕ್ರಾನಿಕಲ್‌ ಆಫ್‌ ಎ ಕಾರ್ಫ್‌ ಬೇರರ್‌ (ಅನುವಾದಿತ) ಕೃತಿ 30 ಲಕ್ಷ ರೂಪಾಯಿ ಬಹುಮಾನ ಪಡೆಯಿತು.

*ಮಿ.ಸೆಕ್ಯೂರಿಟಿ ಎಂದೇ ಗುರುತಿಸಿಕೊಂಡಿದ್ದ ಇಸ್ರೇಲ್‌ನ ಮಾಜಿ ಪ್ರಧಾನಿ ಏರಿಯಲ್‌ ಶೆರೂನ್‌ (82)  ಜನವರಿ 11ರಂದು ನಿಧನರಾದರು. ಶೆರೂನ್‌ ಲೆಬನಾನ್‌ ಮತ್ತು ಇಸ್ರೇಲ್‌ ದೇಶಗಳ ಮೇಲೆ ದಾಳಿ ಮಾಡಿದ್ದರು. ಅವರು ಎಂಟು ತಿಂಗಳಿನಿಂದ ಕೋಮಾದಲ್ಲಿದ್ದರು.

*ಜನವರಿ 7ರಂದು ಭಾರತದ ಅತಿ ದೊಡ್ಡ ವಿಮಾನ ವಾಹಕ ನೌಕೆ ‘ಐಎನ್‌ಎಸ್‌ ವಿಕ್ರಮಾದಿತ್ಯ’ ಕಾರವಾರ ಬಂದರು ನೆಲೆಗೆ ಬಂದಿತು. ರಷ್ಯಾ ನಿರ್ಮಾಣದ ಈ ನೌಕೆಯನ್ನು ಭಾರತ ಸರ್ಕಾರ 14,260 ಕೋಟಿ ರೂಪಾಯಿ ನೀಡಿ ಖರೀದಿಸಿದೆ. ಸ್ವದೇಶಿ ನಿರ್ಮಿತ ಇಂತಹದ್ದೇ ನೌಕೆ ಕೊಚ್ಚಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು ಅದು 2018ರ ವೇಳೆಗೆ ನೌಕಪಡೆಗೆ ಸೇರಲಿದೆ.

*ರಾಜ್ಯದ ಖ್ಯಾತ ಪಕ್ಷಿ ತಜ್ಞ ಮತ್ತು ಪರಿಸರ ಹೋರಾಟಗಾರ ಡಾ.ಜೆಮ್ಸ್‌ ಚೆನ್ನಪ್ಪ ಉತ್ತಂಗಿ (98) ಅವರು ಜನವರಿ *ರಂದು ನಿಧನರಾದರು. ಇವರು ಪಕ್ಷಿಗಳು ಮತ್ತು ಪರಿಸರ ಕುರಿತಂತೆ ಹಲವಾರು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ಉತ್ತರ ಕರ್ನಾಟಕ ಮತ್ತು ‘ಉತ್ತರ ಗುಜರಾತಿನ ಕಪ್ಪೆಗಳು’, ‘ಅವಿಭಜಿತ ಧಾರವಾಡ ಜಿಲ್ಲೆಯಲ್ಲಿನ ಪಕ್ಷಿಗಳು’ ಪ್ರಮುಖ ಸಂಶೋಧನಾ ಪ್ರಬಂಧಗಳು. ಇವರು ಸಾಹಿತಿ ಉತ್ತಂಗಿ ಚೆನ್ನಪ್ಪ ಅವರ ಮಗ.

*ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳನ್ನು 127 ಸಾಧಕರಿಗೆ ನೀಡಲಾಗಿದೆ. ಪದ್ಮ ಪ್ರಶಸ್ತಿಗಳಲ್ಲಿ 101 ಪದ್ಮ ಪ್ರಶಸ್ತಿ, 24  ಪದ್ಮಭೂಷಣ ಮತ್ತು ಎರಡು ಪದ್ಮವಿಭೂಷಣ ಪ್ರಶಸ್ತಿಗಳು ಸೇರಿವೆ. ಪ್ರಸೂತಿ ತಜ್ಞೆ ಕಾಮಿನಿ ರಾವ್‌, ಯೋಗ ಗುರು ಬಿ.ಕೆ.ಎಸ್‌ ಅಯ್ಯಂಗಾರ್‌ ಅವರು ಸೇರಿದಂತೆ ರಾಜ್ಯದ ಏಳು ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲಾಗಿದೆ.

*ಜನವರಿಯಲ್ಲಿ ನಡೆದ ‘2014ರ ಆಸ್ಟ್ರೇಲಿಯನ್‌ ಓಪನ್‌ ಟೂರ್ನಿಯಲ್ಲಿ ಚೀನಾದ ಲೀ ನಾ (ಮಹಿಳೆಯರ), ಸ್ವಿಟ್ಜರ್‌ಲೆಂಡ್‌ನ ಸ್ಟಾನಿಸ್ಲಾಸ್‌ ವಾವ್ರಿಂಕ್‌ (ಪುರುಷರ) ಸಿಂಗಲ್ಸ್‌ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡರು. ಲೀ ನಾ 16.69 ಕೋಟಿ ರೂಪಾಯಿ ಮತ್ತು ವಾವ್ರಿಂಕಾ 14.57 ಕೋಟಿ ರೂಪಾಯಿ ಬಹುಮಾನ ಗೆದ್ದರು. ಇದೇ ಟೂರ್ನಿಯ ಮಿಶ್ರ ಡಬಲ್ಸ್‌ ಫೈನಲ್‌ ಪಂದ್ಯದಲ್ಲಿ ಭಾರತದ ಸಾನಿಯಾ ಮಿರ್ಜಾ ಮತ್ತು ರುಮೇನಿಯಾದ ಹೊರಿಯ ಟಿಕಾವ್‌ ಅವರು ಪರಾಭವಗೊಂಡರು.

*ಜಪಾನ್‌ ಪ್ರಧಾನಿ ಶಿಂಜೋ ಅಬೆ ಅವರು ಭಾರತದ 65ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಮುಖ ಎಂಟು ಒಪ್ಪಂದಗಳಿಗೆ ಉಭಯ ದೇಶಗಳು ಸಹಿ ಹಾಕಿದವು. 2013ರ ಡಿಸೆಂಬರ್‌ ತಿಂಗಳಲ್ಲಿ ಜಪಾನ್‌ ರಾಜ ಅಕಿ ಹಿಟೊ ಅವರು ಭಾರತಕ್ಕೆ ಭೇಟಿ ನೀಡಿದ್ದರು.

*ಯಾವುದೇ ಕಾರಣಗಳಿಲ್ಲದೆ ರಾಷ್ಟ್ರಪತಿ ಕ್ಷಮಾದಾನ ಅರ್ಜಿಯನ್ನು ಇತ್ಯರ್ಥ ಪಡಿಸಲು ವಿಳಂಬ ಮಾಡಿದರೆ ಅಂತಹ ಅಪರಾಧಿಗಳ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಬಹುದು ಎಂದು ಸುಪ್ರೀಂ ಕೋರ್ಟ್‌ ಜನವರಿ 21ರಂದು ಮಹತ್ವದ ತೀರ್ಪು ಪ್ರಕಟಿಸಿತು.

*ರಾಜ್ಯ ಸರ್ಕಾರ ಜನವರಿ 22ರಂದು ‘ಕನ್ನಡ ಯೂನಿಕೋಡ್‌’ ಅನ್ನು ಬಿಡುಗಡೆ ಮಾಡಿತು. ಇದನ್ನು ಹಾಸನದ ಮಾರುತಿ ತಂತ್ರಾಂಶ ಸಂಸ್ಥೆ ಅಭಿವೃದ್ಧಿಪಡಿಸಿದೆ. ಇದರಲ್ಲಿ 12 ಬಗೆಯ ಅಕ್ಷರ ವಿನ್ಯಾಸಗಳು, 12 ಪರಿವರ್ತಕಗಳು ಸೇರಿದಂತೆ ಮೊಬೈಲ್‌ ಮತ್ತು ಬ್ರೈಲ್‌ ಲಿಪಿ ಅಪ್ಲಿಕೇಶಗಳು ಸೇರಿವೆ.

*ರಾಜ್ಯ ಸರ್ಕಾರ ಜನವರಿಯಲ್ಲಿ ‘ಜ್ಯೋತಿ ಸಂಜೀವಿನಿ’ ಎಂಬ ಹೊಸ ಯೋಜನೆಯನ್ನು ಪರಿಚಯಿಸಿತು. ಈ ಆರೋಗ್ಯ ಯೋಜನೆಯನ್ನು ಸರ್ಕಾರಿ ನೌಕರರು ಮಾತ್ರ ಪಡೆಯಬಹುದು. ಇದರ ಅನ್ವಯ ನೌಕರರ ಅಥವಾ ಅವರ ಕುಟುಂಬದವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

*ರಾಷ್ಟ್ರೀಯ ಪೊಲೀಸ್‌ ಅಕಾಡೆಮಿಯ ಮೊದಲ ಮಹಿಳಾ ಮುಖ್ಯಸ್ಥರಾಗಿ ಅರುಣಾ ಬಹುಗುಣ ನೇಮಕ­ಗೊಂಡಿದ್ದಾರೆ. ಇವರು ಆಂಧ್ರ ಪ್ರದೇಶದ 1979ರ ಐಪಿಎಸ್‌  ಬ್ಯಾಚ್‌ನ  ಅಧಿಕಾರಿ.

ಫೆಬ್ರುವರಿ ತಿಂಗಳ 

*ಭಾರತೀಯ ಮೂಲದ ಸತ್ಯ ನಾದೆಲ್ಲಾ ಅವರು ಮೈಕ್ರೋ ಸಾಫ್ಟ್‌ ಕಂಪೆನಿಯ ಸಿಇಒ ಆಗಿ ಫೆಬ್ರುವರಿ ನಾಲ್ಕರಂದು ನೇಮಕಗೊಂಡರು.

*ಫೆ. 4ರಂದು ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಮತ್ತು ರಾಜ್ಯದ ವಿಜ್ಞಾನಿ ಸಿ.ಎನ್‌.ಆರ್‌ ರಾವ್‌ ಅವರಿಗೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು  ಭಾರತ ರತ್ನ ಪ್ರಶಸ್ತಿ ನೀಡಿದರು.

*ಭಾರತದ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಅವರು 26ರಂದು ‘ಅಂಬೇಡ್ಕರ್‌ ಅವೆಕಿಂಗ್‌ ಇಂಡಿಯಾಸ್‌ ಸೋಶಿಯಲ್‌ ಕಾನ್ಸಿಯೆನ್ಸ್‌ (Ambedkar Awakening India’s Social Conscience) ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದರು.

ಇದನ್ನು ನರೇಂದ್ರ ಜಾಧವ್‌ ಬರೆದಿದ್ದಾರೆ. ನರೇಂದ್ರ ಜಾಧವ್‌ ಯೋಜನಾ ಆಯೋಗದ ಸದಸ್ಯರು ಹೌದು.
*2014ರ ರಾಷ್ಟ್ರೀಯ ಬಿಲಿಯರ್ಡ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಅಲೋಕ್‌ ಕುಮಾರ್‌ ಅವರನ್ನು ಮಣಿಸಿದ ಸೌರವ್‌ ಕೋಠಾರಿ ಚಾಂಪಿಯನ್‌ ಆದರು. ಈ ಪಂದ್ಯಾವಳಿಯನ್ನು ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಆಯೋಜಿಸಲಾಗಿತ್ತು.

‌*ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮಂಡಳಿ (ಎನ್‌ಜಿಟಿ)ಯು ಸಾರ್ವಜನಿಕ ಸ್ಥಳಗಳಲ್ಲಿ ಟೈರ್‌ ಸುಡುವುದನ್ನು ನೀಷೇಧಿಸಿ ಫೆಬ್ರುವರಿ 7ರಂದು ಮಹತ್ವದ ಆದೇಶವನ್ನು ಹೊರಡಿಸಿತು.

*ಸ್ಪೇನ್‌ ದೇಶದ ಹೆಸರಾಂತ ಗೀಟಾರ್‌ ವಾದಕ ಪಾಕೊ ಡೆ ಲೂಸಿಯಾ (66) ಫೆ. 25ರಂದು ನಿಧನರಾದರು. ತಮ್ಮ ಹದಿನೆಂಟನೆ ವಯಸ್ಸಿನಲ್ಲಿ ಮ್ಯಾಡ್ರಿಡ್‌ ಎಂಬ ಸಂಗೀತ ಆಲ್ಬಂ ಹೊರತರುವ ಮೂಲಕ ವಿಶ್ವದ ಗಮನ ಸೆಳೆದಿದ್ದರು. 2004 ಮತ್ತು 2012 ರಲ್ಲಿ ಲ್ಯಾಟಿನ್‌ ಗ್ರ್ಯಾಮಿ ಪ್ರಶಸ್ತಿ  ಪಡೆದಿದ್ದರು.

*ಮಧ್ಯಪ್ರದೇಶದಲ್ಲಿ ದೇಶದ ಅತಿದೊಡ್ಡ 130 ಮೆಗಾ ವ್ಯಾಟ್‌ನ ಸೌರ ವಿದ್ಯುತ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗಿದೆ.  ಇದು  ನೀಮುಚ್‌ ಪ್ರದೇಶದ ಭಗವಾನ್‌ ಪುರದಲ್ಲಿದೆ. 1100 ಕೋಟಿ ರೂಪಾಯಿ ವೆಚ್ಚದ ಈ ಘಟಕ 305 ಹೆಕ್ಟೇರ್‌ ಪ್ರದೇಶದಲ್ಲಿದೆ.

*ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಫೆಬ್ರುವರಿ 12ರಂದು 2014–15ನೇ ಸಾಲಿನ ಮಧ್ಯಂತರ ರೈಲ್ವೆ ಬಜೆಟ್‌ ಮಂಡಿಸಿದರು.

*64ನೇ ಬರ್ಲಿನ್‌ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅವಿನಾಶ್‌ ಅರುಣ್‌ ನಿರ್ದೇಶನದ ‘ಕಿಲ್ಲಾ’ ಮರಾಠಿ ಸಿನಿಮಾ ‘ಕ್ರಿಸ್ಟಿಯಲ್‌ ಬಿಯರ್‌’ ಪ್ರಶಸ್ತಿಗೆ ಭಾಜನವಾಯಿತು.

*ಫೆ. 14ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ರಾಜೀನಾಮೆ ನೀಡಿದರು. ಜನಲೋಕಪಾಲ್‌ ಮಸೂದೆಯನ್ನು ಅಂಗೀಕರಿಸಲು ವಿಫಲರಾದ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದರು. ಫೆಬ್ರುವರಿ 17ರಂದು ದೆಹಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿ ಮಾಡಲಾಯಿತು.

*ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ವಾಸವಿದ್ದ ಮನೆ ಮತ್ತು ಶಾಲೆ ನವೀಕರಣಕ್ಕೆ ಭಾರತ ಸರ್ಕಾರ 8 ಕೋಟಿ ರೂಪಾಯಿ ಬಿಡುಗಡೆ ಮಾಡಿತು. ಪಾಕಿಸ್ತಾನದ ಫೈಸಲಾಬಾದ್‌ ಜಿಲ್ಲೆಯ ಸಮೀಪದ ಕುಗ್ರಾಮದಲ್ಲಿ ಭಗತ್‌ ಸಿಂಗ್‌ ಮನೆ ಇದೆ. ಪಾಕಿಸ್ತಾನ ಸರ್ಕಾರ ಕೂಡ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿದೆ.

*ಬಿಸಿಸಿಸಿ (Broadcast Content Complaints Council)ನ ಮುಖ್ಯಸ್ಥರಾಗಿ ನ್ಯಾ. ಮುಕುಲ್‌ ಮುದ್ಗಲ್‌ ಅವರನ್ನು ಫೆಬ್ರುವರಿ 14ರಂದು ನೇಮಕ ಮಾಡಲಾಯಿತು. ಇವರು ಪಂಜಾಬ್‌ ಮತ್ತು ಹರಿಯಾಣ ರಾಜ್ಯದ ಮಾಜಿ ಮುಖ್ಯ ನ್ಯಾಯಮೂರ್ತಿಗಳು.

*ಫೆಬ್ರುವರಿ 15ರಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ‘ವಿನಾಯಕ ಡೋಂಗ್ರೆ ಮತ್ತು ಪ್ರೊ.ಗುಚೆಂಗ್‌ ಜಾಂಗ್‌ ಅವರಿಗೆ 2013ನೇ ಸಾಲಿನ ಅಂತರರಾಷ್ಟ್ರೀಯ ಗಾಂಧಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕುಷ್ಠ ರೋಗ ನಿವಾರಣೆಗಾಗಿ ಸಲ್ಲಿಸಿದ ಅಸಾಮಾನ್ಯ ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

*ಲಂಡನ್‌ನಲ್ಲಿ ಫೆಬ್ರುವರಿ 16ರಂದು 67ನೇ ಬಾಪ್ತಾ ಪ್ರಶಸ್ತಿಗಳನ್ನು ನೀಡಲಾಯಿತು. ಬಾಪ್ತಾ ಪ್ರಶಸ್ತಿಗಳನ್ನು ಬ್ರಿಟಿಷ್‌ ಅಕಾಡೆಮಿ   ಅತ್ಯುತ್ತಮ ಸಿನಿಮಾ ಮತ್ತು ಸಾಕ್ಷ್ಯ ಚಿತ್ರಗಳಿಗೆ ನೀಡುತ್ತದೆ. 2013ರಲ್ಲಿ ತೆರೆಕಂಡ 12 ಈಯರ್ಸ್‌ ಎ ಸ್ಲೇವ್‌ (12 Years a Slave) ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆಯಿತು.

*ಕೇಂದ್ರ ಸರ್ಕಾರ ಫೆಬ್ರುವರಿ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಡಿಯಾ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲು ತೀರ್ಮಾನಿಸಿತು. ಇಂಡೋ–ಆರ್ಯನ್‌ ಭಾಷಾ ಗುಂಪಿನಲ್ಲಿ ಒಡಿಯಾ ಮೊದಲ ಶಾಸ್ತ್ರೀಯ ಸ್ಥಾನಮಾನ ಪಡೆಯುವ ಭಾಷೆಯಾಗಿದೆ. ಒಡಿಯಾ ಒಡಿಶಾ ರಾಜ್ಯದ ಅಧಿಕೃತ ಆಡಳಿತ ಭಾಷೆಯಾಗಿದೆ.

*ಫೆ. 20ರಂದು ಲೋಕಸಭೆಯಲ್ಲಿ ಆಂಧ್ರಪ್ರದೇಶ ಇಬ್ಭಾಗ ಮಸೂದೆ–2014’ ಅನ್ನು ಅಂಗೀಕರಿಸಲಾಯಿತು.

*ಫೆ. 26ರಂದು ಸಿಕ್ಕಿಂ ವಿಧಾನಸಭೆಯು ಸಿಕ್ಕಿಂ ಲೋಕಾಯುಕ್ತ ಮಸೂದೆಯನ್ನು ಅವಿರೋಧವಾಗಿ ಅಂಗೀಕರಿಸಿತು.

*ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರು ಫೆ. 17ರಂದು ಮಧ್ಯಂತರ ಬಜೆಟ್‌ ಮಂಡಿಸಿದರು. ಈ ಬಜೆಟ್‌ ಕೇಂದ್ರದ 83ನೇ ಬಜೆಟ್‌ ಆಗಿದೆ.

