ದೆಹಲಿ: ಪರಿಸರ ಸಂರಕ್ಷಣೆಗಾಗಿ ವಿಶ್ವಸಂಸ್ಥೆ ನೀಡುವ ಅತ್ಯುನ್ನತ ಗೌರವ ಪ್ರಶಸ್ತಿ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರಾನ್ ಸೇರಿದಂತೆ ಐವರನ್ನು ಆಯ್ಕೆ ಮಾಡಲಾಗಿದೆ.
ಭಾರತದಲ್ಲಿ 2022ರವೇಳೆಗೆ ಪ್ಲಾಸ್ಟಿಕ್ ಬಳಕೆ ನಿರ್ಮೂಳನೆಗಾಗಿ ಕೈಗೊಂಡಿರುವ ಕ್ರಮಗಳು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೌರಶಕ್ತಿ ದೇಶಗಳ ಮೈತ್ರಿಯಲ್ಲಿನ ನಾಯಕತ್ವವನ್ನು ಪರಿಗಣಿಸಿ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ನೀಡುತ್ತಿರುವುದಾಗಿ ತಿಳಿಸಿದೆ.
ಸೌರಶಕ್ತಿ ರಾಷ್ಟ್ರಗಳ ಮೈತ್ರಿ ಕಾರ್ಯದಲ್ಲಿ ನೀಡಿದ ಸಹಕಾರಕ್ಕಾಗಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರಾನ್ ಅವರನ್ನು ಜತೆಯಾಗಿ ಗುರುತಿಸಲಾಗಿದೆ. ಪರಿಸರ ಸಂರಕ್ಷಣೆಯಲ್ಲಿ ಮ್ಯಾಕ್ರಾನ್ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ಆಯ್ಕೆ ಮಾಡಲಾಗಿದೆ.
ನ್ಯೂಯಾರ್ಕ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ 73ನೇ ಮಹಾಸಭೆಯಲ್ಲಿ ಈ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ.
ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಶಸ್ತಿ:
ಸಂಪೂರ್ಣ ಸೌರಶಕ್ತಿಯನ್ನು ಬಳಸಿಕೊಂಡು ಕಾರ್ಯ ನಿರ್ವಹಿಸುತ್ತಿರುವ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಉದ್ಯಮಶೀಲತೆಯಲ್ಲಿ’ದೂರ ದೃಷ್ಟಿ’ ವಿಭಾಗದಲ್ಲಿ ಪುರಸ್ಕಾರ ನೀಡಲಾಗಿದೆ. ಜಾಗತಿಕ ಸಂಪರ್ಕ ಸಾಧಿಸುವುದರ ಜತೆ ಜತೆಯಲ್ಲೇ ಪರಿಸರದ ಮೇಲಾಗುವ ಹಾನಿಯನ್ನು ತಡೆಯಬಹುದು ಎನ್ನುವುದನ್ನು ಈ ವಿಮಾನ ನಿಲ್ದಾಣ ಸಾಧಿಸಿ ತೋರಿಸಿದೆ. ಸೌರಶಕ್ತಿಯನ್ನು ಬಳಸಿಕೊಂಡು ಕಾರ್ಯ ನಿರ್ವಹಿಸುತ್ತಿರುವ ವಿಶ್ವದ ಪ್ರಪ್ರಥಮ ವಿಮಾನ ನಿಲ್ದಾಣ ಎನ್ನುವ ಖ್ಯಾತಿಗೂ ಕೊಚ್ಚಿ ನಿಲ್ದಾಣ ಪಾತ್ರವಾಗಿದೆ.
ಸಂಪೂರ್ಣ ಸೌರಶಕ್ತಿಯನ್ನು ಬಳಸಿಕೊಂಡು ಕಾರ್ಯ ನಿರ್ವಹಿಸುತ್ತಿರುವ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಉದ್ಯಮಶೀಲತೆಯಲ್ಲಿ’ದೂರ ದೃಷ್ಟಿ’ ವಿಭಾಗದಲ್ಲಿ ಪುರಸ್ಕಾರ ನೀಡಲಾಗಿದೆ. ಜಾಗತಿಕ ಸಂಪರ್ಕ ಸಾಧಿಸುವುದರ ಜತೆ ಜತೆಯಲ್ಲೇ ಪರಿಸರದ ಮೇಲಾಗುವ ಹಾನಿಯನ್ನು ತಡೆಯಬಹುದು ಎನ್ನುವುದನ್ನು ಈ ವಿಮಾನ ನಿಲ್ದಾಣ ಸಾಧಿಸಿ ತೋರಿಸಿದೆ. ಸೌರಶಕ್ತಿಯನ್ನು ಬಳಸಿಕೊಂಡು ಕಾರ್ಯ ನಿರ್ವಹಿಸುತ್ತಿರುವ ವಿಶ್ವದ ಪ್ರಪ್ರಥಮ ವಿಮಾನ ನಿಲ್ದಾಣ ಎನ್ನುವ ಖ್ಯಾತಿಗೂ ಕೊಚ್ಚಿ ನಿಲ್ದಾಣ ಪಾತ್ರವಾಗಿದೆ.
Telegram Link https://t.me/joinchat/AAAAAE9lq2X6z4BbgUUCnw Friends, If you like this post,kindly comment below the post and do share your Response, (Thanks for Reading....)
No comments:
Post a Comment