ಹಾವೇರಿ: `ಶಿಕ್ಷಣ ನಿಂತ ನೀರಲ್ಲ, ಸದಾ ಹರಿಯುತ್ತಿ ರುವ ನೀರು ಎಂಬುದನ್ನು ಅರಿತು ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡಬೇಕಲ್ಲದೇ, ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಉತ್ತಮ ಸಾಧನೆ ನಿರೀಕ್ಷಿಸಲು ಸಾಧ್ಯ~ ಎಂದು ನಿವೃತ್ತ ಮುಖ್ಯಾಧ್ಯಾಪಕ ಆರ್.ಕೆ.ಬೆಳ್ಳಿಗಟ್ಟಿ ಹೇಳಿದರು.
ನಗರದ ಹುಕ್ಕೇರಿಮಠದ ಶಿವಲಿಂಗೇಶ್ವರ ಡಿ.ಇಡಿ. ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ದ್ವಿತೀಯ ವರ್ಷದ ಡಿ.ಇಡಿ. ಪ್ರಶಿಕ್ಷಣಾರ್ಥಿಗಳ ಬೀಳ್ಕೊಡುಗೆ ಹಾಗೂ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಾಮಾಣಿಕ ಆದರ್ಶಗುಣಗಳನ್ನು ಬೆಳೆಸಿಕೊಂಡು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು. ಆದರ್ಶ ಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಡಯಟ್ ಪ್ರಾಚಾರ್ಯ ಎಂ.ಡಿ.ಬಳ್ಳಾರಿ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕ ವೃತ್ತಿ ಬಹಳ ಜವಾಬ್ದಾರಿಯುತವಾಗಿದ್ದು, ಪ್ರಶಿಕ್ಷಣಾರ್ಥಿಗಳು ವೃತ್ತಿ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ದಲ್ಲಿ ಉತ್ತಮ ಶಿಕ್ಷರಾಗಬೇಕೆಂದು ಸಲಹೆ ಮಾಡಿದರು.
ಜಿಲ್ಲಾ ಡಯಟ್ ಪ್ರಾಚಾರ್ಯ ಎಂ.ಡಿ.ಬಳ್ಳಾರಿ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕ ವೃತ್ತಿ ಬಹಳ ಜವಾಬ್ದಾರಿಯುತವಾಗಿದ್ದು, ಪ್ರಶಿಕ್ಷಣಾರ್ಥಿಗಳು ವೃತ್ತಿ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ದಲ್ಲಿ ಉತ್ತಮ ಶಿಕ್ಷರಾಗಬೇಕೆಂದು ಸಲಹೆ ಮಾಡಿದರು.
ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಶಿವಾನಂದ ಜಾಣನವರ, ಪ್ರೇಮಾ ಹೊಸಮನಿ, ಗಿರೀಶ ಗಡ್ಡದ, ಪಿ.ಶಿಲ್ಪಾ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯ ಬಿ.ಬಸವರಾಜ ಅವರನ್ನು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸನ್ಮಾನಿಸಿದರು.
ಜಿ.ವಿ.ಪಾಟಕ, ಸಿ.ಬಿ.ವೀರಪ್ಪನವರ, ಪಿ.ಬಿ.ಮುದ್ದಿ, ಡಾ.ಗದಿಗೇಪ್ಪ ಜೋಶಿ, ಎಸ್.ಎಸ್. ಹಿರೇಮಠ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಪೂರ್ಣಿಮಾ ಗುತ್ತಲ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶೃತಿ ಮಠದ ಸ್ವಾಗತಿಸಿದರು. ವಿಜಯ ಲಕ್ಷ್ಮೀ ಜಿಗಳಿ ನಿರೂಪಿಸಿ, ವಂದಿಸಿದರು.