*ದೆಹಲಿಯಲ್ಲಿ ನೆಲೆಸಿರುವ ಈಶಾನ್ಯ ರಾಜ್ಯಗಳ ಜನರಿಗಾಗಿ ದೆಹಲಿ ಪೊಲೀಸರು ಸಹಾಯವಾಣಿ (1093)ಯೊಂದನ್ನು ಆರಂಭಿಸಿದ್ದಾರೆ. ಜನಾಂಗೀಯ ನಿಂದನೆಯಂತಹ ದೂರಗಳನ್ನು ಈ ಸಹಾಯವಾಣಿಯ ಮೂಲಕ ದಾಖಲಿಸಬಹುದು.
*ಕರ್ನಾಟಕ ತಂಡ ಐದನೇ ಭಾರಿಗೆ ಇರಾನಿ ಕಪ್‌ ಟ್ರೋಫಿಯನ್ನು ಗೆದ್ದುಕೊಂಡಿತು. ಜೆಡ್‌. ಆರ್‌ ಇರಾನಿ ಅವರ ಸ್ಮರಣಾರ್ಥ ಇರಾನಿ ಕಪ್‌ ಕ್ರಿಕೆಟ್‌ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತದೆ. 1998ರಲ್ಲಿ ವೆಂಕಟೇಶ್‌ ಪ್ರಸಾದ್‌ ನೇತೃತ್ವದ ಕರ್ನಾಟಕ ಇರಾನಿ ಕಪ್‌ ಅನ್ನು ಗೆದ್ದು ಕೊಂಡಿತ್ತು.

*ಭಾರತೀಯ ನೌಕಾ ಪಡೆಯ ಮುಖ್ಯಸ್ಥರಾದ ದೇವೇಂದ್ರ ಕುಮಾರ್‌ ಜೋಶಿ ಅವರು 26ರಂದು ರಾಜೀನಾಮೆ ನೀಡಿದರು. ಮುಂಬೈನಲ್ಲಿ ಸಂಭವಿಸಿದ್ದ ಐಎನ್‌ಎಸ್‌ ಸಿಂಧೂರತ್ನ ಜಲಾಂತರ್ಗಾಮಿ ಅಪಘಾತ ದುರಂತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರು. ಸಿಂಧೂರತ್ನ ಜಲಾಂತರ್ಗಾಮಿಯನ್ನು ರಷ್ಯಾ ತಂತ್ರಜ್ಞಾನದೊಂದಿಗೆ ನಿರ್ಮಾಣ ಮಾಡಲಾಗಿತ್ತು.

*ಮಹೀಂದ್ರ ಅಂಡ್‌ ಮಹೀಂದ್ರ ಲಿಮಿಟೆಡ್‌ ಕಂಪೆನಿಯು ಫೆ.27ರಂದು ಭೂತಾನ್‌ ದೇಶದ ರಾಜಧಾನಿ ಥಿಂಪುವಿನಲ್ಲಿ ಎಲೆಕ್ಟ್ರಿಕ್‌ ಕಾರ್‌ ‘ಇ–20’ಯನ್ನು ಬಿಡುಗಡೆ ಮಾಡಿತು.

*ಪ್ರತ್ಯೇಕ ಬೋಡೊಲ್ಯಾಂಡ್‌ ರಾಜ್ಯ ರಚನೆ ಅಧ್ಯಯನಕ್ಕೆ ಕೇಂದ್ರ ಸರ್ಕಾರ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಜಿ.ಕೆ. ಪಿಳೈ ಅವರ ನೇತೃತ್ವದ ಏಕ ಸದಸ್ಯ ಸಮಿತಿಯನ್ನು ಫೆ. 27ರಂದು ಸಂವಿಧಾನ ಬದ್ಧವಾಗಿ ರಚನೆ ಮಾಡಿತು. ಪಿಳೈ ಅವರು 9 ತಿಂಗಳಲ್ಲಿ ರಾಜ್ಯ ರಚನೆ ಕುರಿತಂತೆ ವರದಿ ನೀಡಬೇಕಿದೆ. ಅಸ್ಸಾಂ ರಾಜ್ಯದಿಂದ ಬೋಡೋಲ್ಯಾಂಡ್‌ ಪ್ರತ್ಯೇಕವಾಗಲಿದೆ.





ಮಾ.1: ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಪ್ರತ್ಯೇಕ ತೆಲಂಗಾಣ ರಾಜ್ಯ ವಿಧೇಯಕಕ್ಕೆ ಸಹಿ ಹಾಕಿದರು.

ಮಾ. 2: 2014ನೇ ಸಾಲಿನ ಆಸ್ಕರ್‌ ಪ್ರಶಸ್ತಿಗಳನ್ನು ಪ್ರಕಟಿಸಲಾಯಿತು. ‘12 ಈಯರ್ಸ್‌ ಎ ಸ್ಲೇವ್‌ ಸ್ಟಿವ್‌ ಮ್ಯಾಕ್ವಿನ್‌’ ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ಪ್ರಶಸ್ತಿ ಪಡೆಯಿತು. ಈ ಚಿತ್ರ ಅಮೆರಿಕ ಇತಿಹಾಸದ ಮೇಲೆ ಬೆಳಕು ಚಲ್ಲುತ್ತದೆ.

ಮಾ. 3: ಎನ್‌ಡಿಎ ಸರ್ಕಾರದಲ್ಲಿ ಮಾಜಿ ವಿದೇಶಾಂಗ ಸಚಿವರಾಗಿದ್ದ ಜಸ್ವಂತ್‌ ಸಿಂಗ್‌ ಅವರ  ‘ಇಂಡಿಯಾ ಅಟ್‌ ರಿಸ್ಕ್‌’ (India at Risk – Mistakes, Misconceptions and Misadventures of security policy) ಪುಸ್ತಕ ಬಿಡುಗಡೆಯಾಯಿತು.

ಮಾ. 4; ಆಸಿಡ್‌ ದಾಳಿಗೆ ತುತ್ತಾಗಿದ್ದ ಭಾರತೀಯ ಮಹಿಳೆ ಲಕ್ಷ್ಮಿ ಅವರಿಗೆ ಅಮೆರಿಕದ ಪ್ರತಿಷ್ಠಿತ ಅಂತರರಾಷ್ಟ್ರೀಯ ಮಹಿಳಾ ಶೌರ್ಯ ಪ್ರಶಸ್ತಿ (International Women of Courage Award) ನೀಡಲಾಯಿತು.

ಮಾ. 4: ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಮ್ಯಾನ್ಮಾರ್‌ನಲ್ಲಿ ಶ್ರೀಲಂಕಾ ಅಧ್ಯಕ್ಷ ಮಹಿಂದ ರಾಜಪಕ್ಸೆ ಅವರನ್ನು ಭೇಟಿ ಮಾಡಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಮಾ. 5: ಭಾರತೀಯ ಚುನಾವಣಾ ಆಯೋಗ 16ನೇ ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟಿಸಿತು. ಏಪ್ರಿಲ್‌ 7ರಿಂದ ಮೇ 12ರವರೆಗೆ 9 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ,ಮತ ಎಣಿಕೆ ಮೇ 16ರಂದು ನಡೆಯಿತು. ಮೇ 31ಕ್ಕೆ 15ನೇ ಲೋಕಸಭೆ ಅವಧಿ ಮುಕ್ತಾಯವಾಯಿತು.

ಮಾ. 11: ಮಿಷೆಲ್‌ಬೆಕೆಲೆಟ್‌ ಅವರು ಎರಡನೇ ಬಾರಿ ಚಿಲಿಯ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು.

ಮಾ. 11: ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ಅವರು ಕೇರಳದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡರು. ಅವರಿಗೆ ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮಂಜುಳ ಚೆಲ್ಲೂರ್‌ ಪ್ರತಿಜ್ಞಾವಿಧಿ ಬೋಧಿಸಿದರು.

ಮಾ.13: ಆಧಾರ್‌ (Unique Identification Authority of India (UIDAI)ಗೆ ನಂದನ್‌ ನಿಲೇಕಣಿ ರಾಜೀನಾಮೆ ನೀಡಿದರು. ಅವರು 2014ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಲು ರಾಜೀನಾಮೆ ನೀಡಿದರು.

ಮಾ. 20: ದಕ್ಷಿಣ ಆಫ್ರಿಕಾ ಸರ್ಕಾರ ಅಲ್ಲಿನ ಕೆಲವು ಸರ್ಕಾರಿ ಶಾಲೆಗಳಲ್ಲಿ ಹಿಂದಿ, ತಮಿಳು, ತೆಲುಗು, ಉರ್ದು ಮತ್ತು ಗುಜರಾತಿ ಭಾಷೆಗಳನ್ನು ಬೋಧಿಸಲು ಸುತ್ತೋಲೆ ಹೊರಡಿಸಿತು.

ಮಾ. 20:  ಹಿರಿಯ ಪತ್ರಕರ್ತ ಖುಷ್ವಂತ್‌ ಸಿಂಗ್‌ ನಿಧನರಾದರು. ‘ಟ್ರೈನ್‌ ಟು ಪಾಕಿಸ್ತಾನ್‌’, ‘ಎ ಹಿಸ್ಟರಿ ಅಫ್‌ಸಿಖ್‌’ ಜನಪ್ರಿಯ ಪುಸ್ತಕಗಳು.

ಮಾ. 24: ಆಧಾರ್‌ ಗುರುತಿನ ಚೀಟಿಯನ್ನು ದೇಶದ ಪ್ರಜೆಗಳಿಗೆ ಕಡ್ಡಾಯಗೊಳಿಸದಿರಲು ಸುಪ್ರೀಂ ಕೋರ್ಟ್‌  ಕೇಂದ್ರ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತು. ನ್ಯಾ. ಬಿ.ಎಸ್‌. ಚೌಹಾಣ್‌ ಮತ್ತು ನ್ಯಾ. ಚಲಮೇಶ್ವರ್‌ ಈ ನಿರ್ದೆಶನ ನೀಡಿದರು.

ಮಾ.24: ಹಿಂದಿ ಸಾಹಿತಿ ಗೋವಿಂದ ಮಿಶ್ರಾ ಅವರಿಗೆ 2013ನೇ ಸಾಲಿನ ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಘೋಷಿಸಲಾಯಿತು. ಅವರ ‘ಧೂಲ್‌ ಪೌದೊಂಪರ್‌’ ಕೃತಿಗೆ ಈ ಪುರಸ್ಕಾರ ನೀಡಲಾಯಿತು. 10 ಲಕ್ಷ ರೂಪಾಯಿ ನಗದು ಮತ್ತು ಸ್ಮರಣಿಕೆಯ ಸರಸ್ವತಿ ಸಮ್ಮಾನ್‌ ಪ್ರಶಸ್ತಿಯನ್ನು ಬಿರ್ಲಾ ಫೌಂಡೇಶನ್‌ ನೀಡುತ್ತದೆ.

ಮಾ. 24: ಆಂಡಿ ಮಾರಿನೊ ಬರೆದ ‘ನರೇಂದ್ರ ಮೋದಿ: ಎ ಪೊಲಿಟಿಕಲ್‌ ಬಯೋಗ್ರಾಫಿ’ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. 2002ರ ಗೋಧ್ರ ಹತ್ಯಾಖಂಡದ ನೈಜ ಘಟನೆಗಳನ್ನು ಈ ಪುಸ್ತಕದಲ್ಲಿ ಮರೆಮಾಚಲಾಗಿದೆ ಎಂಬ ಆರೋಪಗಳು ಕೇಳಿಬಂದವು.

ಮಾ. 24: ಖ್ಯಾತ ಕ್ರೀಡಾಪಟು ಮಿಲ್ಕಾ ಸಿಂಗ್‌ ಅವರ ಜೀವನ ಚರಿತ್ರೆ ಆಧಾರಿತ ಬಾಲಿವುಡ್‌ ಸಿನಿಮಾ ಭಾಗ್‌ ಮಿಲ್ಕಾ ಭಾಗ್‌ 7ನೇ ಏಷ್ಯನ್‌ ಫಿಲಂ ಫೆಸ್ಟಿವಲ್‌ನಲ್ಲಿ ಪ್ರದರ್ಶನಗೊಂಡಿತು. ಈ ಸಿನಿಮಾ ಹಬ್ಬ ಸೌದಿ ಆರೇಬಿಯಾದಲ್ಲಿ ನಡೆಯಿತು.

ಮಾ. 24: ಮೂರನೇ ಅಂತರರಾಷ್ಟ್ರೀಯ ಪರಮಾಣು ಭದ್ರತಾ ಸಭೆ ನೆದರ್‌ಲ್ಯಾಂಡ್‌ನ ಹೇಗ್‌ನಲ್ಲಿ ನಡೆಯಿತು. ಈ ಸಭೆಯಲ್ಲಿ 58 ದೇಶಗಳು ಭಾಗವಹಿಸಿದ್ದವು.

ಮಾ. 25: ಜಮ್ಮು ಮತ್ತು ಕಾಶ್ಮೀರ ರಾಜ್ಯವು ಚುನಾವಣೆ ಮತಗಟ್ಟೆಗಳಿರುವ ಪ್ರದೇಶವನ್ನು ಧೂಮಪಾನ ನಿಷೇಧಿತ ವಲಯ ಎಂದು ಘೋಷಿಸುವ ಮೂಲಕ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

ಮಾ. 25: ಕೇಂದ್ರ ಆದಾಯ ಇಲಾಖೆಯ ಕಾರ್ಯದರ್ಶಿಯಾಗಿ ರಾಜೀವ್‌ ಠಾಕೂರ್‌ ನೇಮಕಗೊಂಡರು. ಸುಮೀತ್‌ ಬೋಸ್‌  ನಿವೃತ್ತರಾದ ಹಿನ್ನೆಲೆಯಲ್ಲಿ ರಾಜೀವ್‌ ನೇಮಕಗೊಂಡರು.

ಮಾ. 26: ಇತಿಹಾಸ ತಜ್ಞ ರಾಮಕೃಷ್ಣ ರೆಡ್ಡಿ ನೇತೃತ್ವದ ತಂಡ ಆಂಧ್ರ ಪ್ರದೇಶದ ಅಕ್ಕಂಪಲ್ಲಿ ಸಮೀಪದ ಗುಹೆಯಲ್ಲಿ ಏಳು ಸಾವಿರ ವರ್ಷಗಳ ಹಿಂದಿನ ಮಾನವನ ಪಳೆಯುಳಿಕೆ ಪತ್ತೆಹಚ್ಚಿತು.

ಮಾ. 27:  ಆಗ್ನೆಯ ಏಷ್ಯಾ ವಲಯದ 11 ದೇಶಗಳ ಪೈಕಿ ಭಾರತ ಮೊದಲ ಪೋಲಿಯೊ ಮುಕ್ತ ರಾಷ್ಟ್ರ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿತು.

ಮಾ.28: ಮಾಜಿ ಕ್ರಿಕೆಟಿಗ ಸುನೀಲ್‌ ಗಾವಸ್ಕರ್‌ ಬಿಸಿಸಿಐನ ಹಂಗಾಮಿ ಅಧ್ಯಕ್ಷರಾದರು.

ಮಾ. 28: ನಾರ್ವೆಯ ಜೆನ್ಸ್‌ ಸ್ಟೊಲೇಂಟ್‌ಬರ್ಗ್‌ ಅವರು ನ್ಯಾಟೊ (nato–North Atlantic Treaty Organisation)ದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡರು.

ಮಾ. 30: ಮರ್ಸಿಡಿಸ್‌ ತಂಡದ ಲೂಯಿಸ್‌ ಹ್ಯಾಮಿಲ್ಟನ್‌ 2014ರ ಮಲೇಷ್ಯಾ ಗ್ರ್ಯಾನ್‌ ಪ್ರಿ ಫಾರ್ಮುಲಾ ಒನ್‌ ರೇಸ್‌ ಗೆದ್ದುಕೊಂಡರು. ಮಲೇಷ್ಯಾದಸೆಪಾಂಗ್‌ ಇಂಟರ್‌ನ್ಯಾಷನಲ್‌ ಸರ್ಕಿಟ್‌ನಲ್ಲಿ ನಡೆದ 56 ಲ್ಯಾಪ್‌ಗಳ ಸ್ಪರ್ಧೆ (ಒಟ್ಟು 310 ಕಿ.ಮೀ. ದೂರ) ಪೂರೈಸಲು ಹ್ಯಾಮಿಲ್ಟನ್‌ ಒಂದು ಗಂಟೆ 40 ನಿಮಿಷ ಹಾಗೂ 25 ಸೆಕೆಂಡ್‌ಗಳನ್ನು ತೆಗೆದುಕೊಂಡರು.

ಮಾ. 31: ಸುಪ್ರೀಂ ಕೋರ್ಟ್‌ ದೇವೆಂದ್ರಪಾಲ್‌ ಸಿಂಗ್‌ ಬುಲ್ಲರ್‌ ಅವರ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿತು. ದಯಾ ಮರಣ ಅರ್ಜಿ ವಿಳಂಬ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವುದರಿಂದ ನ್ಯಾಯಾಪೀಠ ಈ ತೀರ್ಪು ನೀಡಿತು. ಬುಲ್ಲರ್‌ 1993ರ ದೆಹಲಿ ಬಾಂಬ್‌ ಸ್ಫೋಟ ಪ್ರಕರಣದ ಮುಖ್ಯ ಅಪರಾಧಿ. ಈ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದರು.



*ಏ. 1: ಅಮೆರಿಕದಲ್ಲಿರುವ ಭಾರತೀಯ ಮೂಲದ ಖ್ಯಾತ ಹೃದಯ ತಜ್ಞ ಡಾ. ಸುಮಿತ್‌ ಚೌಗ್‌ ಅವರಿಗೆ ಅಮೆರಿಕ ಸರ್ಕಾರದ ಪ್ರತಿಷ್ಠಿತ ‘ಸಿಮೊನ್‌ ಡಾಕ್‌’ ಪ್ರಶಸ್ತಿ ನೀಡಲಾಯಿತು. ಇದನ್ನು ಹೃದಯ ತಜ್ಞರಿಗೆ ಮಾತ್ರ ನೀಡಲಾಗುತ್ತದೆ.

*ಏ. 1: ಜಪಾನ್‌ ಸರ್ಕಾರ ಭಾರತದ ಮಹತ್ವದ 5 ಯೋಜನೆಗಳಿಗೆ 15000 ಕೋಟಿ ರೂಪಾಯಿ ಸಾಲ ಯೋಜನೆ ಪ್ರಕಟಿಸಿತು. ನೂತನ ಮತ್ತು ಪುನರ್‌ನವೀಕರಣ ಇಂಧನ ಅಭಿವೃದ್ಧಿ, ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಗಾತ್ರದ ಇಂಧನ ಘಟಕಗಳ ಸ್ಥಾಪನೆ, ಹರಿಯಾಣ ಮತ್ತು ದೆಹಲಿ ಸಾರಿಗೆ ಅಭಿವೃದ್ಧಿ ಯೋಜನೆಗಳು ಇದರಲ್ಲಿ ಸೇರಿವೆ.

*ಏ. 2: ಹಿರಿಯ ಐಎಎಸ್‌ ಅಧಿಕಾರಿ ಡಿ.ಕೆ. ಪಾಠಕ್‌ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌)ಯ ಮಹಾ ನಿರ್ದೆಶಕರಾಗಿ ನೇಮಕಗೊಂಡರು. ಇವರು ಅಸ್ಸೋಂ– ಮೇಘಾಲಯ ಕೇಡರ್‌ನ (1979 ಬ್ಯಾಚ್‌) ಐಪಿಎಸ್‌ ಅಧಿಕಾರಿ.

*ಏ. 3: ರಿಸರ್ವ್‌ ಬ್ಯಾಂಕ್‌ನ ಉಪ ಗೌರ್ನರ್‌ ಆಗಿ ಆರ್‌. ಗಾಂಧಿ ಅಧಿಕಾರ ಸ್ವೀಕರಿಸಿದರು. ಇನ್ನು ಮೂರು ವರ್ಷಗಳವರೆಗೆ ಇವರ ಅಧಿಕಾರ ಅವಧಿ ಇರಲಿದೆ.

ಆನಂದ್‌ ಸಿನ್ಹಾ ಅವರು ನಿವೃತ್ತರಾದ ಹಿನ್ನೆಲೆಯಲ್ಲಿ ಗಾಂಧಿ ಅವರನ್ನು ನೇಮಕ ಮಾಡಲಾಯಿತು.

