ಮಾರ್ಗಸೂಚಿ ಉಲ್ಲಂಘನೆ ಆರೋಪ
bullet_train_1516253877_725x725.jpg
ಸಾಂದರ್ಭಿಕ ಚಿತ್ರ
ಅಹಮದಾಬಾದ್ (ಪಿಟಿಐ): ಮುಂಬೈ–ಅಹಮದಾಬಾದ್ ನಡುವಿನ ಪ್ರಸ್ತಾವಿತ ಬುಲೆಟ್ ರೈಲು ಯೋಜನೆಯಿಂದ ತೊಂದರೆಗೊಳಗಾಗಲಿರುವ ಸಾವಿರ ರೈತರು ಗುಜರಾತ್ ಹೈಕೋರ್ಟ್ನಲ್ಲಿ ಮಂಗಳವಾರ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಮೂಲಕ ಯೋಜನೆ ವಿರುದ್ಧ ದನಿ ಎತ್ತಿದ್ದಾರೆ.
ಯೋಜನೆಗಾಗಿ ಭೂಸ್ವಾಧೀನ ಪ್ರಶ್ನಿಸಿ ಈಗಾಗಲೇ ಸಲ್ಲಿಕೆಯಾಗಿರುವ ಐದು ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಆರ್.ಸುಭಾಷ್ ರೆಡ್ಡಿ ಮತ್ತು ವಿ.ಎಂ. ಪಾಂಚೋಲಿ ಅವರಿರುವ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.
ಈ ಅರ್ಜಿಗಳ ಹೊರತಾಗಿ ಪ್ರತ್ಯೇಕ ಅಫಿಡವಿಟ್ ಸಲ್ಲಿಸಿರುವ ರೈತರು, ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಿಂದ ಹೆಚ್ಚಿನ ಪ್ರಮಾಣದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ತಮ್ಮ ಅರ್ಜಿಯಲ್ಲಿ ಎಚ್ಚರಿಸಿದ್ದಾರೆ. ಯೋಜನೆಗೆ ಭೂಮಿಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸದ್ಯ ಇರುವ ಭೂಸ್ವಾಧೀನ ಪ್ರಕ್ರಿಯೆಗಳು, ಯೋಜನೆಗೆ ಹಣಕಾಸು ನೆರವು ನೀಡುತ್ತಿರುವ ಜಪಾನ್ ಅಂತರರಾಷ್ಟ್ರೀಯ ಸಹಕಾರ ಏಜನ್ಸಿಯ (ಜೆಐಸಿಎ) ಮಾರ್ಗಸೂಚಿಗಳಿಗೆ ವಿರುದ್ಧವಾಗಿವೆ. 2013ರ ಭೂಸ್ವಾಧೀನ ಕಾಯ್ದೆಯನ್ನೂ ಸರ್ಕಾರ ಉಲ್ಲಂಘಿಸಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಅಫಿಡವಿಟ್ ಕುರಿತು ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಸಮಯಾವಕಾಶ ಕೇಳಿದೆ.
ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರದ ಪರ ವಕೀಲರು ಪದೇಪದೇ ಸಮಯ ಕೇಳುತ್ತಿರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ. ಇದು ಮುಂದುವರಿದರೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ರೈತರ ಪರ ವಕೀಲ ಆನಂದ್ ಯಾಗ್ನಿಕ್ ಎಚ್ಚರಿಸಿದ್ದಾರೆ.
ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ತಮ್ಮನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ರೈತರು ಕೋರ್ಟ್ ಗಮನಕ್ಕೆ ತಂದಿದ್ದಾರೆ.
Friends,
If you like this post,kindly comment below the post and do share your
Response,
(Thanks for Reading....)
No comments:
Post a Comment