ಸಮಾಜದ ಸ್ವಾಸ್ಥ್ಯಕಾಪಾಡುವಲ್ಲಿ ಶಿಕ್ಷಕನ ಪಾತ್ರ ಮುಖ್ಯ :
ಚಿಕ್ಕೋಡಿ 13 : ಸ್ವಾತಂತ್ರ್ಯ ಸಿಕ್ಕು 70 ವರ್ಷಗಳಲ್ಲಿ ದೇಶದಲ್ಲಿ ಇನ್ನೂ ಶೇ 28 ರಷ್ಟು ಅನಕ್ಷರಸ್ಥರಿದ್ದಾರೆ, ಅವರಲ್ಲಿರುವ ಅಜ್ಞಾನ, ಮೂಡನಂಭಿಕೆಯನ್ನು ಹೋಗಲಾಡಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಶರಥ ಅಲಬಾಳ ಹೇಳಿದರು.
ಅವರು ಸ್ಥಳಿಯ ಸಿಎಲ್ಇ ಶಿಕ್ಷಣ ಸಂಸ್ಥೆಯ ಬಿ.ಸಿ.ಗಂಗಾಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜರುಗಿದ 2013-14 ನೇ ಸಾಲಿನ ದೀಪದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಶಿಕ್ಷಕರ ವೃತ್ತಿ ಪವಿತ್ರವಾಗಿದ್ದು, ಶಿಕ್ಷಕರು ಅದಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಣೆ ಮಾಡಬೇಕು, ಉತ್ತಮ ನಾಗರಿಕರನ್ನು ತಯಾರಿಸುವ ಶಿಕ್ಷಕರು ಉತ್ತಮ ಸಂಸ್ಕಾರ ಹೊಂದುವುದು ಅವಶ್ಯವಾಗಿದೆ, ಶಿಕ್ಷಕರು ಸಂಸ್ಕಾರ ಹೊಂದಿದರೆ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಹೊಂದುತ್ತಾರೆ ಎಂದು ಅವರು ಹೇಳಿದರು.
ಉತ್ತಮ ಶಿಕ್ಷಕನಾಗಲೂ ಕಠಿಣ ಪರಿಶ್ರಮದಿಂದ ಮೌಲ್ಯಗಳನ್ನು ಅಳವಡಿಸಿಕೊಂಡು ಜ್ಞಾನ ಸಂಪಾದನಾ ಮಾಡಬೇಕು, ವೈಚಾರಿಕತೆ, ಬದಲಾವಣೆ ತರುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸಬೇಕೆಂದು ಪ್ರೊ. ದಶರಥ ಅಲಬಾಳ ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಕವಟಗಿಮಠ ಮಾತನಾಡಿ ಯಾರಲ್ಲಿ ಪ್ರತಿಭೆ ಇದೆ ಅವರಿಗೆ ಯಶ ಕಟ್ಟಿಟ ಬುತ್ತಿ, ಜ್ಞಾನವೆಂಬುದು ಪ್ರತಿ ಕ್ಷಣ ಕ್ಷಣಕ್ಕೂ ಬದಲಾವಣೆಯಾಗುತ್ತದೆ ಶಿಕ್ಷಕರಾದವರು ಅದನ್ನು ಗಮನಿಸಿ ಪಾಠ ಭೋದನೆ ಮಾಡಬೇಕೆಂದು ಹೇಳಿದರು.
2012-13 ನೇ ಸಾಲಿನಲ್ಲಿ ಶೇ. 86.88 ರಷ್ಟು ಅಂಕ ಪಡೆದ ವಿದ್ಯಾರ್ಥಿನಿ ಕುಮಾರಿ ಯಾಶ್ಮಿನ ಡಾಂಗೆ ಅವರನ್ನು ಪ್ರಶಸಿ ನೀಡಿ ಸತ್ಕರಿಸಲಾಯಿತ್ತು.