*ಏ. 4: ಮಾಲ್ಟಾದ ಅಧ್ಯಕ್ಷರಾಗಿ ಮೇರಿ ಲೂಯಿಸ್‌ ಕೊಲೆರಿಯೊ ಪ್ರೆಕಾ ಪ್ರಮಾಣವಚನ ಸ್ವೀಕರಿಸಿದರು. ಕೊಲೆರಿಯೊ ಮಾಲ್ಟಾದ ಎರಡನೇ ಮಹಿಳಾ ಅಧ್ಯಕ್ಷರಾಗಿದ್ದಾರೆ. 1964ರಲ್ಲಿ ಬ್ರಿಟನ್‌ ದೇಶದಿಂದ ಮಾಲ್ಟಾ ಸ್ವಾತಂತ್ರ್ಯ ಪಡೆಯಿತು.   ಕೊಲೆರಿಯೊ ರಿಪಬ್ಲಿಕ್‌ ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿದ್ದಾರೆ.

*ಏ. 4: ಭಾರತೀಯ ಚುನಾವಣಾ ಆಯೋಗವು ಏ. 7ರಿಂದ ಮೇ 16ರವರೆಗೂ ಯಾವುದೇ ರೀತಿಯ ಚುನಾವಣಾ ಸಮೀಕ್ಷೆ ಪ್ರಕಟಿಸುವುದರ ಮೇಲೆ ನಿರ್ಬಂಧ ಹೇರಿತು.

*ಏ. 4: ಪುಲಿಟ್ಜರ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತೆ ಅಂಜಾ ನಿದ್ರೆಂಗಸ್‌ ಅವರು ಅಪ್ಘಾನಿಸ್ತಾನದಲ್ಲಿ ಪೊಲೀಸರ ಗುಂಡಿಗೆ ಬಲಿಯಾದರು. ಇವರು ಜರ್ಮನ್‌ ಪತ್ರಿಕೆಯ ವರದಿಗಾರ್ತಿಯಾಗಿದ್ದರು. ಇರಾಕ್‌ ಯುದ್ಧ ವರದಿಗಾರಿಕೆಯಿಂದ ಅಂಜಾ ವಿಶ್ವದ ಗಮನ ಸೆಳೆದಿದ್ದರು.

*ಏ. 6: ಬಾಂಗ್ಲಾದೇಶದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಶ್ರೀಲಂಕಾ ಭಾರತವನ್ನು ಮಣಿಸಿ ವಿಶ್ವಕಪ್‌ ಗೆದ್ದುಕೊಂಡಿತು.
    ಕುಮಾರ ಸಂಗಕ್ಕಾರ ಪಂದ್ಯ ಪುರುಷ ಪ್ರಶಸ್ತಿ, ಭಾರತದ ವಿರಾಟ್‌ ಕೊಹ್ಲಿ ಸರಣಿ ಶ್ರೆಷ್ಠ ಪ್ರಶಸ್ತಿ ಪಡೆದರು. ಈ ಟೂರ್ನಿಯಲ್ಲಿ ಕೊಹ್ಲಿ 319 ರನ್‌ಗಳಿಸಿದ್ದರು.

*ಏ. 6: ಭಾರತದ ಅತಿ ದೊಡ್ಡ ಔಷಧ ಉದ್ಯಮ ಸನ್‌ ಫಾರ್ಮಾ 3.2 ದಶಕೋಟಿ ಡಾಲರ್‌ಗೆ ರ್‌್ಯಾನ್‌ಬಾಕ್ಸಿ ಕಂಪೆನಿಯನ್ನು ಖರೀದಿಸುವುದಾಗಿ ಪ್ರಕಟಿಸಿತು.

*ಏ. 7: ಅಮೆರಿಕದ ಖ್ಯಾತ ನಟ ಮಿಕ್ಕಿ ರೂನಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಆಸ್ಕರ್‌ ಸೇರಿದಂತೆ ನಾಲ್ಕು ಬಾರಿ ಅಕಾಡೆಮಿ, ಮತ್ತು ಗೊಲ್ಡನ್‌ ಗ್ಲೋಬ್‌ ಪ್ರಶಸ್ತಿ ಪಡೆದಿದ್ದರು. ರೂನಿ ಎಂಟು ಮದುವೆಯಾಗಿದ್ದರು.

*ಏ. 10: 14ನೇ ನ್ಯೂಯಾರ್ಕ್‌ ಇಂಡಿಯನ್‌ ಫೆಸ್ಟಿವಲ್‌ನಲ್ಲಿ ಬಾಲಿವುಡ್‌ ಚಿತ್ರ ‘ಗುಲಾಬಿ ಗ್ಯಾಂಗ್‌’ ಪ್ರದರ್ಶನಗೊಂಡಿತು. ಈ ಚಿತ್ರೋತ್ಸವದಲ್ಲಿ ಪಾಕಿಸ್ತಾನದ ನಾಲ್ಕು, ಶ್ರೀಲಂಕಾದ ಎರಡು ಮತ್ತು ನೇಪಾಳದ ಒಂದು ಚಿತ್ರ ಪ್ರದರ್ಶನಗೊಂಡವು.

*ಏ. 11: ಆರ್‌.ಎಂ. ಲೋಧ ಅವರು ಸುಪ್ರೀಂ ಕೋರ್ಟ್‌ನ 41ನೇ ಮುಖ್ಯ ನ್ಯಾಯಮೂರ್ತಿಯಾದರು. ರಾಜಸ್ತಾನ ಹೈಕೋರ್ಟ್‌ನಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ್ದರು. ರಾಜಸ್ತಾನ ಮತ್ತು ಪಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

*ಏ. 12: ಬ್ರಿಟನ್‌ನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿ ‘ನೈಟ್‌ ಗ್ರ್ಯಾಂಡ್‌ ಕ್ರಾಸ್‌’ ಪ್ರಶಸ್ತಿಯನ್ನು ರತನ್‌ ಟಾಟಾ ಅವರಿಗೆ ನೀಡಲಾಯಿತು. ಭಾರತ ಮತ್ತು ಬ್ರಿಟನ್‌ನಲ್ಲಿ ಬಂಡವಾಳ ಹೂಡಿಕೆ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಬ್ರಿಟನ್‌ ರಾಣಿ ಎರಡನೇ ಎಲಿಜಬೆತ್‌ ಈ ಪ್ರಶಸ್ತಿಯನ್ನು ಪ್ರದಾನ ಮಾಡುವರು.

*ಏ. 12: ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಜಿ. ರೋಹಿಣಿ ಅವರನ್ನು ರಾಷ್ಟ್ರಪತಿಗಳು ನೇಮಕ ಮಾಡಿದರು. ಇವರು ದೆಹಲಿ ಹೈಕೋರ್ಟ್‌ನ ಮೊದಲ ಮುಖ್ಯ ಮಹಿಳಾ ನ್ಯಾಯಮೂರ್ತಿಯಾಗಿದ್ದಾರೆ.  ರೋಹಿಣಿ ಆಂಧ್ರ ಪ್ರದೇಶದವರು.

*ಏ. 12: 2013ನೇ ಸಾಲಿನ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಹಿರಿಯ ಕವಿ ಮತ್ತು ಚಿತ್ರ ಸಾಹಿತಿ ಗುಲ್ಜಾರ್‌ ಅವರನ್ನು ಆಯ್ಕೆ ಮಾಡಿರುವುದಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಪ್ರಕಟಿಸಿತು. ಭಾರತೀಯ ಸಿನಿಮಾ ರಂಗಕ್ಕೆ ಗುಲ್ಜಾರ್‌ ನೀಡಿದ ಕೊಡುಗೆಯನ್ನು ಪರಿಗಣಿಸಿ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಗುಲ್ಜಾರ್‌ ಮೂಲತಹ ಪಂಜಾಬ್‌ ರಾಜ್ಯದವರು.

*ಏ.13: ನೇಪಾಳದ ಕಠ್ಮಂಡುವಿನಲ್ಲಿ ನಡೆದ 7ನೇ ದಕ್ಷಿಣ ಏಷ್ಯಾ ಜೂಡೊ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಜೂಡೊ ಸ್ಪರ್ಧಿಗಳು ಹತ್ತು ಚಿನ್ನದ ಪದಕ ಸೇರಿದಂತೆ 12 ಪದಕಗಳನ್ನು ಗೆದ್ದರು.

*ಏ.14: ಕಲ್ಲಿದ್ದಲು ಸಚಿವಾಲಯದ ಮಾಜಿ ಕಾರ್ಯದರ್ಶಿ ಪಿ.ಸಿ. ಪ್ರಕಾಶ್‌ ಬರೆದಿರುವ ‘ಕ್ರೂಸೆಡರ್‌ ಆರ್‌ ಕಾನ್ಸ್‌ಪ್ರಿಯೆಟರ್‌? ಕೋಲ್ಗೆಟ್‌ ಅಂಡ್‌ ಅದರ್‌ ಟ್ರುತ್ಸ್‌ ’ (Crusader or Conspirator? Coalgate and other Truths) ಎಂಬ ಪುಸ್ತಕ ಅನಾವರಣಗೊಂಡಿತು.

*ಏ. 14: ಭಾರತೀಯ ಮೂಲದ ವಿಜಯ್‌ ಶೇಷಾದ್ರಿ ಅವರು ಕವನಗಳ ವಿಭಾಗದಲ್ಲಿ 2014ನೇ ಸಾಲಿನ ಪುಲಿಟ್ಜರ್‌ ಪ್ರಶಸ್ತಿ ಪಡೆದರು. ನ್ಯೂಯಾರ್ಕ್‌ನ ಕಲಾ ಕಾಲೇಜಿನಲ್ಲಿ ಶೇಷಾದ್ರಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ವೈಲ್ಡ್‌ ಕಿಂಗ್‌ಡಮ್‌ ಮತ್ತು ದಿ ಮ್ಯಾಡೊ ಅವರ ಜನಪ್ರಿಯ ಕೃತಿಗಳು.

*ಏ. 16: 2013ನೇ ಸಾಲಿನ 61ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರಕಟಿಸಲಾಯಿತು. ಶಿಪ್‌ ಆಫ್‌ ಥಿಸಸ್‌ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆಯಿತು. ಈ ಚಿತ್ರವನ್ನು ಆನಂದ್‌ ಗಾಂಧಿ ನಿರ್ದೇಶನ ಮಾಡಿದ್ದಾರೆ. ರಾಜ್‌ಕುಮಾರ್‌ ಮತ್ತು ಗೀತಾಂಜಲಿ ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದರು.

*ಏ. 19; ಗಾಯಕಿ ಮಾತಂಗಿ ಸತ್ಯಮೂರ್ತಿ ಅವರಿಗೆ 2014ನೇ ಸಾಲಿನ ಎಂ.ಎಸ್‌. ಸುಬ್ಬುಲಕ್ಷ್ಮಿ ಪ್ರಶಸ್ತಿ ಪ್ರಕಟಿಸಲಾಯಿತು. ಈ ಪ್ರಶಸ್ತಿಯ ಮೊತ್ತ 10001 ರೂಪಾಯಿ.
*ಏ. 23: ಸುರೇಶ್‌ ಕುಮಾರ್‌ ರೆಡ್ಡಿ ಆಸಿಯಾನ್‌ ಒಕ್ಕೂಟ ರಾಷ್ಟ್ರಗಳ ಮೊದಲ ರಾಯಭಾರಿಯಾಗಿ ನೇಮಕಗೊಂಡರು.

*ಏ. 25: ಅಮೆರಿಕದ ಹೆಸರಾಂತ ಮೈಕ್ರೋಸಾಫ್ಟ್‌ ಕಂಪೆನಿಯು ಭಾರತದಲ್ಲಿ ನೋಕಿಯ ಮೊಬೈಲ್‌ ತಯಾರಿಕ ಘಟಕವನ್ನು 7.2 ಬಿಲಿಯನ್‌ ಡಾಲರ್‌ಗೆ ಖರೀದಿಸಿತು.

*ಏ. 27: ದಕ್ಷಿಣ ಕೊರಿಯಾದ ಪ್ರಧಾನ ಮಂತ್ರಿ ಚುಂಗ್‌ ಹೊಂಗ್‌ ರಾಜೀನಾಮೆ ನೀಡಿದರು. ಇಂಚೆನ್‌ ಸಮುದ್ರದಲ್ಲಿ ಸಂಭವಿಸಿದ ಹಡಗು ದುರಂತದಲ್ಲಿ 400 ಜನರು ಮೃತಪಟ್ಟಿದ್ದರು. ಇದರ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದರು.

*ಏ. 29: ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ಆಂಧ್ರ ವಿಧಾನಸಭೆ ವಿಸರ್ಜನೆಗೆ ಅಂಕಿತ ಹಾಕಿದರು.




*ಮೇ.‌1: ಕೇಂದ್ರ ಸಚಿವ ಸಂಪುಟವು ಮಹತ್ವದ ಪೋಲವರಂ ನೀರಾವರಿ ಯೋಜನೆಗೆ ಒಪ್ಪಿಗೆ ನೀಡಿತು. 16 ಸಾವಿರ ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಿಂದ ಆಂಧ್ರಪ್ರದೇಶ, ತೆಲಂಗಾಣ, ಒಡಿಶಾ ರಾಜ್ಯದ ಬರಡು ಜಿಲ್ಲೆಗಳಿಗೆ ಅನುಕೂಲವಾಗಲಿದೆ.

*ಮೇ. 2: ಭಾರತೀಯ ಮೂಲದ ಮಣೀಶ್‌ ಶಾ ಅಮೆರಿಕದ ಇಲಿನೊಯಿಸ್‌ನ (Illinois) ಫೆಡರಲ್‌ ನ್ಯಾಯಾಧೀಶರಾಗಿ ಆಯ್ಕೆಯಾದರು. ಇವರ ಪರವಾಗಿ ಅಮೆರಿಕದ ಸೆನೆಟ್‌ನಲ್ಲಿ 95 ಮತಗಳು ಬಿದ್ದವು.

*ಮೇ. 4: ಭಾರತ ಸರ್ಕಾರದ ಬಯೋಟೆಕ್ನಾಲಜಿ ವಿಭಾಗದ ಕಾರ್ಯದರ್ಶಿ ಕೃಷ್ಣಸ್ವಾಮಿ ವಿಜಯರಾಘವನ್‌ ಅಮೆರಿಕ ವಿಜ್ಞಾನ ಆಕಾಡೆಮಿಯ ವಿದೇಶಾಂಗ ಸಹಾಯಕರಾಗಿ ನೇಮಕಗೊಂಡರು.

*ಮೇ. 3: ಭಾರತದ ಸಾನಿಯಾ ಮಿರ್ಜಾ ಮತ್ತು ಕಾರಾ ಬ್ಲಾಕ್‌ ಅವರು ಡಬ್ಲ್ಯೂಟಿಎ ಪೊರ್ಚ್‌ಗಲ್‌ ಓಪನ್‌ ಟೆನಿಸ್‌ ಟೂರ್ನಿ (2014)ಯ ಮಹಿಳೆಯರ ಡಬಲ್ಸ್ ಪಂದ್ಯದಲ್ಲಿ ಪ್ರಶಸ್ತಿ ಗೆದ್ದರು. ಇವರು ರಷ್ಯಾದ ಎವಾ ಹರ್ಡಿನೋವಾ ಹಾಗೂ ವಲೇರಿಯಾ ಅವರನ್ನು ಸೋಲಿಸಿದರು.

*ಮೇ. 3: ಅಮೆರಿಕಾದ ಹೆಸರಾಂತ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್‌ ಪ್ರಶಸ್ತಿ ಪುರಸ್ಕೃತ ಗ್ರೇ ಬೇಕರ್‌ (93) ನಿಧನರಾದರು. ಇವರು ಮಾನವ ಸ್ವಭಾವ ಮತ್ತು ಅಪರಾಧವನ್ನು ಅರ್ಥಶಾಸ್ತ್ರದ ಹಿನ್ನೆಲೆಯಲ್ಲಿ ವಿಶ್ಲೇಷಣೆ ಮಾಡಿದ್ದರು.

*ಮೇ. 6: ಇಂಗ್ಲೆಂಡ್‌ನಲ್ಲಿ ನಡೆದ 2014ನೇ ಸಾಲಿನ ವಿಶ್ವ ಸ್ನೋಕರ್‌ ಚಾಂಪಿಯನ್‌ಶಿಪ್‌ನಲ್ಲಿ ಮಾರ್ಕ್‌ ಸೆಲ್ಬಿ ಟ್ರೋಫಿ ಗೆದ್ದರು. ಇವರು ಮೊದಲ ಬಾರಿ ಗೆದ್ದ ಟ್ರೋಫಿ ಇದು. 2007ರಲ್ಲಿ ಈ ಟ್ರೋಫಿ ಗೆಲ್ಲುವಲ್ಲಿ ಸೆಲ್ಬಿ ವಿಫಲರಾಗಿದ್ದರು.

*ಮೇ. 6: ಹತ್ತು ವರ್ಷಕ್ಕೆ ಮೇಲ್ಪಟ್ಟ ಅಪ್ರಾಪ್ತರು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯಬಹುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಪ್ರಕಟಿಸಿತು. ಇವರು ಎಟಿಎಂ, ಚೆಕ್‌ ಪುಸ್ತಕಗಳನ್ನು ನಿರ್ವಹಣೆ ಮಾಡಬಹುದು ಎಂದು ಆರ್‌ಬಿಐ ತಿಳಿಸಿತು.

*ಮೇ. 7: ಸುಪ್ರೀಂ ಕೋರ್ಟ್‌ ‘ಜಲ್ಲಿಕಟ್ಟು’ ಮತ್ತು ಎತ್ತಿನಗಾಡಿ ಸ್ಪರ್ಧೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತು. ಪ್ರಾಣಿ ದಯಾ ಸಂಘದವರು ಈ ಸ್ಪರ್ಧೆಗಳನ್ನು ನಿಷೇಧಿಸುವಂತೆ ಅರ್ಜಿ ಸಲ್ಲಿಸಿದ್ದರು. ಕೆ.ಎಸ್‌. ರಾಧಕೃಷ್ಣ ಮತ್ತು ಪಿನಾಕಿ ಚಂದ್ರ ಅವರಿದ್ದ ನ್ಯಾಯಪೀಠ ಜಲ್ಲಿಕಟ್ಟು ನಿಷೇಧಿಸುವಂತೆ ಸೂಚಿಸಿತು.

*ಮೇ 9: ಅಮೆರಿಕ ಸಿನಿಮಾ ಉತ್ಸವದಲ್ಲಿ ಭಾರತದ ‘ಸೈಲೆಂಟ್‌ ಕ್ರೀಮ್‌’ ಸಾಕ್ಷ್ಯಚಿತ್ರ ವಿವಿಧ ವಿಭಾಗಗಳಲ್ಲಿ ಮೂರು ಪ್ರಶಸ್ತಿಗಳನ್ನು ಪಡೆಯಿತು. ಪ್ರಿಯಾ ಸೋಮಯ್ಯ ಈ ಚಿತ್ರದ ನಿರ್ದೇಶಕರು. ಇದು ಭಾರತದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಮೇಲೆ ಬೆಳಕು ಚೆಲ್ಲುತ್ತದೆ. ಇಂತಹ ಪ್ರಕರಣಗಳಲ್ಲಿ ಹಣ ಮತ್ತು ರಾಜಕೀಯ ಹೇಗೆ ಕೆಲಸ ಮಾಡುತ್ತದೆ ಎಂಬುದೇ ಇದರ ಕಥಾ ಹಂದರ.

*ಮೇ. 9: ಫ್ರಾನ್ಸ್‌ ದೇಶದ ಖಾಸಗಿ ವಿಮಾನ ನಿರ್ಮಾಣ ಸಂಸ್ಥೆಯೊಂದು ಬ್ಯಾಟರಿ ಚಾಲಿತ ವಿಮಾನವನ್ನು ತಯಾರಿಸಿರುವುದಾಗಿ ಪ್ರಕಟಿಸಿತು. ಇದು ಲಿಥೇನ್‌–ಅಯಾನ್‌– ಪಾಲಿಮಾರ್‌ ಬ್ಯಾಟರಿಗಳಿಂದ ಚಾಲನೆಯಾಗಲಿದೆ. ಇದಕ್ಕೆ ‘ಇ–ಪ್ಯಾನ್‌’ ಎಂದು ಹೆಸರಿಡಲಾಗಿದೆ.

*ಮೇ. 13: ಇಸ್ರೇಲ್‌ ದೇಶದ ಮಾಜಿ ಪ್ರಧಾನಿ ಈದ್‌ ಆಲ್‌ಮಾರ್ಟ್‌ ಅವರಿಗೆ ತೆಲ್‌ ಅವಿವ್‌ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿತು. ಆಲ್‌ಮಾರ್ಟ್‌ ಅವರು ಹೋಲಿಲ್ಯಾಂಡ್‌ ಪ್ರಕರಣದಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆಸಿದ್ದರು.

*ಮೇ. 14: ಇತಿಹಾಸ ತಜ್ಞ ಬ್ಯಾರಿ ಕ್ಲಿಫ್‌ಪೋರ್ಡ್‌ ನೇತೃತ್ವದ ತಂಡ 500 ವರ್ಷಗಳ ಹಿಂದಿನ ಕ್ಲಿಸ್ಟಫರ್‌ ಕೊಲಂಬಸ್‌ ಅವರ ‘ಸಂತಾ ಮಾರಿಯಾ’ ಹಡಗಿನ ಅವಶೇಷಗಳನ್ನು ಕೆರಿಬಿಯನ್‌ ಸಾಗರದ ತಟದಲ್ಲಿ ಪತ್ತೆ ಮಾಡಿತು. ಹೈಟಿ ದೇಶದ ಉತ್ತರ ಕರಾವಳಿ ತೀರದಲ್ಲಿ ಹಡಗಿನ ಅವಶೇಷಗಳು ದೊರೆತವು.

*ಮೇ.14: ಕೇಂದ್ರ ಸರ್ಕಾರ ಎಲ್‌ಟಿಟಿಈ (ಲಿಬರೇಶನ್‌ ಟೈಗರ್ಸ್‌ ಅಫ್‌ ತಮಿಳ್‌ ಈಳಂ) ಸಂಘಟನೆ ಮೇಲೆ ಮತ್ತೆ 5 ವರ್ಷಗಳವರೆಗೆ ನಿಷೇಧವನ್ನು ಮುಂದುವರೆಸಿತು. 1967ರ ಅಪರಾಧ ಕಾಯ್ದೆ ಅಡಿಯಲ್ಲಿ (ಕಾನೂನು ಬಾಹಿರ) ನಿಷೇಧಿಸಿತು.

*ಮೇ. 15: ಕೇಂದ್ರೀಯ ಜಲ ಮಂಡಳಿಯ ಅಧ್ಯಕ್ಷರನ್ನಾಗಿ ಎ.ಬಿ. ಪಾಂಡ್ಯ ಅವರನ್ನು ಕೇಂದ್ರ ಸರ್ಕಾರ ನೇಮಕಮಾಡಿ ಆದೇಶ ಹೊರಡಿಸಿತು.
*ಮೇ. 15: ದೇಶದಲ್ಲಿ ಕಾಗದದ ನೋಟಿನ ಬದಲಾಗಿ ಪ್ಲಾಸ್ಟಿಕ್‌ ನೋಟುಗಳನ್ನು ಬರುವ 2015ನೇ ವರ್ಷದಲ್ಲಿ ಪರಿಚಯಿಸುವುದಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗೌರ್ನರ್‌ ರಘುರಾಂ ರಾಜನ್‌ ಪ್ರಕಟಿಸಿದರು. ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಪ್ಲಾಸ್ಟಿಕ್‌ ನೋಟಿನ ಬಳಕೆಯಿಂದ ನಕಲಿ ನೋಟುಗಳ ಹಾವಳಿ ತಪ್ಪಲಿದೆ ಎಂಬುದು ಹಣಕಾಸು ತಜ್ಞರ ಅಭಿಪ್ರಾಯ.

*ಮೇ.17: ಲೋಕಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತಿಶ್‌ಕುಮಾರ್‌ ರಾಜೀನಾಮೆ ಸಲ್ಲಿಸಿದರು. 40 ಸ್ಥಾನಗಳ ಪೈಕಿ ನಿತಿಶ್‌ ಕುಮಾರ್‌ ನೇತೃತ್ವದ ಸಂಯುಕ್ತ ಜನತಾದಳ ಪಕ್ಷ ಕೇವಲ ಎರಡು ಸ್ಥಾನಗಳನ್ನು ಪಡೆಯಿತು.

*ಮೇ.17: ಭಾರತೀಯ ಯೋಜನಾ ಆಯೋಗದ ಉಪಾಧ್ಯಕ್ಷ ಮಾಂಟೆಕ್‌ ಸಿಂಗ್‌ ಅಹ್ಲುವಾಲಿಯ ರಾಜೀನಾಮೆ ನೀಡಿದರು. ಯೋಜನಾ ಆಯೋಗದಲ್ಲಿ 8 ಜನ ಸದಸ್ಯರು ಇರುತ್ತಾರೆ. ಪ್ರಧಾನ ಮಂತ್ರಿ ಯೋಜನಾ ಆಯೋಗದ ಅಧ್ಯಕ್ಷರಾಗಿರುತ್ತಾರೆ.

*ಮೇ.18: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ನಬಮ್‌ ತುಕಿ ಇಟಾನಗರದಲ್ಲಿ ಅಧಿಕಾರ ಸ್ವೀಕರಿಸಿದರು. ಜೆ.ಗ್ಯಾಮ್ಲಿನ್‌ ಅವರು ರಾಜೀನಾಮೆ ನೀಡಿದ್ದರಿಂದ ಮುಖ್ಯಮಂತ್ರಿಯಾದರು. ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ತುಕಿ ಅವರು ಕೃಷಿ, ನೀರಾವರಿ ಮತ್ತು ಆಹಾರ ಸಚಿವರಾಗಿ ಸೇವೆ ಸಲ್ಲಿಸಿದ್ದರು.

*ಮೇ.18: ಹಿರಿಯ ಪರಮಾಣು ವಿಜ್ಞಾನಿ ಎನ್‌.ಶ್ರೀನಿವಾಸನ್‌ ನಿಧನರಾದರು. ಇವರು ಪರಮಾಣು ವಿಭಾಗದ ವಿವಿಧ ಅಕಾಡೆಮಿ ಮತ್ತು ಸಮಿತಿಗಳಲ್ಲಿ ಕೆಲಸ ಮಾಡಿದ್ದರು. ಇವರಿಗೆ ಭಾರತ ಸರ್ಕಾರ ಪದ್ಮಭೂಷಣ(2000) ಪುರಸ್ಕಾರ ನೀಡಿತ್ತು.

*ಮೇ. 22: ಗುಜರಾತ್‌ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಆನಂದಿ ಬೆನ್‌ ಪಟೇಲ್‌ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದರು.
*ಮೇ.25: ಆಂಧ್ರಪ್ರದೇಶದ 13 ವರ್ಷದ ಬಾಲಕಿ ಮಲವತ್‌ ಪೂರ್ಣ ಮೌಂಟ್‌ ಎವರೆಸ್ಟ್‌ ಶಿಖರ ಹತ್ತಿದ್ದ ಅತ್ಯಂತ ಕಿರಿಯ ಪರ್ವತಾರೋಹಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
*ಮೇ.26: ಭಾರತದ 15ನೇ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದರು.
ಇವರೊಂದಿಗೆ 23 ಸಚಿವರು ಅಧಿಕಾರ ವಹಿಸಿಕೊಂಡರು.
ಈ ಸಮಾರಂಭಕ್ಕೆ ಸಾರ್ಕ್‌ ರಾಷ್ಟ್ರಗಳ ಮುಖ್ಯಸ್ಥರು ಆಗಮಿಸಿದ್ದರು.
*ಮೇ.27: ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ 35ನೇ ರಾಷ್ಟ್ರೀಯ ಕ್ರೀಡಾಕೂಟದ ರಾಯಭಾರಿಯಾಗಿ ನೇಮಕಗೊಂಡರು.
ಕೇರಳದಲ್ಲಿ  2015ರ ಜನವರಿ ಮತ್ತು ಫೆಬ್ರುವರಿಯಲ್ಲಿ ರಾಷ್ಟ್ರೀಯ ಕ್ರೀಡಾಕೂಟ ನಡೆಯಲಿದೆ.
*ಮೇ. 28: ಮುಕುಲ್ ರೊಹಟಗಿ ಭಾರತದ 14ನೇ ಅಟಾರ್ನಿ ಜನರಲ್‌ ಆಗಿ ನೇಮಕಗೊಂಡರು.
ಈ ಸ್ಥಾನದಲ್ಲಿ ಗುಲಾಂ ವಾಹನ್ವತಿ ಅವರಿದ್ದರು.
ರೊಹಟಗಿ ಗುಜರಾತ್‌ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಕಾರ್ಯನಿವರ್ಹಿಸಿದ್ದರು.
*ಮೇ. 29: ಹಿಂದಿಯ ಹೆಸರಾಂತ ಸಾಹಿತಿ ವಿಶ್ವನಾಥ್‌ ತ್ರಿಪಾಠಿ ಅವರು ಪ್ರತಿಷ್ಠಿತ ‘ವ್ಯಾಸ್‌ ಸಮ್ಮಾನ್‌’ ಪುರಸ್ಕಾರವನ್ನು ಪಡೆದರು.
ಈ ಪ್ರಶಸ್ತಿ 2.5 ಲಕ್ಷ ರೂಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.


* ಜೂ. 1: ಕೋಲ್ಕತ್ತ ನೈಟ್‌ರೈಡರ್ಸ್‌(ಕೆಕೆಆರ್‌) ತಂಡವು ಐಪಿಎಲ್‌ನ ಟ್ವಂಟಿ–20 ಕ್ರಿಕೆಟ್‌ನ 7ನೇ ಆವೃತ್ತಿಯಲ್ಲಿ  ಚಾಂಪಿಯನ್‌  ಆಗಿ ಹೊರಹೊಮ್ಮಿತು. ಬೆಂಗಳೂರಿನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಪಂಜಾಬ್‌ ತಂಡವನ್ನು ಮಣಿಸಿತು. ಕೆಕೆಆರ್‌ ಎರಡನೇ ಸಲ ಚಾಂಪಿಯನ್‌ ಆಯಿತು. 
* ಜೂ.1: ದಕ್ಷಿಣ ಕೊರಿಯಾದ ವಿಜ್ಞಾನಿಗಳು ವಿಶ್ವದ ವೇಗದ ಓಟಗಾರ ಹುಸೇನ್‌ ಬೋಲ್ಟ್‌ ಅವರಿಗಿಂತಲೂ ವೇಗವಾಗಿ ಓಡುವ ರೊಬೋಟ್‌ ಅನ್ನು ಅಭಿವೃದ್ಧಿಪಡಿಸಿದರು. ಇದು ಗಂಟೆಗೆ 47 ಕಿ. ಮೀ ವೇಗದಲ್ಲಿ ಓಡಲಿದೆ. ಇದನ್ನು ದಕ್ಷಿಣ ಕೊರಿಯಾದ ತಂತ್ರಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿದೆ.
* ಜೂ. 2: ತೆಲಂಗಾಣ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಕೆ. ಚಂದ್ರಶೇಖರ್‌ ರಾವ್‌  ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಇಎಸ್‌ಎಲ್‌ ನರಸಿಂಹನ್‌ ಅವರು ಪ್ರಮಾಣ ವಚನ ಬೋಧಿಸಿದರು. ತೆಲಂಗಾಣ ದೇಶದ 29ನೇ ರಾಜ್ಯವಾಗಿದೆ.
* ಜೂ. 3: ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ಗೋಪಿನಾಥ್‌ ಮುಂಡೆ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟರು. ಅವರು ಐದು ಸಲ ಶಾಸಕರಾಗಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಭೀಡ್‌ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
* ಜೂ. 4: ಸಿರಿಯಾದ ಅಧ್ಯಕ್ಷರಾಗಿ ಬಷರ್‌–ಅಲ್‌–ಅಸಾದ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಅಸಾದ್‌ ಅವರು ಮೂರನೇ ಬಾರಿ ಸಿರಿಯಾ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಹಸನ್‌ ಅಲ್‌ ನೂರಿ ಅವರನ್ನು ಸೋಲಿಸಿದರು. ಸಿರಿಯಾ ಸಂವಿಧಾನ ಸುಧಾರಣೆ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು.
* ಜೂ. 5: ಉತ್ತರಖಂಡ್‌ ರಾಜ್ಯ ಸರ್ಕಾರ ‘ರೈತರಿಗೆ ಪಿಂಚಣಿ’ ನೀಡುವ ಯೋಜನೆಗೆ ಚಾಲನೆ ನೀಡಿತು. ಅತಿ ಸಣ್ಣ ರೈತರಿಗೆ ಅಂದರೆ ಮೂರು ಎಕರೆ ಜಮೀನು ಹೊಂದಿರುವವರಿಗೆ ಮಾಸಿಕ 800 ರೂಪಾಯಿ ಪಿಂಚಣಿ ನೀಡುವ ಯೋಜನೆ ಇದಾಗಿದೆ.
* ಜೂ. 6: ಸುಮಿತ್ರಾ ಮಹಾಜನ್‌ ಅವರು 16ನೇ ಲೋಕಸಭೆಯ ಸ್ಪೀಕರ್‌ ಆಗಿ ಆಯ್ಕೆಯಾದರು. ಸುಮಿತ್ರಾ ಮಧ್ಯಪ್ರದೇಶದ ಇಂದೋರ್‌ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಇವರು ದೇಶದ ಎರಡನೇ ಮಹಿಳಾ ಸ್ಪೀಕರ್‌.
* ಜೂ. 6: ಪಶ್ಚಿಮ ನೆವೆಲ್‌ ಕಮಾಂಡ್‌ನ ಮುಖ್ಯಸ್ಥರಾಗಿ ಅನಿಲ್‌ ಚೋಪ್ರಾ ಅಧಿಕಾರ ವಹಿಸಿಕೊಂಡರು. ಇವರು ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿಯಲ್ಲಿ ಪದವಿ ಪಡೆದಿದ್ದಾರೆ. ಶೇಖರ್‌ ಸಿನ್ಹಾ ಅವರು ಸ್ವಯಂ ನಿವೃತ್ತಿ ಪಡೆದ ಹಿನ್ನೆಲೆಯಲ್ಲಿ ಅನಿಲ್‌ ಚೋಪ್ರಾ ಅಧಿಕಾರ ವಹಿಸಿಕೊಂಡರು.
* ಜೂ. 6: ದೆಹಲಿಯ ಲೆ. ಗೌರ್ನರ್‌ ನಜೀಬ್‌ ಜಂಗ್‌ ಅವರು ‘ಹಣಕಾಸು ವೆಚ್ಚ ಸಮಿತಿ’ಯನ್ನು ರಚಿಸಿದರು.  ಮುಖ್ಯ ಕಾರ್ಯದರ್ಶಿ ಎಸ್‌.ಕೆ. ಶ್ರೀವಾಸ್ತವ ಈ ಸಮಿತಿಯ ಮುಖ್ಯಸ್ಥರು. ಇದರಲ್ಲಿ 7 ಜನ ಸದಸ್ಯರಿದ್ದಾರೆ.
* ಜೂ. 7: ವಿಶ್ವಸಂಸ್ಥೆಯು ನೆಲ್ಸನ್‌ ಮಂಡೆಲಾ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿತು. ದುರ್ಬಲರ ಏಳಿಗೆಗೆ ಹೋರಾಡುತ್ತಿರುವವರಿಗೆ ಈ ಪ್ರಶಸ್ತಿ ನೀಡಲಾಗುವುದು ಎಂದು ವಿಶ್ವಸಂಸ್ಥೆ ಪ್ರಕಟಿಸಿತು.
* ಜೂ. 8: ಚೀನಾದ ವಿದೇಶಾಂಗ ಸಚಿವ ವ್ಯಾಂಗ್‌ ಯಿ ಎರಡು ದಿನಗಳ ಭಾರತ ಭೇಟಿಗಾಗಿ ಆಗಮಿಸಿದರು. ಅವರು ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
* ಜೂ. 8: ರಫೆಲ್‌ ನಡಾಲ್‌ ಅವರು ಒಂಬತ್ತನೇ ಬಾರೀಗೆ ‘ಫ್ರೆಂಚ್‌ ಓಪನ್‌’ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ನಲ್ಲಿ ಪ್ರಶಸ್ತಿ ಗೆದ್ದರು. ನಡಾಲ್‌ ಅವರು ನೊವಾಕ್ ಜೊಕೊವಿಚ್‌ ಅವರನ್ನು ಮಣಿಸಿದರು. ಮೊದಲ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿಯನ್ನು 1928ರಲ್ಲಿ ಆಯೋಜಿಸಲಾಗಿತ್ತು. ‌
* ಜೂ.  8: ಮಾಜಿ ಸೇನಾ ಅಧಿಕಾರಿ ಎ. ಫತ್ಹಾ ಸಿಸಿ ಅವರು ಈಜಿಪ್ಟ್‌ನ ಅಧ್ಯಕ್ಷರಾಗಿ ಆಯ್ಕೆಯಾದರು. ಸಾರ್ವತ್ರಿಕ ಚುನಾವಣೆಯಲ್ಲಿ ಸಿಸಿ ಅವರು ಶೇ.96 ರಷ್ಟು ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಹಮೀದ್‌ ಸಬಿ ಅವರು ಈ ಚುನಾವಣೆಯಲ್ಲಿ ಸಿಸಿ ಎದುರು ಪರಾಭವಗೊಂಡರು.
* ಜೂ. 9: ಭಾರತ ರತ್ನ ಜೆಆರ್‌ಡಿ ಟಾಟಾ ಪ್ರಶಸ್ತಿಯನ್ನು ಭಾರತೀಯ ವಿಮಾನಯಾನ ಪ್ರಾಧಿಕಾರದ ಅಧ್ಯಕ್ಷ ಸೋಮುಸುಂದರಂ ಸ್ವೀಕರಿಸಿದರು. ವಿಮಾನ ನಿಲ್ದಾಣಗಳ ಅಭಿವೃದ್ಧಿಗಾಗಿ ಸೋಮಸುಂದರಂ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
* ಜೂ.10: ಬಾಲಿವುಡ್‌ನ ಹಿರಿಯ ನಟ ದೀಲಿಪ್‌ ಕುಮಾರ್‌ ಅವರ ಆತ್ಮಚರಿತ್ರೆ ‘ದಿ ಸಬ್‌ಸ್ಟೈನ್ಸ್‌ ಆಂಡ್‌ ದಿ ಶ್ಯಾಡೊ’ (The Substance And The Shadow) ಲೋಕಾರ್ಪಣೆ ಗೊಂಡಿತು. ಈ ಪುಸ್ತಕವನ್ನು ಪತ್ರಕರ್ತ ಉದಯ್‌ ತಾರಾ ನಾಯರ್‌ ಬರೆದಿದ್ದಾರೆ.
* ಜೂ.10: ಭಾರತೀಯ ಮೂಲದ ಕೆನರಾ ಬ್ಯಾಂಕ್‌ ನ್ಯೂಯಾರ್ಕ್‌ನಲ್ಲಿ ನೂತನ ಶಾಖೆಯನ್ನು ಆರಂಭಿಸಿತು. ವಿದೇಶಗಳಲ್ಲಿ ಕೆನರಾ ಬ್ಯಾಂಕ್‌ ಒಟ್ಟು 7 ಶಾಖಾ ಕಚೇರಿಗಳನ್ನು ತೆರೆದಿದೆ.
* ಜೂ.14: ಮಹಿಳಾ ವಿಶ್ವಕಪ್‌ ಹಾಕಿ ಟ್ರೋಫಿಯನ್ನು ನೆದರ್‌ಲೆಂಡ್‌ ಗೆದ್ದುಕೊಂಡಿತ್ತು. ಆಸ್ಟ್ರೇಲಿಯಾ ತಂಡವನ್ನು ಮಣಿಸಿದ ನೆದರ್‌ಲೆಂಡ್‌ ಒಟ್ಟು ಆರು ಸಲ ವಿಶ್ವಕಪ್‌ ಗೆದ್ದುಕೊಂಡಿದೆ.
* ಜೂ.15: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭೂತಾನ್‌ ದೇಶಕ್ಕೆ ಮೊದಲ ಪ್ರವಾಸ ಕೈಗೊಂಡರು. ಇದೇ ಸಂದರ್ಭದಲ್ಲಿ ಭೂತಾನ್‌ ಸರ್ಕಾರಕ್ಕೆ 789 ಕೋಟಿ ರೂಪಾಯಿ ಹಣಕಾಸು ನೆರವನ್ನು ಘೋಷಿಸಿದರು.
* ಜೂ.20: 2014ನೇ ಸಾಲಿನ ಪ್ರತಿಷ್ಠಿತ ಪೆನ್‌ ಪೆಂಟರ್‌ ಪ್ರಶಸ್ತಿಗೆ ಭಾರತೀಯ ಸಂಜಾತ ಹಾಗೂ ಬೂಕರ್‌ ಪ್ರಶಸ್ತಿ ಪುರಸ್ಕೃತ ಸಲ್ಮಾನ್‌ ರಶ್ದಿ ಅವರ ಹೆಸರು ನಾಮ ನಿರ್ದೇಶನಗೊಂಡಿತು. ಅವರ ಸಮಗ್ರ ಸಾಹಿತ್ಯ ಸೇವೆಗೆ ಈ ಪ್ರಶಸ್ತಿ ನೀಡಲು ರಶ್ದಿ ಹೆಸರನ್ನು ನಾಮಕರಣ ಮಾಡಲಾಗಿದೆ. ಈ ಪ್ರಶಸ್ತಿಯನ್ನು ಬ್ರಿಟನ್‌ನ ನೊಬೆಲ್‌ ಸಾಹಿತಿ ಹಾರ್ಲ್ಡ್‌ ಪೆಂಟರ್‌ ಅವರ ಹೆಸರಿನಲ್ಲಿ ನೀಡಲಾಗುತ್ತದೆ.
* ಜೂ. 20: 2013ನೇ ಸಾಲಿನ ಜ್ಞಾನಪೀಠ ಪ್ರಶಸ್ತಿಗೆ ಹಿಂದಿ ಭಾಷೆಯ ಹಿರಿಯ ಸಾಹಿತಿ ಕೇದಾರ್‌ನಾಥ್‌ ಸಿಂಗ್‌ ಅವರನ್ನು ಆಯ್ಕೆ ಮಾಡಲಾಯಿತು. ಈವರೆಗೂ 10 ಜನ ಹಿಂದಿ ಸಾಹಿತಿಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
* ಜೂ.23: ಬಾಂಗ್ಲಾದೇಶ ಪ್ರಜೆಗಳಿಗೆ ನೀಡಲು ಉದ್ದೇಶಿಸಿದ್ದ ‘ವೀಸಾ ರಹಿತ ಆಗಮನ’  ಪ್ರಸ್ತಾವನೆಯನ್ನು ಕೇಂದ್ರ ಗೃಹ ಸಚಿವಾಲಯ ತಿರಸ್ಕರಿಸಿತು.
* ಜೂ.29: ಸೈನಾ ನೆಹ್ವಾಲ್‌ ಆಸ್ಟ್ರೇಲಿಯಾದಲ್ಲಿ ನಡೆದ ‘ಆಸ್ಟ್ರೇಲಿಯನ್‌ ಓಪನ್‌ ಸೂಪರ್‌ ಸೀರಿಸ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಮಹಿಳಾ ಸಿಂಗಲ್ಸ್‌ ಪ್ರಶಸ್ತಿಯನ್ನು ಗೆದ್ದರು. ಅವರು ಸ್ಪೇನ್‌ ದೇಶದ ಕ್ಯಾರೊಲಿನಾ ಮರಿನ್‌  ಅವರನ್ನು 21–18, 21–11 ನೇರ ಸೆಟ್‌ಗಳಲ್ಲಿ ಸೋಲಿಸಿದರು.