ಸಹ ಕಾರ್ಯದರ್ಶಿ ಎನ್.ಎಸ್.ವಂಟಮುತ್ತೆ, ವಿದ್ಯಾರ್ಥಿ ಪ್ರತಿನಿಧಿಗಳಾದ ಸಿದ್ದಣ್ಣಾ ನಾಯಿಕ, ಕುಮಾರಿ ಪೂಜಾ ಪಾಟೀಲ, ಅಜಯ ಉದೋಶಿ, ಟಿ.ಎಂ.ಗಾಣಿಗೇರ, ಮಹಾಂತೇಶ ಚಲುವಾದಿ, ಡಿ.ಎಸ್.ಕೋಳಿ, ಜೆ.ಬಿ.ಕರೋಶಿ, ಎಸ್.ಬಿ.ಪಾಟೀಲ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಪ್ರೊ.ಸುರೇಶ ಉಕ್ಕಲಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಪ್ರೊ. ಎಸ್.ಆಯ್.ಹೂವಬಳ್ಳಿ ವಂದಿಸಿದರು.
ಅವರು ಸ್ಥಳಿಯ ಸಿಎಲ್ಇ ಶಿಕ್ಷಣ ಸಂಸ್ಥೆಯ ಬಿ.ಸಿ.ಗಂಗಾಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜರುಗಿದ 2013-14 ನೇ ಸಾಲಿನ ದೀಪದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಶಿಕ್ಷಕರ ವೃತ್ತಿ ಪವಿತ್ರವಾಗಿದ್ದು, ಶಿಕ್ಷಕರು ಅದಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಣೆ ಮಾಡಬೇಕು, ಉತ್ತಮ ನಾಗರಿಕರನ್ನು ತಯಾರಿಸುವ ಶಿಕ್ಷಕರು ಉತ್ತಮ ಸಂಸ್ಕಾರ ಹೊಂದುವುದು ಅವಶ್ಯವಾಗಿದೆ, ಶಿಕ್ಷಕರು ಸಂಸ್ಕಾರ ಹೊಂದಿದರೆ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಹೊಂದುತ್ತಾರೆ ಎಂದು ಅವರು ಹೇಳಿದರು.
ಉತ್ತಮ ಶಿಕ್ಷಕನಾಗಲೂ ಕಠಿಣ ಪರಿಶ್ರಮದಿಂದ ಮೌಲ್ಯಗಳನ್ನು ಅಳವಡಿಸಿಕೊಂಡು ಜ್ಞಾನ ಸಂಪಾದನಾ ಮಾಡಬೇಕು, ವೈಚಾರಿಕತೆ, ಬದಲಾವಣೆ ತರುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸಬೇಕೆಂದು ಪ್ರೊ. ದಶರಥ ಅಲಬಾಳ ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಕವಟಗಿಮಠ ಮಾತನಾಡಿ ಯಾರಲ್ಲಿ ಪ್ರತಿಭೆ ಇದೆ ಅವರಿಗೆ ಯಶ ಕಟ್ಟಿಟ ಬುತ್ತಿ, ಜ್ಞಾನವೆಂಬುದು ಪ್ರತಿ ಕ್ಷಣ ಕ್ಷಣಕ್ಕೂ ಬದಲಾವಣೆಯಾಗುತ್ತದೆ ಶಿಕ್ಷಕರಾದವರು ಅದನ್ನು ಗಮನಿಸಿ ಪಾಠ ಭೋದನೆ ಮಾಡಬೇಕೆಂದು ಹೇಳಿದರು.
2012-13 ನೇ ಸಾಲಿನಲ್ಲಿ ಶೇ. 86.88 ರಷ್ಟು ಅಂಕ ಪಡೆದ ವಿದ್ಯಾರ್ಥಿನಿ ಕುಮಾರಿ ಯಾಶ್ಮಿನ ಡಾಂಗೆ ಅವರನ್ನು ಪ್ರಶಸಿ ನೀಡಿ ಸತ್ಕರಿಸಲಾಯಿತ್ತು.