*ಜು.1: ಜುಲೈ ಒಂದರಿಂದ ಜಾರಿಗೆ ಬರುವಂತೆ ಅಫ್ಘಾನಿಸ್ತಾನ ಪ್ರಜೆಗಳಿಗೆ ಭಾರತ ಸರ್ಕಾರ ವೀಸಾ ಸರಳೀಕರಣ ಯೋಜನೆಯನ್ನು ಘೋಷಣೆ ಮಾಡಿತು. ಇದರ ಅನ್ವಯ ವೈದ್ಯಕೀಯ, ಶಿಕ್ಷಣ ಮತ್ತು ಸಮಾಜ ಸೇವೆ ನೆಲೆಗಟ್ಟಿನ ಅಡಿಯಲ್ಲಿ ಆಫ್ಘನ್‌ ಪ್ರಜೆಗಳು ಈ ವೀಸಾ ಸೌಲಭ್ಯ ಪಡೆಯಬಹುದು.
*ಜು. 1: ಫಿಲಿಡೆಲ್ಪಿಯಾ ದೇಶ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಲಿಬರ್ಟಿ ಮೆಡಲ್‌’ ಪಾಕಿಸ್ತಾನದ ಯುವ ಸಾಮಾಜಿಕ ಸೇವಾಕರ್ತೆ ಮಲಾಲ ಯೂಸೂಫ್‌ಝೈಗೆ ಸಂದಿದೆ.
ಈ ಪ್ರಶಸ್ತಿಯನ್ನು ಇಲ್ಲಿನ ಸರ್ಕಾರ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವವರಿಗೆ 1998ರಿಂದ ನೀಡುತ್ತ ಬಂದಿದೆ.

*ಜು. 2: ಬಾಲಿವುಡ್‌ ನಟ ಶಾರೂಕ್‌ ಖಾನ್‌ ಅವರಿಗೆ ಫ್ರಾನ್ಸ್‌ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ನೈಟ್‌ ಆಫ್‌ ದಿ ಲಿಜಿಯನ್‌ ಆಫ್‌ ಆನರ್‌’ (Knight of the Legion of Honor) ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ವಿಶ್ವದಾದ್ಯಂತ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಸಮಾನ್ಯ ಸೇವೆ ಸಲ್ಲಿಸಿದವರಿಗೆ ನೀಡಲಾಗುವುದು.
*ಜು.2: ರಾಜಸ್ತಾನ ಸರ್ಕಾರ ಒಂಟೆಯನ್ನು ರಾಜ್ಯ ಪ್ರಾಣಿಯನ್ನಾಗಿ ಘೋಷಣೆ ಮಾಡಿತು. ಜೈಪುರದಲ್ಲಿ ನಡೆದ ವಿಶೇಷ ವಿಧಾನಸಭಾ ಅಧಿವೇಶನದಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
*ಜು.3: ಚೀನಾ ಮತ್ತು ಉತ್ತರ ಕೊರಿಯಾ ದೇಶಗಳ ದ್ವಿಪಕ್ಷೀಯ ಸಭೆ ಸಿಯೋಲ್‌ನಲ್ಲಿ ನಡೆಯಿತು. ಈ ಸಭೆಯಲ್ಲಿ ಉಭಯ ದೇಶಗಳು ಯುದ್ಧ ತಂತ್ರ ಕುರಿತಂತೆ ಚರ್ಚೆ ನಡೆಸಿದವು.
*ಜು.4: ಗೋವಾದ ರಾಜ್ಯಪಾಲ ಬಿ.ವಿ.ವಾಂಚೂ ಅವರು ರಾಜೀನಾಮೆ ನೀಡಿದರು. ಭೂ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದರು.
*ಜು.6: ಸಚಿನ್‌ ತೆಂಡೂಲ್ಕರ್‌ ನೇತೃತ್ವದ ಎಂಸಿಸಿ ಇಲೆವನ್‌ ಕ್ರಿಕೆಟ್‌ ತಂಡವು, ವಿಶ್ವ ಇಲೆವನ್‌ ತಂಡವನ್ನು ಮಣಿಸುವ ಮೂಲಕ 200ನೇ ಗೆಲುವನ್ನು ದಾಖಲಿಸಿತು. ಈ ಪಂದ್ಯ ಕ್ರಿಕೆಟ್‌ ಕಾಶಿ ಇಂಗ್ಲೆಂಡ್‌ನ ಲಾರ್ಡ್ಸ್‌ ಮೈದಾನದಲ್ಲಿ ನಡೆಯಿತು.
*ಜು.6: ನೊವೊಕ್‌ ಜೊಕೊವಿಕ್‌ ಅವರು 2014ನೇ ಸಾಲಿನ ವಿಂಬಲ್ಡನ್‌ ಪುರುಷರ ಸಿಂಗಲ್‌ ಪ್ರಶಸ್ತಿಯನ್ನು ಗೆದ್ದರು. ಈ ಪ್ರಶಸ್ತಿಯನ್ನು ಅವರು ಎರಡನೇ ಸಲ ಪಡೆದರು. ಈ ಹಿಂದೆ 2011ರಲ್ಲಿ ವಿಂಬಲ್ಡನ್‌ ಪ್ರಶಸ್ತಿ ಗೆದ್ದಿದ್ದರು.
*ಜು.7: ಸುಪ್ರೀಂ ಕೋರ್ಟ್‌ ಷರಿಯತ್‌ ಕೋರ್ಟ್‌ಗಳು ಕಾನೂನು ಬಾಹಿರ ಎಂದು ಮಹತ್ವದ ತೀರ್ಪು ಪ್ರಕಟಿಸಿತು.
*ಜು.8: ಭಾರತೀಯ ಸಂವಿಧಾನ ತಜ್ಞ ಗ್ರೇನೆವಿಲ್‌ ಅಸ್ಟೀನ್‌ ಅವರು ವಾಷಿಂಗ್ಟನ್‌ನಲ್ಲಿ ನಿಧನರಾದರು. ಅವರು ಭಾರತೀಯ ಸಂವಿಧಾನ ಕುರಿತಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.
*ಜು.8: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನ್ಯಾ. ಅರುಣ್‌ ಮಿಶ್ರಾ, ನ್ಯಾ.ಆದರ್ಶ್‌ ಕುಮಾರ್‌ ಗೋಯಲ್‌ ಮತ್ತು ಎಫ್‌.ನಾರಿಮನ್‌ ಅವರು ಪ್ರಮಾಣವಚನ ಸ್ವೀಕರಿಸಿದರು.
*ಜು.9: ನೈಜೀರಿಯಾ ತಂಡವನ್ನು ಅಂತರರಾಷ್ಟ್ರೀಯ ಫುಟ್‌ಬಾಲ್‌ ಪಂದ್ಯಾವಳಿಗಳಿಂದ ನಿಷೇಧಿಸಲಾಯಿತು. ಪ್ರಸಕ್ತ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅನುಚಿತ ವರ್ತನೆ ತೋರಿದಕ್ಕೆ ಫಿಫಾ ಈ ನಿರ್ಣಯ ಕೈಗೊಂಡಿತು.
*ಜು.10: ಬಾಲಿವುಡ್‌ ಹಿರಿಯ ನಟಿ ಜೋಹ್ರಾ ಸೆಹಗಲ್‌   ತಮ್ಮ 102ನೇ ವಯಸ್ಸಿಗೆ ನಿಧನರಾದರು.
ಅವರನ್ನು ಬಾಲಿವುಡನ್‌ ‘ಗ್ರ್ಯಾಂಡ್‌ ಓಲ್ಡ್‌ ಲೇಡಿ’ ಎಂದು ಕರೆಯಲಾಗುತ್ತದೆ.

*ಜು.13: 2014ನೇ ಸಾಲಿನ ಫಿಫಾ ವಿಶ್ವಕಪ್‌ ಪ್ರಶಸ್ತಿಯನ್ನು ಜರ್ಮನಿ ಗೆದ್ದುಕೊಂಡಿತು. ಅರ್ಜೆಂಟಿನಾ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ 1–0ಯಿಂದ ಜರ್ಮನಿ ವಿಶ್ವಕಪ್‌ ಗೆದ್ದಿತು. ಜರ್ಮನಿ ಪರವಾಗಿ ಗೊಟ್ಜೆ ಒಂದು ಗೋಲು ಭಾರಿಸಿದರು.

*ಜು.13: ವಿಶ್ವ ಹಿಂದೂ ಪರಿಷತ್‌ನ ಹಿರಿಯ ನಾಯಕ ಗಿರಿರಾಜ್‌ ಕಿಶೋರ್‌ ಅವರು ನವದೆಹಲಿಯಲ್ಲಿ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

*ಜು.16: ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ನ ಅಧ್ಯಕ್ಷರಾಗಿ ಬಿ. ಅಶೋಕ್‌ ಅವರನ್ನು ಕೇಂದ್ರ ಸರ್ಕಾರ ನೇಮಕಮಾಡಿತು.
*ಜು.16: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್‌ ದ್ರಾವಿಡ್‌ ಅವರು ವಿಶ್ವದ ಲಾರೆಸ್‌ ಅಕಾಡೆಮಿಯ ಸದಸ್ಯರಾಗಿ ನೇಮಕಗೊಂಡರು.
*ಜು.17: ಕೇರಳದಲ್ಲಿ  ಜುಲೈ 17 ರಿಂದ ಆಗಸ್ಟ್‌ 16ರವರೆಗೆ ರಾಮಾಯಣ ಪಾರಾಯಾಣ ಅಭಿಯಾನ ನಡೆಯಿತು. ಹಿಂದೂ ಭಕ್ತರು ದೇವಾಲಯ ಮತ್ತು ಮನೆಗಳಲ್ಲಿ ಒಂದು ತಿಂಗಳ ಕಾಲ ರಾಮಾಯಣ ಪಾರಾಯಣ ಮಾಡಿದರು.
*ಜು. 17: 7ನೇ ಬ್ರಿಕ್ಸ್‌ ಸಮ್ಮೇಳನ ರಷ್ಯಾದಲ್ಲಿ ನಡೆಯಲಿದೆ ಎಂದು ಬ್ರಿಕ್ಸ್‌ ಸಂಘಟನೆಯ ಕಾರ್ಯಾಲಯ ಪ್ರಕಟಿಸಿತು.
*ಜು.17: ಗುಜರಾತ್‌ನ ರಾಜ್ಯಪಾಲರಾಗಿ ಓಂ ಪ್ರಕಾಶ್‌ ಕೊಹ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಮಲ್‌ ಬೆನ್ನಿವಾಲ್‌ ಅವರಿದ್ದ ಸ್ಥಾನಕ್ಕೆ ಕೊಹ್ಲಿ ಅವರನ್ನು ನೇಮಕ ಮಾಡಲಾಯಿತು. ಬೆನ್ನಿವಾಲ್‌ ಅವರನ್ನು ಮಿಜೊರಾಂ ಮತ್ತು ನಾಗಲ್ಯಾಂಡ್‌ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ.
*ಜು.17: ಪ್ರಧಾನಿ ನರೇಂದ್ರ ಮೋದಿ ಅವರು 6ನೇ ಬ್ರಿಕ್ಸ್‌ ಸಮೇಳನದಲ್ಲಿ ಭಾಗವಹಿಸಲು ಬ್ರೆಜಿಲ್‌ ದೇಶಕ್ಕೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಬ್ರಿಕ್ಸ್‌ ದೇಶಗಳ ಜೊತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಹಿ ಹಾಕಿದರು.
*ಜು.18: 7ನೇ ಇಬ್ಸಾ ಸಮ್ಮೇಳನ 2015ರಲ್ಲಿ ನವದೆಹಲಿಯಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಇಂಡಿಯಾ, ಬ್ರೆಜಿಲ್‌, ದಕ್ಷಿಣ ಆಫ್ರಿಕಾ ದೇಶಗಳು ಬಾಗವಹಿಸಲಿವೆ.
*ಜು.18: ಮಲೇಶಿಯಾ ನಾಗರಿಕ ವಿಮಾನ ಉಕ್ರೇನ್‌ ವಾಯುನೆಲೆಯಲ್ಲಿ ಅಪಘಾತಕ್ಕೆ ಈಡಾಯಿತು. ಈ ದುರಂತದಲ್ಲಿ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.
*ಜು.19: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಅವರು 2013ನೇ ಸಾಲಿನ ಆರೋಗ್ಯ ಪಾಲಿಸಿಯನ್ನು ದೇಶಕ್ಕೆ ಪರಿಚಯಿಸಿದರು.
*ಜು.19: ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ನಿತಾರಿ ಕೊಲೆ ಪ್ರಕರಣದ ಐವರು ಅಪರಾಧಿಗಳಿಗೆ ದಯಾಮರಣ ನೀಡಲು ನಿರಾಕರಿಸಿದರು. ಇವರಲ್ಲಿ ಪ್ರಮುಖ ಅಪರಾಧಿ ಸುರೇಂದರ್‌ ಕೋಲಿ ಅವರು ಸೇರಿದ್ದಾರೆ.ಆ. 1: ಈಸ್ಟ್‌ ಬೆಂಗಾಲ್‌ ಕ್ಲಬ್‌ ನೀಡುವ 2014ನೇ ಸಾಲಿನ ‘ಭಾರತ್‌ ಗೌರವ್‌’ ಪ್ರಶಸ್ತಿಯನ್ನು ಬಚೇಂದ್ರಿ ಪಾಲ್‌ ಅವರಿಗೆ ನೀಡಲಾಯಿತು. ಬಚೇಂದ್ರಿ ಪಾಲ್‌ ಮೌಂಟ್‌ ಎವರೆಸ್ಟ್‌ ಶಿಖರ ಹತ್ತಿದ ಭಾರತದ ಮೊದಲ ಮಹಿಳೆ.
ಆ. 2: 2014ನೇ ಸಾಲಿನ ರಾಜೀವ್ ಗಾಂಧಿ ಸದ್ಭಾವನ ಪ್ರಶಸ್ತಿಗೆ ಹಿರಿಯ ಸಾಮಾಜಿಕ ಸೇವಾಕರ್ತ ಮುಜಾಫರ್‌ ಆಲಿ ಆಯ್ಕೆಯಾದರು. ಆಲಿ ಅವರು ಕೋಮುವಾದದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ.
ಆ. 3: ಗ್ಲಾಸ್ಗೊದಲ್ಲಿ ನಡೆದ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ತೆರೆ ಬಿದ್ದಿತು. ಈ ಟೂರ್ನಿಯಲ್ಲಿ ಭಾರತ ಒಟ್ಟು 64 ಪದಕಗಳನ್ನು ಗೆಲ್ಲುವ ಮೂಲಕ ಐದನೇ ಸ್ಥಾನ ಪಡೆಯಿತು.
ಆ. 3: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪಿ.ಕಶ್ಯಪ್‌ ಪುರುಷರ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದರು. ಕಾಮನ್‌ವೆಲ್ತ್‌ ಕ್ರೀಡಾಕೂಟಗಳಲ್ಲಿ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೂರನೇ ಆಟಗಾರ ಎಂಬ ಹೆಗ್ಗಳಿಕೆ ಕಶ್ಯಪ್‌ ಅವರದ್ದು.
ಆ. 4: ಮಾಜಿ ವಿದೇಶಾಂಗ ಅಧಿಕಾರಿ ಅರವಿಂದ್‌ ಗುಪ್ತ ಅವರನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತಾ ಉಪ ಸಲಹೆಗಾರರನ್ನಾಗಿ ನೇಮಕ ಮಾಡಿತು. ಗುಪ್ತ ಈ ಹಿಂದೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ ಮತ್ತು ಮಧ್ಯಪ್ರಾಚ್ಯ ದೇಶಗಳಲ್ಲಿ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದರು.
ಆ. 5: ಖ್ಯಾತ ಕಾರ್ಟೂನಿಸ್ಟ್‌ ‘ಪ್ರಾಣ್‌’ ನಿಧನರಾದರು. ಅವರು ರಚಿಸಿದ ಧಾರಾವಾಹಿ (ಕಾರ್ಟೂನ್‌) ‘ಚಾಚಾ ಚೌಧರಿ’ ಭಾರಿ ಜನಪ್ರಿಯತೆ ಪಡೆದಿತ್ತು.
ಆ. 6: ಹೂಡಿಕೆ ಮತ್ತು ವಾಣಿಜ್ಯ ವಿಷಯಗಳಿಗೆ ಸಂಬಂಧಿಸಿದಂತೆ ಸೆಕ್ಯೂರಿಟಿಸ್‌ ಲಾ ವಿಧೇಯಕವನ್ನು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
ಆ. 7; ಮಾಜಿ ಕ್ರಿಕೆಟಿಗ ಕಪಿಲ್‌ದೇವ್‌ ಅವರನ್ನು ಅರ್ಜುನ ಪ್ರಶಸ್ತಿಯ ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ಮತ್ತು ಮಾಜಿ ಹಾಕಿ ಆಟಗಾರ ಅಜಿತ್‌ಪಾಲ್‌ ಸಿಂಗ್‌ ಅವರನ್ನು ‘ದ್ರೋಣಾಚಾರ್ಯ ಪ್ರಶಸ್ತಿಯ ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಯಿತು.
ಆ. 8: ಕಾರ್ಖಾನೆಗಳು ಸಿಲಿಕಾನ್‌ ಬಳಸಿದ ನಂತರ ಅದರ ತ್ಯಾಜ್ಯವನ್ನು ಏನು ಮಾಡುತ್ತವೇ ಎಂಬುದನ್ನು ತಿಳಿಯಲು ಉತ್ತರಖಂಡ ಸರ್ಕಾರ ಹಿರಿಯ ವಿಜ್ಞಾನಿ ಎಸ್‌. ರಾಜಾ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತು.
ಆ. 10: ಪೊಲ್ಯಾಂಡ್‌ನಲ್ಲಿ  ನಡೆದ ವಿಶ್ವಕಪ್‌ ಅರ್ಚರಿಯಲ್ಲಿ ಭಾರತದ ಮಹಿಳಾ ತಂಡ ಚಿನ್ನದ ಪದಕವನ್ನು ಗೆದ್ದಿತು. ದೀಪಿಕಾ ಕುಮಾರಿ ಈ ತಂಡದ ನಾಯಕಿಯಾಗಿದ್ದರು.
ಆ. 11: ಭಾರತದ ಮೊದಲ ಲೋಕಸಭೆಗೆ ಆಯ್ಕೆಯಾಗಿದ್ದ ಹಿರಿಯ ರಾಜಕಾರಣಿ ರೇಷ್ಮಾಲಾಲ್‌ ಜಂಗಡೆ ನಿಧನರಾದರು. ಮೂಲತಃ ಮಧ್ಯಪ್ರದೇಶ ರಾಜ್ಯದವರಾದ ಇವರು ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.
ಆ. 12: ರಾಜ್ಯದ ಜನಪ್ರಿಯ ಜಾನಪದ ಕಲಾವಿದೆ ಬುರ್ರಾ ಕಥಾ ಈರಮ್ಮ ನಿಧನರಾದರು. ಇವರು ಬಳ್ಳಾರಿ ಜಿಲ್ಲೆಯವರು.
ಆ.12: ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿಗೆ ಬಿಜೆಪಿಯ ಹಿರಿಯ ನಾಯಕ ಅರುಣ್‌ ಜೇಟ್ಲಿ, ಕಾಂಗ್ರೆಸ್‌ನ ಕರಣ್‌ ಸಿಂಗ್‌ ಮತ್ತು ಸಂಯುಕ್ತ ಜನತಾದಳ ಪಕ್ಷದ ಶರದ್‌ ಯಾದವ್‌ ಅವರನ್ನು ಆಯ್ಕೆ ಮಾಡಲಾಯಿತು. ಈ ಪ್ರಶಸ್ತಿಯನ್ನು ರಾಷ್ಟ್ರಪತಿ ನೀಡುತ್ತಾರೆ.
ಆ. 13: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗೌರ್ನರ್‌ ಭೀಮಲ್‌ ಜಲನ್‌ ಅವರನ್ನು ‘ವೆಚ್ಚ ವ್ಯವಸ್ಥಾಪನ ಮಂಡಳಿ’ಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಯಿತು.
ಆ.13: ಲೋಕಸಭೆಯ ಡೆಪ್ಯೂಟಿ  ಸ್ಪೀಕರ್‌ ಆಗಿ ಎಂ. ತಂಬಿದೊರೈ ಆಯ್ಕೆಯಾಗಿದ್ದಾರೆ. ಇವರು ಎಐಎಡಿಎಂಕೆ ಪಕ್ಷದ ಸಂಸದರು.
ಆ.13: ಸೀಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ವಿಜಯವಾಡ ಆಂಧ್ರದ ರಾಜಧಾನಿಯಾಗಲಿದೆ ಎಂದು ಪ್ರಕಟಿಸಿದರು.
ಆ.14: ಭಾರತವು ಮೊದಲ ಭಾರಿಗೆ 2015ರ ಪ್ಯಾರಾ–ಗ್ಲೈಡಿಂಗ್‌ ವಿಶ್ವಕಪ್‌ನ ಆತಿಥ್ಯ ವಹಿಸಲಿದೆ. ಇದು ಹಿಮಾಚಲ ಪ್ರದೇಶದಲ್ಲಿ ನಡೆಯಲಿದೆ.
ಆ. 14: ಇರಾಕ್‌ ಪ್ರಧಾನಿ ನೂರಿ ಅಲ್‌–ಮಲಿಕಿ ಅವರು ರಾಜೀನಾಮೆ ನೀಡಿದರು.
ಆ. 15: ಕೇಂದ್ರ ಸರ್ಕಾರ 60 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಿಂಚಣಿ ನೀಡುವ ಭೀಮಾ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಪ್ರಕಟಿಸಿತು.
ಆ.16: ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ರಜನಿ ರಾಜ್ದಾನ್‌ ಅವರನ್ನು ನೇಮಕ ಮಾಡಲಾಯಿತು.
ಆ.17: ಚಿಂಚಿನಾಟಿ ಟೆನಿಸ್‌ ಓಪನ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ಪಂದ್ಯದಲ್ಲಿ ರೋಜರ್‌ ಫೇಡರರ್‌ ಚಿಂಚಿನಾಟಿ ಟ್ರೋಫಿ ಗೆದ್ದರು. ಆ ಮೂಲಕ ಅವರು ಒಟ್ಟು 80 ಅಂತರರಾಷ್ಟ್ರೀಯ ಟ್ರೋಫಿಗಳನ್ನು ಗೆದ್ದಂತಾಗಿದೆ.
ಆ. 18: ಬ್ರೆಜಿಲ್‌ನ ಅಧ್ಯಕ್ಷೀಯ ಅಭ್ಯರ್ಥಿ ಎಡ್ವರ್ಡೊ ಕಾಂಪೊಸ್‌ ನಿಗೂಢವಾಗಿ ಸಾವನ್ನಪ್ಪಿರುವ ವಿಷಯವನ್ನು ಬ್ರೆಜಿಲ್‌ ಸರ್ಕಾರ ಖಚಿತಪಡಿಸಿತು. ಕಾಂಪೊಸ್‌ ಆಗಸ್ಟ್‌ 13ರಂದು ಮೃತಪಟ್ಟಿದ್ದರು.
ಆ. 19: ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರನ್ನು ಭಾರತೀಯ ಕ್ರಿಕೆಟ್‌ ತಂಡದ ನಿರ್ದೇಶಕರನ್ನಾಗಿ ನೇಮಕ ಮಾಡಲಾಯಿತು.
ಆ. 22; ಕರ್ನಾಟಕದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್‌. ಅನಂತಮೂರ್ತಿ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರ ಸಂಸ್ಕಾರ ಕಾದಂಬರಿ 15ಕ್ಕೂ ಹೆಚ್ಚು ಭಾರತೀಯ ಮತ್ತು ವಿದೇಶಿ ಭಾಷೆಗಳಿಗೆ ಅನುವಾದಗೊಂಡಿದೆ.
ಆ.24: ಗಾಂಧಿ ಚಿತ್ರವನ್ನು ನಿರ್ಮಾಣ ಮಾಡಿದ್ದ ರಿಚರ್ಡ್‌ ಅಟೆನ್‌ಬರ್ಗ್‌ ಅವರು ಲಂಡನ್‌ನಲ್ಲಿ ನಿಧನರಾದರು. ಈ ಚಿತ್ರ ಆಸ್ಕರ್‌ ಪ್ರಶಸ್ತಿಯನ್ನು ಪಡೆದಿತ್ತು.
ಆ. 25: ವಿಶ್ವದಲ್ಲಿಯೇ ಮೊದಲ ಬಳಕೆಯ ತಾಮ್ರ ಲೋಹವು ಇಸ್ರೇಲ್‌ ದೇಶದಲ್ಲಿ ಪತ್ತೆಯಾಗಿದೆ. ಇಲ್ಲಿಯೇ ಮಾನವನ ಮೊದಲ ನಾಗರಿಕತೆ ಆರಂಭವಾಗಿರಬಹುದು ಎಂದು ಇತಿಹಾಸ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಆ. 26: ಕರ್ನಾಟಕದ ರಾಜ್ಯಪಾಲರನ್ನಾಗಿ ವಜುಬಾಯಿ ವಾಲ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತು.
ಆ 28: ಕೇಂದ್ರ ಸರ್ಕಾರ ಡಾಟ್‌ ಕಾಮ್‌, ಡಾಟ್‌ ಇನ್‌ ಡೊಮೈನ್‌ಗಳ ಮಾದರಿಯಂತೆ ‘ಡಾಟ್‌ ಭಾರತ್‌’ ಡೊಮೈನ್‌ ಅನ್ನು ಲೋಕಾರ್ಪಣೆ ಮಾಡಿತು. ಇದು ದೇವನಾಗರಿ ಭಾಷೆಯಲ್ಲಿ ಸಹ ಲಭ್ಯವಿದೆ.*ಸೆ.1: ಜಿಂಬಾಬ್ವೆ ರಾಜಧಾನಿ ಹರಾರೆಯಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಜಿಂಬಾಬ್ವೆ ನಡುವಿನ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ ಜಿಂಬಾಬ್ವೆ 31 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡವನ್ನು ಮಣಿಸುವ ಮೂಲಕ ನೂತನ ದಾಖಲೆ ಬರೆಯಿತು.
*ಸೆ.2: ಭಾರತದ ಮಾಜಿ ಅಟಾರ್ನಿ ಜನರಲ್‌ ಜಿ. ಇ. ವಹನ್ವತಿ ನಿಧನರಾದರು. ಅವರು ಸುಪ್ರಿಂ ಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿದ್ದರು.
*ಸೆ.3: ಸಾರ್ವಜನಿಕ ಸ್ಥಳ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾಣಿ ಬಲಿಯನ್ನು ನಿಷೇಧಿಸುವಂತೆ ಹಿಮಾಚಲ ಪ್ರದೇಶ ಹೈಕೋರ್ಟ್‌ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿತು.
*ಸೆ.3: ಸುಪ್ರಿಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ಅವರನ್ನು ಕೇಂದ್ರ ಸರ್ಕಾರ ಕೇರಳ ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡಿತು.
*ಸೆ.3: ಸುಪ್ರಿಂ ಕೋರ್ಟ್‌ನ 42ನೇ ಮುಖ್ಯ ನ್ಯಾಯಮೂರ್ತಿಯನ್ನಾಗಿ ಕನ್ನಡಿಗ ಎಚ್‌.ಎಲ್‌ ದತ್ತು ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಆದೇಶ ಹೊರಡಿಸಿದರು.
*ಸೆ. 4: ನ್ಯಾಯಮೂರ್ತಿ ಧರ್ಮಾಧಿಕಾರಿ ನೇತೃತ್ವದ ಸಮಿತಿ ಮಹಾರಾಷ್ಟ್ರದಲ್ಲಿ ಎಲ್ಲಾ ರೀತಿಯ ಡ್ಯಾನ್ಸ್‌ ಬಾರ್‌ಗಳನ್ನು ನಿಷೇಧಿಸುವಂತೆ ಬಾಂಬೆ ಹೈಕೋರ್ಟ್‌ಗೆ ವರದಿ ಸಲ್ಲಿಸಿತು.
*ಸೆ.4: ಅಮೆರಿಕದ ಖ್ಯಾತ ಹಾಸ್ಯಗಾರ ಹಾಗೂ ಭಾಷಣಕಾರ ಜಾನ್‌ ರಿವರ್‌ ನಿಧನರಾದರು. ಅವರು ವಿಶ್ವದಾದ್ಯಂತ ಹಲವಾರು ಹಾಸ್ಯ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಪ್ರಿಯರಾಗಿದ್ದರು.
*ಸೆ.5: ಬೌದ್ಧ ಗುರು ದಲೈಲಾಮ ಅವರಿಗೆ ದಕ್ಷಿಣ ಆಫ್ರಿಕಾ ಸರ್ಕಾರ ವೀಸಾ ನೀಡಲು ನಿರಾಕರಿಸಿತು. ದಲೈಲಾಮ ಅವರನ್ನು ನೊಬೆಲ್‌ ಪ್ರಶಸ್ತಿ ಪ್ರದಾನ ಸಮಿತಿಯು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಿತ್ತು.
*ಸೆ.5: ರಾಷ್ಟ್ರೀಯ ಸಣ್ಣ ಕೈಗಾರಿಕ ನಿಗಮದ (ಎನ್‌ಎಸ್‌ಐಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ರವೀಂದ್ರನಾಥ್‌ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ರಾಷ್ಟ್ರೀಯ ಕೈಗಾರಿಕ ಹಣಕಾಸು ನಿಗಮದಲ್ಲಿ ಉನ್ನತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
*ಸೆ.5: ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಅಡ್ವಾನ್ಸ್‌ ಸ್ಟಡಿ (ಐಐಎಎಸ್‌)ಯ ಮುಖ್ಯಸ್ಥರಾಗಿ ಚಂದ್ರಕಲಾ ಪಾಡಿಯ ಅವರು ನೇಮಕಗೊಂಡರು. ಪಾಡಿಯಾ ಅವರು ಈ ಸಂಸ್ಥೆಗೆ ನೇಮಕಗೊಂಡ ಮೊದಲ ಮಹಿಳಾ ಅಧ್ಯಕ್ಷರಾಗಿದ್ದಾರೆ.
*ಸೆ.6: ಆಸ್ಟ್ರೇಲಿಯಾದ ಪ್ರಧಾನಿ ಟೋನಿ ಅಬ್ಬಾಟ್‌ ಅವರು 11ನೇ ಶತಮಾನದ ಭಾರತೀಯ ವಿಗ್ರಹಗಳನ್ನು ಭಾರತ ಸರ್ಕಾರಕ್ಕೆ ಒಪ್ಪಿಸುವುದಾಗಿ ಪ್ರಕಟಿಸಿದರು. ಈ ವಿಗ್ರಹಗಳನ್ನು ಸುಮಾರು ಹತ್ತು ಶತಮಾನಗಳ ಹಿಂದೆ ಕಳವು ಮಾಡಿ ಅವುಗಳನ್ನು ಆಸ್ಟ್ರೇಲಿಯಾದಲ್ಲಿ ಇಡಲಾಗಿತ್ತು.
*ಸೆ.7: ಜವಾಹರ ಲಾಲ್‌ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರಿಯದರ್ಶಿನಿ ಮುಖರ್ಜಿ ಅವರಿಗೆ ಚೀನಾದ ಪ್ರತಿಷ್ಠಿತ ‘ಚೀನಾ ಬುಕ್‌ ಅವಾರ್ಡ್‌’ ಪ್ರಶಸ್ತಿ ಸಂದಿದೆ.
*ಸೆ.8: ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು ಬಹರೇನ್‌ ದೇಶಕ್ಕೆ ತೆರಳಿದರು. ಬಹರೇನ್‌ ದೇಶಕ್ಕೆ ಭೇಟಿ ನೀಡಿದ ಮೊದಲ ಮಹಿಳಾ ವಿದೇಶಾಂಗ ಸಚಿವೆ ಎಂಬ ಹೆಗ್ಗಳಿಕೆಗೆ ಸುಷ್ಮಾ ಸ್ವರಾಜ್‌ ಪಾತ್ರರಾಗಿದ್ದಾರೆ.
*ಸೆ.9: ಭಾರತದ ವೃತ್ತಿಪರ ಸ್ನೂಕರ್‌ ಆಟಗಾರ ಪಂಕಜ್‌ ಅಡ್ವಾಣಿ ನಿವೃತ್ತಿ ಘೋಷಿಸಿದರು. ಪಂಕಜ್‌ ಸ್ನೂಕರ್‌ ವಿಶ್ವ ಕಿರೀಟ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಟ್ರೋಫಿಗಳನ್ನು ಜಯಿಸಿದ್ದಾರೆ.
*ಸೆ.10: ಭಾರತದ ಹಿರಿಯ ಐಎಎಸ್‌ ಅಧಿಕಾರಿ ಸುಭಾಶ್‌ ಚಂದ್ರ ಗಾರ್ಗ್‌ ಅವರನ್ನು ವಿಶ್ವಬ್ಯಾಂಕ್‌ನ ಎಕ್ಸಿಕ್ಯೂಟಿವ್‌ ನಿರ್ದೇಶಕರನ್ನಾಗಿ ನೇಮಕ ಮಾಡಲಾಯಿತು.
*ಸೆ.11: ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿರಿಯ ಪತ್ರಕರ್ತ ಜಿತೇಂದ್ರ ಪಾಲ್‌ ನಿಧನರಾದರು. ಅವರು ಸ್ವಾತಂತ್ರ್ಯ ಪೂರ್ವದ ಹಲವು ಪತ್ರಿಕೆಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದರು.
*ಸೆ.12: ಬಾಲಿವುಡ್‌ನ ಹಿರಿಯ ನಟ ನಾಸಿರುದ್ದೀನ್‌ ಶಾ ಅವರ ಆತ್ಮಕತೆ ‘ಅಂಡ್‌ ದೆನ್‌ ಒನ್‌ ಡೇ: ಎ ಮೆಮೊರ್‌’(And then One Day: A Memoir) ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.
*ಸೆ.13: ಐಎಸ್‌ಐಎಸ್‌ ಉಗ್ರರು ಬ್ರಿಟಿಷ್‌ ಪ್ರಜೆ ಡೇವಿಡ್‌ ಹೇನ್ಸ್‌ ಅವರ ತಲೆ ಕತ್ತರಿಸಿದ ವಿಡಿಯೊ ತುಣುಕನ್ನು ‘ಜಿಹಾದಿ’ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದರು. ಡೇವಿಡ್‌ ಹೇನ್ಸ್‌ ಅವರನ್ನು ಸಿರಿಯಾ ದೇಶದಿಂದ ಅಪಹರಿಸಲಾಗಿತ್ತು.
*ಸೆ.14: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ದೆಹಲಿ ಪೊಲೀಸರು ‘ಇ–ಪೊಲೀಸ್‌ ಠಾಣೆಯನ್ನು ಆರಂಭಿಸಿದರು. ಈ ಠಾಣೆಯಲ್ಲಿ ವಾಹನ ಕಳೆದುಕೊಂಡವರು ದೂರು ಸಲ್ಲಿಸಬಹುದು.
*ಸೆ.15: ದೂರದರ್ಶನದಲ್ಲಿ ಸುದ್ದಿ ವಾಚನ ಮಾಡುವ ಮೂಲಕ ದ್ವಿಲಿಂಗಿ ಪದ್ಮಿನಿ ಪ್ರಕಾಶ್‌ ನೂತನ ದಾಖಲೆ ಬರೆದರು.
*ಸೆ.17: ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಎರಡು ದಿನಗಳ ಸೌಹಾರ್ದ ಭೇಟಿಗಾಗಿ ವಿಯೆಟ್ನಾಂ ದೇಶಕ್ಕೆ ಪ್ರಯಾಣ ಬೆಳೆಸಿದರು. ವಿಯೆಟ್ನಾಂ ಸೋಶಿಯಲ್‌ ರಿಪಬ್ಲಿಕ್‌ ದೇಶವಾಗಿವೆ.
*ಸೆ.18: ಲಲಿತಾ ಕುಮಾರ ಮಗಳಂ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
*ಸೆ.19: ಪ್ರಾಚೀನ ನಳಂದ ವಿಶ್ವವಿದ್ಯಾಲಯವನ್ನು 800 ವರ್ಷಗಳ ಬಳಿಕ ಪುನರಾರಂಭಿಸಲಾಯಿತು.
*ಸೆ.23: ಹಿಂದಿ ಸಾಹಿತಿ ಗೋವಿಂದ್‌ ಮಿಶ್ರಾ 2013ನೇ ಸಾಲಿನ ಸರಸ್ವತಿ ಸಮ್ಮಾನ್‌ ಪ್ರಶಸ್ತಿಯನ್ನು ಸ್ವೀಕರಿಸಿದರು. 2008ರಲ್ಲಿ ಪ್ರಕಟವಾದ ‘ದೂಲ್‌ ಪದೂನ್‌ ಪರ್‌’  ಕಾದಂಬರಿಗೆ ಈ ಪುರಸ್ಕಾರ ಸಂದಿದೆ.
*ಸೆ.24: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ತುಮಕೂರು ಸಮೀಪ ದೇಶದ ಮೊದಲ ಫುಡ್‌ಪಾರ್ಕ್‌ ಘಟಕವನ್ನು ಲೋಕಾರ್ಪಣೆ ಮಾಡಿದರು.
*ಸೆ.25: ಸಚಿನ್‌ ತೆಂಡೂಲ್ಕರ್‌ ಮತ್ತು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಸ್ಟಿವಾ ಅವರು 201*ನೇ ಸಾಲಿನ ಬ್ರಾಡ್‌ಮನ್‌ ಪುರಸ್ಕಾರಕ್ಕೆ ಆಯ್ಕೆಯಾಗಿದ್ದರು.
*ಸೆ. 29: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಒ ಪನ್ನಿರ್‌ ಸೆಲ್ವಂ ಪ್ರಮಾಣವಚನ ಸ್ವೀಕರಿಸಿದರು.
*ಸೆ.30: ಟರ್ಕಿ ಸರ್ಕಾರ ಶಾಲಾ ಮಕ್ಕಳು ಟ್ಯಾಟು ಹಾಕುವುದರ ಮೇಲೆ ನಿಷೇಧ ಹಾಕಿತು. ಇದನ್ನು ವಿರೋಧಿಸಿ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಪೊಲೀಸರ ಗುಂಡಿಗೆ ಬಲಿಯಾದರು.