ಸಹ ಕಾರ್ಯದರ್ಶಿ ಎನ್.ಎಸ್.ವಂಟಮುತ್ತೆ, ವಿದ್ಯಾರ್ಥಿ ಪ್ರತಿನಿಧಿಗಳಾದ ಸಿದ್ದಣ್ಣಾ ನಾಯಿಕ, ಕುಮಾರಿ ಪೂಜಾ ಪಾಟೀಲ, ಅಜಯ ಉದೋಶಿ, ಟಿ.ಎಂ.ಗಾಣಿಗೇರ, ಮಹಾಂತೇಶ ಚಲುವಾದಿ, ಡಿ.ಎಸ್.ಕೋಳಿ, ಜೆ.ಬಿ.ಕರೋಶಿ, ಎಸ್.ಬಿ.ಪಾಟೀಲ ಸೇರಿದಂತೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಪ್ರೊ.ಸುರೇಶ ಉಕ್ಕಲಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಪ್ರೊ. ಎಸ್.ಆಯ್.ಹೂವಬಳ್ಳಿ ವಂದಿಸಿದರು.
ಶಿಕ್ಷಕರೆಂದರೆ...
ಮಿತ್ರ ರಾಘವೇಂದ್ರ ಹೆಗ್ಡೆ , ನಾನು ಮೊನ್ನೆ ಸಿಕ್ಕಿ- ಸಿಕ್ಕಿದ್ದು ಹರಟುತ್ತಿದ್ದೆವು, ಎಂದಿನಂತೆ. ಮಾತು ಶಿಕ್ಷಕರು, ಅವರ ಬವಣೆಗಳು ಇತ್ಯಾದಿಗಳ ಕುರಿತು ಹೊರಳಿತು. ಅವನೂ ಕೂಡಾ ಪ್ರಾಧ್ಯಾಪಕನೇ, ಆರ್ಟ್ ಕಾಲೇಜಿನಲ್ಲಿ. ನನ್ನ ಅಪ್ಪನೂ ಕೂಡಾ ಅಧ್ಯಾಪಕರೇ ಆಗಿರುವುದರಿಂದ ಅದೂ ಇದೂ ಘಟನೆಗಳನ್ನ ಹಂಚಿಕೊಳ್ಳುತ್ತಿದ್ದೆವು.
ಅವನು ಒಂದು ದಿನ ಯಾವುದೋ ಕ್ಲಿಷ್ಟಕರ ಡಿಸೈನ್ ಮಾಡಿಕೊಂಡು ಹೋಗಿದ್ದನಂತೆ ತರಗತಿಗೆ. ಆ ಇಡೀ ಪಿರಿಯಡ್ಡು ವಿದ್ಯಾರ್ಥಿಗಳು ಅವೇ ಚಿತ್ರ ಬಿಡಿಸಬೇಕು, ಆಮೇಲೆ ಅದರ ಬಗ್ಗೆ ಮಾತಾಡೋಣ ಅನ್ನುವುದು ಪ್ಲಾನು. ಆ ಡಿಸೈನನ್ನು ಅವರೆದುರಿಗಿಟ್ಟು, ನೀವೆಲ್ಲ ಬಿಡಿಸಿ ಅಂತ ಹೇಳಿ ಮುಗಿಸುವುದರೊಳಗೆ, ಒಬ್ಬಾತ ಎದ್ದು, ಕಿಸೆಯಿಂದ ಸಟಕ್ಕನೆ ಮೊಬೈಲ್ ತೆಗೆದು, ಆ ಡಿಸೈನ್ ನ ಫೋಟೋ ತೆಗೆದು "ಸರ್ ನಾನಿದನ್ನ ಎಲ್ಲರಿಗೂ ಮೈಲ್ ಮಾಡ್ತೀನಿ ಸಾರ್, ನೀವೀಗ ಹೊಸ ವಿಷಯ ಹೇಳ್ಕೊಡಿ" ಅಂದನಂತೆ! ರಾಘುವಿನ ಶ್ರಮಕ್ಕೆ ಬೆಲೆಯೇ ಇಲ್ಲದಂತಾಗಿತ್ತು.
ಶಿಕ್ಷಕರ ಶ್ರಮ ಹೆಚ್ಚಾಗಿ ಗಮನಕ್ಕೆ ಬಾರದೆಯೇ ಉಳಿಯುತ್ತದೆ. ಒಂದನೇ ಕ್ಲಾಸು ಓದುತ್ತಿದ್ದಾಗಿನ ಟೀಚರು, ಇನ್ನೂ ಅಲ್ಲಿಯೇ ಇರುತ್ತಾರೆ, ಹೊಸ ಮಕ್ಕಳಿಗೆ ಅ ಆ ಇ ಈ ಕಲಿಸುತ್ತಾ. ನಾವು ಯಾವುದೋ ದೊಡ್ಡ ಕಂಪನಿಯ ಕೆಲಸದೊಳಗಿರಬಹುದು.
ಗುರುರಾಜ ಕರ್ಜಗಿ ಎಂಬ ಕಲಾವಿದರಿಗೆ, ಹುಟ್ಟೂರಿನ ಶಾಲೆಯಲ್ಲ್ಲಿ ಸನ್ಮಾನ ಮಾಡಿದರಂತೆ, ಅವರ ಸಾಧನೆಗಾಗಿ. ಆಗ ಅವರು ಗುರುಗಳ ಬಗ್ಗೆ ಹೇಳಿದ ಮಾತುಗಳಿವು:
"ಶಿಕ್ಷಕರು ಎಂದರೆ ನಮಗೆಲ್ಲ ಒಂದು ತೆರನಾದ ಔದಾಸೀನ್ಯ ಭಾವ. ನಾವು ಬೆಳೆದು ಎಲ್ಲೋ ಹೋಗಿದ್ದರೂ, ಈ ಅಧ್ಯಾಪಕರುಗಳು ಅಲ್ಲೇ ಇರುತ್ತಾರಲ್ಲ ಅಂತ. ಆದರೆ ಸತ್ಯ ಅದಲ್ಲ, ಶಿಕ್ಷಕರು ಅಂದರೆ, 'ಕೈಮರ' (ದಿಕ್ಸೂಚಿ) ಇದ್ದ ಹಾಗೆ. ಅವರು ನೀವು ಈ ಕಡೆ ಹೋಗಿ , ಆ ಕಡೆ ಹೋಗಿ ಎಂದು ದಿಕ್ಕು ತೋರಿಸುತ್ತ ಸದಾ ಕಾಲ ನಿಂತಲ್ಲೇ ನಿಂತಿರುತ್ತಾರೆ. ನಾವು ಅವರು ಹೇಳಿದ ಕಡೆಗೆ ಸಾಗುತ್ತೇವೆ. ಒಂದು ವೇಳೆ ಆ ಕೈಮರದ, ದಿಕ್ಸೂಚಿಯ ದಿಕ್ಕು ಬದಲಾದರೆ, ಅಥವಾ ತಪ್ಪು ದಾರಿ ತೋರಿಸಿದರೆ ಜೀವನ ಪರ್ಯಂತ ಗುರಿ ಮುಟ್ಟದೆ ಅಲೆಯಬೇಕಾಗುತ್ತದೆ"!
ಅವನು ಒಂದು ದಿನ ಯಾವುದೋ ಕ್ಲಿಷ್ಟಕರ ಡಿಸೈನ್ ಮಾಡಿಕೊಂಡು ಹೋಗಿದ್ದನಂತೆ ತರಗತಿಗೆ. ಆ ಇಡೀ ಪಿರಿಯಡ್ಡು ವಿದ್ಯಾರ್ಥಿಗಳು ಅವೇ ಚಿತ್ರ ಬಿಡಿಸಬೇಕು, ಆಮೇಲೆ ಅದರ ಬಗ್ಗೆ ಮಾತಾಡೋಣ ಅನ್ನುವುದು ಪ್ಲಾನು. ಆ ಡಿಸೈನನ್ನು ಅವರೆದುರಿಗಿಟ್ಟು, ನೀವೆಲ್ಲ ಬಿಡಿಸಿ ಅಂತ ಹೇಳಿ ಮುಗಿಸುವುದರೊಳಗೆ, ಒಬ್ಬಾತ ಎದ್ದು, ಕಿಸೆಯಿಂದ ಸಟಕ್ಕನೆ ಮೊಬೈಲ್ ತೆಗೆದು, ಆ ಡಿಸೈನ್ ನ ಫೋಟೋ ತೆಗೆದು "ಸರ್ ನಾನಿದನ್ನ ಎಲ್ಲರಿಗೂ ಮೈಲ್ ಮಾಡ್ತೀನಿ ಸಾರ್, ನೀವೀಗ ಹೊಸ ವಿಷಯ ಹೇಳ್ಕೊಡಿ" ಅಂದನಂತೆ! ರಾಘುವಿನ ಶ್ರಮಕ್ಕೆ ಬೆಲೆಯೇ ಇಲ್ಲದಂತಾಗಿತ್ತು.