 ಅ.1: ಭಾರತದ ಮಹಿಳಾ ಬಾಕ್ಸರ್‌ ಮೇರಿ ಕೋಮ್‌ ಏಷ್ಯಾನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡರು. ಮೇರಿ ಕೋಮ್‌ ಏಷ್ಯಾನ್‌ ಗೇಮ್ಸ್‌ನಲ್ಲಿ ಪಡೆದ ಮೊದಲ ಚಿನ್ನದ ಪದಕ ಇದಾಗಿದೆ.
* ಅ. 2: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗಾಂಧಿ ಜಯಂತಿ ದಿನ ದೇಶದಾದ್ಯಂತ ‘ಸ್ವಚ್ಛ ಭಾರತ’ ಅಭಿಯಾನಕ್ಕೆ ಚಾಲನೆ ನೀಡಿದರು. ದೆಹಲಿಯ ಕೊಳೆಗೇರಿ ಪ್ರದೇಶದಲ್ಲಿ ಕಸ ಗುಡಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.
* ಅ. 3: ಬಿಹಾರದ ರಾಜಧಾನಿ ಪಟ್ನಾದ ಗಾಂಧಿ ಮೈದಾನದಲ್ಲಿ ದಸರಾ ಪ್ರಯುಕ್ತ ಏರ್ಪಡಿಸುವ ದೇವತೆಗಳ ಉತ್ಸವ ಸಂದರ್ಭದಲ್ಲಿ ಕಾಲ್ತುಳಿತದಿಂದ 32 ಜನರು ಮೃತಪಟ್ಟು 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
* ಅ. 4 : ಗೂಗಲ್‌ನ ಸಾಮಾಜಿಕ ಜಾಲತಾಣವಾಗಿದ್ದ ‘ಆರ್ಕುಟ್‌’ಅನ್ನು ಸ್ಥಗಿತಗೊಳಿಸುವುದಾಗಿ ಗೂಗಲ್‌ ಕಂಪೆನಿ ಘೋಷಿಸಿತು. ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ ಜನಪ್ರಿಯವಾದ ಹಿನ್ನೆಲೆಯಲ್ಲಿ ‘ಆರ್ಕುಟ್‌’ ಬಳಸುವವರ ಸಂಖ್ಯೆ ಕಡಿಮೆಯಾದ್ದರಿಂದ ಸ್ಥಗಿತಗೊಳಿಸಲಾಯಿತು ಎಂದು ಕಂಪೆನಿ ತಿಳಿಸಿತು.
* ಅ. 5: ಮಹೇಂದ್ರ ಸಿಂಗ್‌ ದೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು 2014 ರ ಚಾಂಪಿಯನ್‌ ಲೀಗ್‌ ಕ್ರಿಕೆಟ್‌ ಟ್ರೋಪಿಯನ್ನು ಗೆದ್ದುಕೊಂಡಿತು. ಬೆಂಗಳೂರಿನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು ಮಣಿಸಿತು.
* ಅ.5: ರಾಜಸ್ತಾನದ ಬಿಕನೇರ್‌ ಸಮೀಪದಲ್ಲಿ ‘ಆಲಿವ್‌’ ಮರದ ಎಣ್ಣೆ ತಯಾರಕ ಘಟಕವನ್ನು ರಾಜಸ್ತಾನ ಸರ್ಕಾರ ಆರಂಭಿಸಿತು. ಆ ಮೂಲಕ ಭಾರತದಲ್ಲೇ ಆಲಿವ್‌ ಮರದ ಎಣ್ಣೆ ಘಟಕ ಆರಂಭಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೂ ಪಾತ್ರವಾಯಿತು.
* ಅ. 6: ಸೈಕಲಾಜಿ ಅಥವಾ ಔಷಧಿ ವಿಭಾಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮೂವರು ವಿಜ್ಞಾನಿಗಳಿಗೆ 2014 ನೇ ಸಾಲಿನ ನೊಬೆಲ್‌ ಪ್ರಶಸ್ತಿಯನ್ನು ಘೋಷಿಸಲಾಯಿತು. ಜಾನ್ ಓ ಕೀಫೆ, ಬ್ರಿಟ್‌ ಮೋಸರ್‌ ಮತ್ತು ಎಡ್ವರ್ಡ್‌ ಐ ಈ ಪ್ರಶಸ್ತಿ ಪಡೆದಿದ್ದಾರೆ.
* ಅ.6: ಭಾರತದ ಯಶಸ್ವಿ ಮಂಗಳಯಾನ ಯೋಜನೆ ಕುರಿತಂತೆ ಅಮೆರಿಕದ ‘ನ್ಯೂಯಾರ್ಕ್‌ ಟೈಮ್ಸ್‌’ ಪತ್ರಿಕೆ ಆಕ್ಷೇಪಾರ್ಹ ವ್ಯಂಗ್ಯ ಚಿತ್ರ ಪ್ರಕಟಿಸಿದ್ದಕ್ಕಾಗಿ ಪತ್ರಿಕೆ ಭಾರತದ ಕ್ಷಮೆಯಾಚಿಸಿತು.
* ಅ.9: ರಾಷ್ಟ್ರೀಯ ಸಂಗೀತ ನಾಟಕ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಲೀಲಾ ಸ್ಯಾಮ್ಸನ್‌ ರಾಜೀನಾಮೆ ನೀಡಿದರು. ಅವರ ರಾಜೀನಾಮೆಯನ್ನು ಕೇಂದ್ರ ಸಂಸ್ಕೃತಿ ಸಚಿವಾಲಯ ಅಂಗೀಕರಿಸಿತು.
* ಅ.9: ಫ್ರಾನ್ಸ್‌ನ ಹಿರಿಯ ಲೇಖಕ ಹಾಗೂ ಜನಪ್ರಿಯ ಕಾದಂಬರಿಕಾರರಾದ ಪ್ಯಾಟ್ರಿಕ್‌ ಮೊಡಿಯಾನೊ 2014 ನೇ ಸಾಲಿನ ಸಾಹಿತ್ಯ ನೊಬೆಲ್‌ ಪ್ರಶಸ್ತಿಯನ್ನು ಪಡೆದರು. ಅವರ ಒಟ್ಟು ಸಾಹಿತ್ಯ ಸೇವೆಗೆ ಈ ಪ್ರಶಸ್ತಿ ಸಂದಿದೆ.
* ಅ,10: 2014 ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಪ್ರಕಟಿಸಲಾಯಿತು. ಭಾರತದ ಕೈಲಾಶ್‌ ಸತ್ಯಾರ್ಥಿ ಮತ್ತು ಪಾಕಿಸ್ತಾನದ ಅತಿ ಕಿರಿಯ ಸಮಾಜ ಸೇವಕಿ ಮಲಾಲಗೆ ಜಂಟಿಯಾಗಿ ಈ ಪ್ರಶಸ್ತಿ ನೀಡಲಾಯಿತು.
* ಅ 11: ಅಮೆರಿಕದ ವೈದ್ಯಕೀಯ ವಿಜ್ಞಾನಿಗಳ ತಂಡವು ಎಚ್‌ಐವಿ ವೈರಾಣುವನ್ನು ನೋಡಬಹದಾದ ಅತಿ ಸೂಕ್ಷ್ಮ ಸಾಧನವನ್ನು ಅಭಿವೃದ್ಧಿಪಡಿಸಿರುವುದಾಗಿ ಪ್ರಕಟಿಸಿದೆ.
* ಅ. 13: ಅರ್ಥಶಾಸ್ತ್ರ ವಿಭಾಗಕ್ಕೆ ನೀಡುವ 2014 ಸಾಲಿನ ನೊಬೆಲ್‌ ಪ್ರಶಸ್ತಿ ಫ್ರಾನ್ಸ್ ದೇಶದ ಆರ್ಥಿಕ ತಜ್ಞ ಜಿನ್‌ ಟಿರೋಲ್‌ ಅವರಿಗೆ ಸಂದಿದೆ.
* ಅ. 14 : ಬಾಲಿವುಡ್‌ನ ಖ್ಯಾತ ಚಿತ್ರ ಸಾಹಿತಿ ’ಸಮೀರ್‌’ ಅವರಿಗೆ 2013ನೇ ಸಾಲಿನ ರಾಷ್ಟ್ರೀಯ ಕಿಶೋರ್‌ ಕುಮಾರ್‌ ಪ್ರಶಸ್ತಿ ಲಭಿಸಿತು.
* ಅ.14 : ಯಮನ್‌ ದೇಶದ ಪ್ರಧಾನಿಯಾಗಿ ಖಲೇದ ಬ್ಹಾ ಅವರನ್ನು ನೇಮಕ ಮಾಡಲಾಯಿತು.
* ಅ.15: ಆಸ್ಟ್ರೇಲಿಯಾದ ಲೇಖಕ ರಿಚರ್ಡ್‌ ಪ್ಲಾನಗನ್‌ ಅವರಿಗೆ 2014 ನೇ ಸಾಲಿನ ಮ್ಯಾನ್‌ ಆಫ್‌ ದಿ ಬೂಕರ್‌ ಪ್ರಶಸ್ತಿ ಲಭಿಸಿದೆ. ಅವರ ಯುದ್ಧಕಾಲಿನ ಕಾದಂಬರಿ ‘ ದಿ ನ್ಯಾರೊ ರೋಡ್‌ ಟು ದಿ ಡೀಪ್‌ ನಾರ್ತ್‌’ ಕೃತಿಗೆ ಈ ಪುರಸ್ಕಾರ ಸಂದಿದೆ.
* ಅ. 15: ತೆಲುಗಿನ ಖ್ಯಾತ ಬರಹಗಾರ್ತಿ ತುರಗ ಜಾನಕಿ ರಾಣಿ ನಿಧನರಾದರು. ಇವರು ಆಂಧ್ರಪ್ರದೇಶದ ಬಾನುಲಿಯಲ್ಲಿ ಸುದ್ದಿ ನಿರೂಪಕಿಯಾಗಿ ಭಾರೀ ಜನಪ್ರಿಯತೆ ಪಡೆದಿದ್ದರು.
* ಅ. 17: ಕರ್ನಾಟಕ ರಾಜ್ಯದ 12 ನಗರಗಳ ಮರು ನಾಮಕರಣಕ್ಕೆ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿತು. ನಗರಗಳ ಹೆಸರು ಬದಲಾವಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ವಿಶೇಷ ಮನವಿ ಮಾಡಿದ್ದರು.
* ಅ. 18: ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕಾಗಿ ವಿಶೇಷ ಆರೋಗ್ಯ ಯೋಜನೆಯನ್ನು ಪ್ರಕಟಿಸಿತು. ಅದನ್ನು ಜಮ್ಮು ಕಾಶ್ಮೀರ ಆರೋಗ್ಯ ಗ್ರಾಮ ಯೋಜನೆ ಎಂದು ಕರೆಯಲಾಗುವುದು. ಇದನ್ನು ಕೇಂದ್ರ ಆರೋಗ್ಯ ಸಚಿವರು ಮತ್ತು ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾ ಲೋಕಾರ್ಪಣೆ ಮಾಡಿದರು.
* ಅ. 22: ತಿಹರ್‌ ಜೈಲಿನಲ್ಲಿ ಮಹಿಳಾ ಕೈದಿಗಳಿಗಾಗಿ ಇ–ಗ್ರಂಥಾಲಯವನ್ನು ಆರಂಭಿಸಲಾಯಿತು.
* ಅ. 27: ಹರಿಯಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮನೋಹರ್‌ ಲಾಲ್‌ ಖಟ್ಟರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಹರಿಯಾಣದಲ್ಲಿ ಮೊದಲ ಸಲ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ.
* ಅ. 29: ಪ್ರಸಾರ ಭಾರತೀಯ ಮುಖ್ಯಸ್ಥರಾಗಿ ಸೂರ್ಯ ಪ್ರಕಾಶ್‌ ಅಧಿಕಾರ ಸ್ವೀಕರಿಸಿದರು. ಇವರ ಅಧಿಕಾರ ಅವಧಿ ಮೂರು ವರ್ಷಗಳವರೆಗೆ ಇರಲಿದೆ.
* ಅ. 30: ಕೇಂದ್ರ ಸರ್ಕಾರ ವಿದೇಶದಲ್ಲಿ ಕಪ್ಪು ಹಣ ಇಟ್ಟಿರುವ 615 ಜನರ ಮಾಹಿತಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿತು.
* ಅ. 31: ದೇವೇಂದ್ರ ಫಡ್ನವೀಸ್‌ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನಾ ಪಕ್ಷಗಳ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದೆ.* ನ.1: 1984ರಲ್ಲಿ ಭೋಪಾಲ್‌ (ಮಧ್ಯಪ್ರದೇಶದ ರಾಜಧಾನಿ) ಅನಿಲ ದುರಂತಕ್ಕೆ ಕಾರಣವಾಗಿದ್ದ ಯೂನಿಯನ್‌ ಕಾರ್ಬೈಡ್‌ ಕಂಪೆನಿಯ ಮುಖ್ಯಸ್ಥರಾಗಿದ್ದ ವಾರನ್‌ ಆ್ಯಂಡರ್‌ಸನ್‌ನಿಧನರಾದರು.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಅವರ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಿದ್ದವು. ಭಾರತೀಯ ನ್ಯಾಯಾಲಯದಲ್ಲಿ ಆ ಪ್ರಕರಣಗಳು ಇನ್ನೂ ವಿಚಾರಣೆ ಹಂತದಲ್ಲಿವೆ.
* ನ. 2: ವಿಶ್ವದ ಖ್ಯಾತ ಕ್ಲಾರಿಯೋನೆಟ್ ವಾದಕ ಅಕರ್‌ ಬಿಕ್‌ ಲಂಡನ್‌ನಲ್ಲಿ ನಿಧನರಾದರು. ಅವರ ‘ಜಾಜ್‌’ ಆಲ್ಬಂ ಭಾರೀ ಜನಪ್ರಿಯ ಪಡೆದಿತ್ತು.
* ನ.3: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಜಪಾನ್‌ ದೇಶದ ಪ್ರತಿಷ್ಠಿತ ಗೌರವ ಪ್ರಶಸ್ತಿ ‘ದಿ ಗ್ರ್ಯಾಂಡ್‌ ಕಾರ್ಡನ್‌ ಆಫ್‌ ದಿ ಆರ್ಡರ್‌ ಆಫ್‌ ದಿ ಪೌಲೊವಿನಾ ಫ್ಲವರ್‌–2014’(The Grand Cordon of the Order of the Paulownia Flowers 2014)ಗೆ ಆಯ್ಕೆಯಾಗಿದ್ದಾರೆ.
* ನ. 4: ಭಾರತ ಮತ್ತು ಶ್ರೀಲಂಕಾ ದೇಶಗಳ ವಿಶೇಷ ಸೇನಾ ಪಡೆಗಳ ಜಂಟಿ ಸಮರ ಅಭ್ಯಾಸಕ್ಕೆ ಚಾಲನೆ ನೀಡಲಾಯಿತು. ಇದಕ್ಕೆ ‘ಮಿತ್ರ ಶಕ್ತಿ’ ಎಂದು ಹೆಸರಿಡಲಾಗಿದೆ. ಇದು ಮೂರು ವಾರ ನಡೆಯಲಿದೆ.
* ನ 5: ರಾಜ್ಯದ ಹಂಪಿ ಸಮೀಪದಲ್ಲಿ ಹರಪ್ಪ ಕಾಲದ (ಸಿಂಧೂ ನಾಗರಿಕತೆ) ಚಿತ್ರಗಳು ಮತ್ತು ಲಿಪಿಗಳು (ಕಲ್ಲಿನ ಮೇಲೆ ಕೆತ್ತನೆ ಮಾಡಿರುವ) ಪತ್ತೆಯಾಗಿವೆ ಎಂದು ಇತಿಹಾಸ ಮತ್ತು ಪ್ರಾಕ್ತಾನಶಾಸ್ತ್ರ ಇಲಾಖೆಯ ಅಧಿಕಾರಿಗಳು ಪ್ರಕಟಿಸಿದರು.
* ನ 6: ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಅವರ ಆತ್ಮಕಥೆ ‘ಪ್ಲೇಯಿಂಗ್‌ ಇಟ್‌ ಮೈ ವೇ’ ಪುಸ್ತಕ ಅನಾವರಣಗೊಂಡಿತು. ಈ ಸಂದರ್ಭದಲ್ಲಿ ಸಚಿನ್‌ ಕುಟುಂಬದವರು ಮತ್ತು ಗೆಳೆಯರು ಉಪಸ್ಥಿತರಿದ್ದರು.
* ನ, 07 : ಯೂರೋಪ್‌ ಮತ್ತು ಅಮೆರಿಕದ ಔಷಧಿ ವಿಜ್ಞಾನಿಗಳ ತಂಡ ಆ್ಯಂಟಿಬಯೊಟಿಕ್‌ ಔಷಧಿಗೆ ಪರ್ಯಾಯವಾಗಿ‘ ಸ್ಟಪೆಫ್‌’ ಎಂಬ ಔಷಧಿಯನ್ನು ಸಿದ್ಧಪಡಿಸಿರುವುದಾಗಿ ಪ್ರಕಟಿಸಿತು.
* ನ 8:  ಗೋವಾ ಮುಖ್ಯಮಂತ್ರಿ ಮನೋಹರ್‌ ಗೋಪಾಲಕೃಷ್ಣ ಪ್ರಭು ಪರಿಕ್ಕರ್‌ ರಾಜಿನಾಮೆ ನೀಡಿದರು. ಕೇಂದ್ರ ಸಚಿವ ಸಂಪುಟಕ್ಕೆ ಸೆರ್ಪಡೆಯಾಗಲಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದರು.
* ನ 9: ಕ್ರಿಕೆಟಿಗ ವಿರಾಟ್‌ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಪಂದ್ಯಗಳಲ್ಲಿ ಆರು ಸಾವಿರ ರನ್‌ ಪೂರೈಸುವ ಮೂಲಕ ಹೊಸ ಇತಿಹಾಸ ಬರೆದರು. ವೆಸ್ಟ್‌ಇಂಡಿಸ್‌ನ ವಿವಿಯನ್‌ ರಿಚರ್ಡ್ಸ್‌ ದಾಖಲೆಯನ್ನು ಕೊಹ್ಲಿ ಮುರಿದರು.
* ನ, 10: ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಸಂಪುಟ ವಿಸ್ತರಣೆ ಮಾಡಿದರು. ಈ ಸಂದರ್ಭದಲ್ಲಿ 21 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
* ನ, 11: ಹಿಂದಿ ಕವಿ ಕೇದಾರನಾಥ್‌ ಸಿಂಗ್‌ ಅವರಿಗೆ 2013ನೇ ಸಾಲಿನ ‘ಜ್ಞಾನಪೀಠ ಪ್ರಶಸ್ತಿಯನ್ನು ಘೋಷಿಸಲಾಯಿತು. ಭಾರತೀಯ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
* ನ, 12: ಕೇರಳ ರಾಜ್ಯ ಶೇ.100% ರಷ್ಟು ಬ್ಯಾಂಕ್‌ ಖಾತೆ ಹೊಂದಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
* ನ, 13: ಕ್ರಿಕೆಟಿಗ ರೋಹಿತ್‌ ಶರ್ಮಾ ಏಕದಿನ ಕ್ರಿಕೆಟ್‌ ಪಂದ್ಯದಲ್ಲಿ 264 ರನ್‌ ಗಳಿಸುವ ಮೂಲಕ ನೂತನ ದಾಖಲೆ ಬರೆದರು. ರೋಹಿತ್‌ ಶರ್ಮಾ ಎರಡು ಸಲ ದ್ವಿಶತಕ ಬಾರಿಸಿದ್ದಾರೆ.
* ನ, 14: 2014ನೇ ಸಾಲಿನ ಗಾಂಧಿ ಫಿಲಾಸಫಿ ಮತ್ತು ಪಬ್ಲಿಕ್‌ ಸರ್ವಿಸ್‌ ಬ್ರಾಡ್‌ಕಾಸ್ಟಿಂಗ್‌ ಪ್ರಶಸ್ತಿಯನ್ನು ಜಮ್ಮು ಕಾಶ್ಮೀರ ರೇಡಿಯೋ ಪಡೆಯಿತು.
* ನ, 15: ಅಲ್ಪಸಂಖ್ಯಾತ ಯುವಕರಿಗೆ ಕೌಶಲ ತರಬೇತಿ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಮೌಲಾನಾ ಆಜಾದ್‌ ರಾಷ್ಟ್ರೀಯ ಕೌಶಲಾಭಿವೃದ್ಧಿ ಅಕಾಡೆಮಿಯನ್ನು ಪ್ರಾರಂಭಿಸುವುದಾಗಿ ಪ್ರಕಟಿಸಿತು.
* ನ, 16: ಸೈನಾ ನೆಹ್ವಾಲ್‌ ಮತ್ತು ಕೆ. ಶ್ರೀಕಾಂತ್‌ ಅವರು ಕ್ರಮವಾಗಿ ಮಹಿಳೆ ಮತ್ತು ಪುರುಷರ ಚೀನಾ ಓಪನ್‌ ಬ್ಯಾಡ್ಮಿಂಟನ್‌ ಸಿಂಗಲ್ಸ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡರು.
* ನ, 17: 2014ನೇ ಸಾಲಿನ ಜಿ–20 ಶೃಂಗಸಭೆಯು ಬ್ರಿಸ್‌ಬೇನ್‌ನಲ್ಲಿ ನಡೆಯಿತು. ಈ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಆಸ್ಟ್ರೇಲಿಯಾ ಸಂಸತ್‌ನಲ್ಲಿ ಮೋದಿ ಹಿಂದಿಯಲ್ಲಿ ಭಾಷಣ ಮಾಡಿದರು.
* ನ, 18: ಇಂಗ್ಲೆಂಡ್‌ನಲ್ಲಿ ಮೊದಲ ಬಾರಿಗೆ ಚರ್ಚ್‌ ಆಫ್‌ ಇಂಗ್ಲೆಂಡ್‌ ಸಂಪ್ರದಾಯವನ್ನು ಮುರಿದು ಮಹಿಳಾ ಬಿಷಪ್‌ ನೇಮಕ ಮಾಡಿತು. ಇದನ್ನು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ನೂತನ ಕ್ರಾಂತಿ ಎಂದು ಬಣ್ಣಿಸಲಾಗಿದೆ.
* ನ, 19: ಭಾರತೀಯ ಮೂಲದ ನೇಹಾ ಗುಪ್ತ ಅವರು 2014ನೇ ಸಾಲಿನ ಅಂತರರಾಷ್ಟ್ರೀಯ ಮಕ್ಕಳ ಶಾಂತಿ ಪ್ರಶಸ್ತಿಗೆ ಆಯ್ಕೆಯಾದರು.
* ನ, 20: ಭಾರತೀಯ ಮೂಲದ ಹೊಟೇಲ್‌ ಕಾವಲುಗಾರ ಕೊಟ್ಟರಪಟ್ಟು ಚಟ್ಟು ಅವರು ಶ್ರೀಲಂಕಾದಲ್ಲಿ ನಿಧನರಾದರು. ಅವರು ಗಾಂಧೀಜಿ, ಮೌಂಟ್‌ಬ್ಯಾಟನ್‌ ಅವರು ತಂಗಿದ್ದ ಕೋಣೆಗಳಿಗೆ ಕಾವಲುಗಾರನಾಗಿ ಕೆಲಸ ಮಾಡಿದ್ದರು.
* ನ, 21: ಅಂತರರಾಷ್ಟ್ರೀಯ ಖ್ಯಾತಿಯ ಗಣಿತ ತಜ್ಞ ಅಲೆಕ್ಸಾಂಡರ್‌ ಗ್ರೋಂಥೆಡಿಕ್‌ ಅವರು ಫ್ರಾನ್ಸ್‌ನಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.
* ನ, 22: ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರು ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಅಧಿಕೃತವಾಗಿ ಪ್ರಕಟಿಸಿತು.
* ನ, 23: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರುಳಿ ದೇವ್ರಾ ಮುಂಬೈನಲ್ಲಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
* ನ, 24: ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ದೀಪಕ್‌ ಗುಪ್ತ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿತು.
* ನ, 25: ಹಿರಿಯ ಕಥಕ್‌ ನೃತ್ಯಗಾರ್ತಿ ಸಿತಾರ ದೇವಿ ಮುಂಬೈನಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಪದ್ಮಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದರು.
* ನ, 28:  ಲೋಕಸಭೆಯ ನೂತನ ಪ್ರಧಾನ ಕಾರ್ಯದರ್ಶಿಯನ್ನಾಗಿ ಅನೂಪ್‌ ಮಿಶ್ರಾ ಅವರನ್ನು ನೇಮಕ ಮಾಡಲಾಯಿತು. ಅವರು ಈ ಹಿಂದೆ ಉತ್ತರ ಪ್ರದೇಶ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದರು.
* ನ, 30: ಪಾಕಿಸ್ತಾನದ ಪ್ರಧಾನಿ ನವಾಜ್‌ ಷರೀಫ್‌ ಅವರು ಚೀನಾ ಸರ್ಕಾರದ ಜೊತೆ ‘ಪಾಕ್‌–ಚೀನಾ ಆರ್ಥಿಕ ಕಾರಿಡಾರ್‌’ ಯೋಜನೆಗೆ ಸಹಿ ಹಾಕಿದರು. ಈ ಯೋಜನೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಒಳಗೊಂಡಿದೆ ಎಂದು ಷರೀಫ್‌ ಪ್ರಕಟಿಸಿದರು.