ಶಿಕ್ಷಕರ ಶ್ರಮ ಹೆಚ್ಚಾಗಿ ಗಮನಕ್ಕೆ ಬಾರದೆಯೇ ಉಳಿಯುತ್ತದೆ. ಒಂದನೇ ಕ್ಲಾಸು ಓದುತ್ತಿದ್ದಾಗಿನ ಟೀಚರು, ಇನ್ನೂ ಅಲ್ಲಿಯೇ ಇರುತ್ತಾರೆ, ಹೊಸ ಮಕ್ಕಳಿಗೆ ಅ ಆ ಇ ಈ ಕಲಿಸುತ್ತಾ. ನಾವು ಯಾವುದೋ ದೊಡ್ಡ ಕಂಪನಿಯ ಕೆಲಸದೊಳಗಿರಬಹುದು.
ಗುರುರಾಜ ಕರ್ಜಗಿ ಎಂಬ ಕಲಾವಿದರಿಗೆ, ಹುಟ್ಟೂರಿನ ಶಾಲೆಯಲ್ಲ್ಲಿ ಸನ್ಮಾನ ಮಾಡಿದರಂತೆ, ಅವರ ಸಾಧನೆಗಾಗಿ. ಆಗ ಅವರು ಗುರುಗಳ ಬಗ್ಗೆ ಹೇಳಿದ ಮಾತುಗಳಿವು:
"ಶಿಕ್ಷಕರು ಎಂದರೆ ನಮಗೆಲ್ಲ ಒಂದು ತೆರನಾದ ಔದಾಸೀನ್ಯ ಭಾವ. ನಾವು ಬೆಳೆದು ಎಲ್ಲೋ ಹೋಗಿದ್ದರೂ, ಈ ಅಧ್ಯಾಪಕರುಗಳು ಅಲ್ಲೇ ಇರುತ್ತಾರಲ್ಲ ಅಂತ. ಆದರೆ ಸತ್ಯ ಅದಲ್ಲ, ಶಿಕ್ಷಕರು ಅಂದರೆ, 'ಕೈಮರ' (ದಿಕ್ಸೂಚಿ) ಇದ್ದ ಹಾಗೆ. ಅವರು ನೀವು ಈ ಕಡೆ ಹೋಗಿ , ಆ ಕಡೆ ಹೋಗಿ ಎಂದು ದಿಕ್ಕು ತೋರಿಸುತ್ತ ಸದಾ ಕಾಲ ನಿಂತಲ್ಲೇ ನಿಂತಿರುತ್ತಾರೆ. ನಾವು ಅವರು ಹೇಳಿದ ಕಡೆಗೆ ಸಾಗುತ್ತೇವೆ. ಒಂದು ವೇಳೆ ಆ ಕೈಮರದ, ದಿಕ್ಸೂಚಿಯ ದಿಕ್ಕು ಬದಲಾದರೆ, ಅಥವಾ ತಪ್ಪು ದಾರಿ ತೋರಿಸಿದರೆ ಜೀವನ ಪರ್ಯಂತ ಗುರಿ ಮುಟ್ಟದೆ ಅಲೆಯಬೇಕಾಗುತ್ತದೆ"!
No comments:
Post a Comment