* ಡಿ. 1: ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜೆ. ಗ್ಯಾಂಬ್ಲಿನ್‌ ಗುರ್‌ಗಾಂವ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. 
* ಡಿ. 2: ಭಾರತೀಯ ರಫ್ತು ಕ್ಷೇತ್ರದಲ್ಲಿ 2011 ಮತ್ತು 2012ನೇ ಸಾಲಿನಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವಾಣಿಜ್ಯೋದ್ಯಮಿಗಳಿಗೆ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರು ‘ನಿರ್ಯಾತ ಶ್ರೀ’ ಮತ್ತು ‘ನಿರ್ಯಾತ ಬಂಧು’ ಪ್ರಶಸ್ತಿಗಳನ್ನು ನೀಡಿದರು.
* ಡಿ. 2: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು (ಡಿಸೆಂಬರ್‌ 25) ‘ರಾಷ್ಟ್ರೀಯ ಉತ್ತಮ ಆಡಳಿತ ದಿನವನ್ನಾಗಿ’ ಆಚರಿಸಲಾಗುವುದು ಎಂದು ಕೇಂದ್ರ ಸರ್ಕಾರ ಪ್ರಕಟಿಸಿತು.
* ಡಿ. 3: ಸಿಬಿಐನ ನೂತನ ನಿರ್ದೇಶಕರನ್ನಾಗಿ ಅನಿಲ್‌ ಕುಮಾರ್‌ ಸಿನ್ಹಾ ಅವರನ್ನು ನೇಮಕ ಮಾಡಲಾಯಿತು. ಅವರು ಬಿಹಾರದ 1979ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಈ ಹಿಂದೆ ರಂಜಿತ್‌ ಸಿನ್ಹಾ ಸಿಬಿಐ ನಿರ್ದೇಶಕರಾಗಿದ್ದರು.
* ಡಿ. 4 : ಮೇಘಾಲಯ ಸರ್ಕಾರ ಸ್ಥಳೀಯ ‘ಖಾಸಿ’ ಭಾಷೆಗೆ ಸಂವಿಧಾನಿಕ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಇದಕ್ಕಾಗಿ ಮೇಘಾಲಯ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ. ಸಂವಿಧಾನದ 8ನೇ ಅನುಚ್ಛೇಧದಲ್ಲಿ ಪ್ರಾದೇಶಿಕ ಭಾಷೆಗಳ ಬಗ್ಗೆ ಮಾಹಿತಿ ಇದೆ.
* ಡಿ. 5: ಕೇಂದ್ರದ ಪರಿಸರ ಮತ್ತು ಅರಣ್ಯ ಸಚಿವಾಲಯ ಅರಬ್ಬಿ ಸಮುದ್ರದಲ್ಲಿ ಛತ್ರಪತಿ ಶಿವಾಜಿ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಅನುಮತಿ ನೀಡಿತು. ಅರಬ್ಬಿ ಸಮುದ್ರದಲ್ಲಿ ಪ್ರತಿಷ್ಠಾಪನೆ ಮಾಡಲಿರುವ ಭಾರತದ ಮೊದಲ ಪ್ರತಿಮೆ ಇದಾಗಿದೆ.
* ಡಿ. 6: ವಿಶ್ವಸಂಸ್ಥೆಯು 2015ನೇ ವರ್ಷವನ್ನು ‘ವಿಶ್ವ ಮಣ್ಣಿ’ನ ವರ್ಷವನ್ನಾಗಿ ಅಚರಿಸಲಾಗುವುದು ಎಂದು ಪ್ರಕಟಿಸಿತು. ಇದೇ ವೇಳೆ ಡಿಸೆಂಬರ್‌ 6ರಂದು ಪ್ರತಿವರ್ಷ ಮಣ್ಣಿನ ದಿನವನ್ನಾಗಿ ಅಚರಿಸಲಾಗುವುದು ಎಂದು ಸಹ ಘೋಷಿಸಲಾಯಿತು.
* ಡಿ. 8: ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ನಡೆದ ಅಂಧರ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತೀಯ ಅಂಧರ ತಂಡ ಪಾಕಿಸ್ತಾನವನ್ನು ಮಣಿಸಿ ವಿಶ್ವಕಪ್‌ ಗೆದ್ದುಕೊಂಡಿತು. ಇದು ನಾಲ್ಕನೇ ವಿಶ್ವಕಪ್‌ ಟೂರ್ನಿ ಆಗಿದೆ.
* ಡಿ. 9: ಭಾರತೀಯ ಮಾಜಿ ಹಾಕಿ ಆಟಗಾರ ನಂದಿ ಸಿಂಗ್‌ ನವದೆಹಲಿಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ನಂದಿ ಸಿಂಗ್‌ ಅವರು ಭಾರತ ಒಲಿಪಿಂಕ್ಸ್‌ನಲ್ಲಿ ಎರಡು ಬಾರೀ ಚಿನ್ನದ ಪದಕ ಗೆದ್ದ ತಂಡದಲ್ಲಿದ್ದರು.
* ಡಿ. 10: ನೊಬೆಲ್‌ ಪುರಸ್ಕೃತ ವಿಜ್ಞಾನಿ ಜೇಮ್ಸ್‌ ಡಿ ವ್ಯಾಟ್ಸನ್‌ ಅವರು ತಮ್ಮ ನೊಬೆಲ್‌ ಪದಕವನ್ನು 40.8 ಲಕ್ಷ ಅಮೆರಿಕನ್‌ ಡಾಲರ್‌ಗೆ ಮಾರಾಟ ಮಾಡಿದರು. ಈ ಹಣದಿಂದ ಡಿಎನ್‌ಎ ಕುರಿತು ಸಂಶೋಧನೆ ನಡೆಸುವುದಾಗಿ ಅವರು ಪ್ರಕಟಿಸಿದರು.
* ಡಿ. 11: ವಿಡಿಯೊ ಗೇಮ್ಸ್‌ ಜನಕ ಎಂದೇ ಖ್ಯಾತಿಯಾಗಿರುವ ರಾಲ್ಫ್‌ ಹೆನ್ರಿ ಬೇರ್‌ ಅವರು ಡಿಸೆಂಬರ್‌ 5ರಂದು ಲಂಡನ್‌ನಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆಯನ್ನು ಮ್ಯಾಂಚೆಸ್ಟರ್‌ನಲ್ಲಿ ನೇರವೇರಿಸಲಾಯಿತು.
* ಡಿ. 12: ಭಾರತದಲ್ಲಿ ಕ್ಸಿಯಾಮಿ ಮೊಬೈಲ್‌ ಫೋನ್‌ಗಳನ್ನು ಮಾರಾಟ ಮಾಡುವುದರ ಮೇಲೆ ದೆಹಲಿ ಹೈಕೋರ್ಟ್‌ ನಿಷೇಧ ಹಾಕಿತು. ಎರಿಕ್ಸ್‌ನ್‌ ಕಂಪೆನಿಯೊಂದಿಗಿನ ಪೇಟೆಂಟ್‌ ವಿಷಯವಾಗಿ ಈ ತೀರ್ಪು ನೀಡಿತು.
* ಡಿ. 13: ಬಾಲಿವುಡ್‌ನ ಹಿನ್ನೆಲೆ ಗಾಯಕಿ ಆಶಾ ಭೋಂಸ್ಲೆ ಅವರಿಗೆ ದುಬೈ ಇಂಟರ್‌ನ್ಯಾಷನಲ್‌ ಫಿಲಂ ಫೆಸ್ಟಿವಲ್‌ ಅಕಾಡೆಮಿ ‘ಜೀವಮಾನ ಶ್ರೇಷ್ಠ’ ಪ್ರಶಸ್ತಿ ನೀಡಿ ಗೌರವಿಸಿತು.
* ಡಿ. 15: 2014 ನೇ ಸಾಲಿನ ವಿಶ್ವಸುಂದರಿ ಕಿರೀಟವನ್ನು ದಕ್ಷಿಣ ಆಫ್ರಿಕಾದ ರೊಲೆನ್‌ ಸ್ಟ್ರಾಸ್‌  ಮುಡಿಗೇರಿಸಿಕೊಂಡರು. ಈ ವಿಶ್ವಸುಂದರಿ ಸ್ಪರ್ಧೆ ಲಂಡನ್‌ನಲ್ಲಿ ನಡೆದಿತ್ತು.
* ಡಿ. 17: ಕನ್ನಡ, ತೆಲುಗು ಮತ್ತು ತಮಿಳು ಸಿನಿಮಾಗಳ ಸಂಗೀತ ನಿರ್ದೇಶಕ ‘ಚಕ್ರಿ’ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 48 ವರ್ಷ ವಯಸ್ಸಾಗಿತ್ತು. ಸುಮಾರು 15 ವರ್ಷಗಳಿಂದ ಸಿನಿಮಾರಂಗದಲ್ಲಿ ದುಡಿಯುತ್ತಿದ್ದರು.
* ಡಿ. 16: ಭಾರತದ ವಿಶ್ವನಾಥನ್‌ ಆನಂದ್‌ ಇಂಗ್ಲೆಡ್‌ನಲ್ಲಿ ನಡೆದ ‘ಲಂಡನ್‌ ಕ್ಲಾಸಿಕ್‌’ ಚೆಸ್‌ ಟ್ರೋಫಿಯನ್ನು ಗೆದ್ದುಕೊಂಡರು. ಈ ಪಂದ್ಯದಲ್ಲಿ ಬ್ರಿಟಿಷ್‌ ಗ್ರ್ಯಾಂಡ್‌ ಮಾಸ್ಟರ್‌ ಮೈಕಲ್‌ ಆ್ಯಡಮ್ಸ್‌ ಪರಾಭವಗೊಂಡರು
* ಡಿ. 18: ತೆಲಂಗಾಣ ರಾಜ್ಯ ಲೋಕಸೇವಾ ಅಯೋಗದ (ಟಿಎಸ್‌ಪಿಎಸ್‌ಸಿ) ಅಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತ ಘಂಟಾ ಚಕ್ರಪಾಣಿ ಅವರನ್ನು ನೇಮಕ ಮಾಡಲಾಯಿತು. ಇವರು ಟಿಎಸ್‌ಪಿಎಸ್‌ಸಿಯ ಮೊದಲ ಅಧ್ಯಕ್ಷರು ಹೌದು.
* ಡಿ.19: ಪಾಕಿಸ್ತಾನ ಮೂಲದ ಹಿರಿಯ ಕವಿ ಇಮ್ತಿಯಾಜ್‌ ಧರ್ಕರ್ ಅವರ ಇತ್ತೀಚಿನ ಕವನ ಸಂಕಲನ ‘ಓವರ್‌ ದಿ ಮೂನ್‌ ’ ಕೃತಿಗೆ ಬ್ರಿಟನ್‌ನ ‘ಕ್ವೀನ್ಸ್‌ ಗೊಲ್ಡ್‌ ಮೆಡಲ್‌’ ಪ್ರಸಸ್ತಿ ಲಭಿಸಿದೆ.
* ಡಿ. 20: ಮಂಗಳ ಗ್ರಹದ ಮೇಲೆ ನೀರು ಇರುವುದಾಗಿ ನಾಸಾ ಪ್ರಕಟಿಸಿತು. ಇದಕ್ಕೆ ಪುರಾವೆಯಾಗಿ ಸಾರ್ಸ್‌ ಸೆರೆ ಹಿಡಿದಿರುವ ಹಿಮದ ಚಿತ್ರಗಳನ್ನು ನಾಸಾ ಬಿಡುಗಡೆ ಮಾಡಿತು.
* ಡಿ. 22: ವಿಶ್ವಕಪ್‌ ಕಬ್ಬಡಿ ಟೂರ್ನಿಯಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡ ಟ್ರೋಫಿಯನ್ನು ಗೆದ್ದಿತು. ಫೈನಲ್‌ ಪಂದ್ಯಗಳಲ್ಲಿ  ಪುರುಷರ ತಂಡ ನ್ಯೂಜಿಲೆಂಡ್‌ ತಂಡವನ್ನು ಹಾಗೂ ಮಹಿಳಾ ತಂಡ ಪಾಕಿಸ್ತಾನ ತಂಡವನ್ನು ಮಣಿಸಿತು.
* ಡಿ. 23: ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ಕೆ. ಬಾಲಚಂದರ್‌ ಹೃದಯಾಘಾತ ದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

logoblog

Thanks for reading 2014 ವಿದ್ಯಮಾನ– ಮಾಹಿತಿ

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *