ಜೂನ್ ನಲ್ಲಿ ನಡೆದ ಕೆ.ಎ.ಎಸ್. ಪರೀಕ್ಷೆಯ ಎರಡು ಪ್ರಶ್ನೆಪತ್ರಿಕೆಗಳಿಗೆ ಮಾತ್ರ ಉತ್ತರಗಳನ್ನ ನೀಡಲಾಗಿದ್ದು, ಇನ್ನುಳಿದ ಪ್ರಶ್ನೆಪತ್ರಿಕೆಗಳನ್ನ ಬೆರಳಚ್ಚಿಸುವ ಕಾರ್ಯ ಭರದಿಂದ ಸಾಗಿದೆ.. ಶೀಘ್ರದಲ್ಲೇ ಈ ತಾಣ ಸಮಗ್ರವಾಗಲಿದೆ. ನಿಮ್ಮ ಸಹಕಾರ, ಪ್ರೋತ್ಸಾಹಕ್ಕೆ ಪ್ರಶ್ನೋತ್ತರ ತಂಡ ಕೃತಜ್ಞತೆ ಸಲ್ಲಿಸುತ್ತದೆ.

ಆತ್ಮೀಯ ಸ್ಪರ್ಧಾರ್ಥಿಗಳೇ, ಎಲ್ಲ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತೆ ಮಾಹಿತಿ ನೀಡಲಾಗುತ್ತಿದೆ.https://t.me/kpsc2019 ಕ್ರೀಡಾಕೂಟದ ಬಹುಮಾನ ಮೊತ್ತ ಹೆಚ್ಚಳ | General Knowledge in Kannada
https://www.highrevenuegate.com/dst1z9b3?key=96fa453e5c910a6715da3b114f6d9e35

RECENT POSTS

6

https://www.videosprofitnetwork.com/watch.xml?key=35286665df409d9f630563e3a619eb10

ಇತ್ತೀಚಿನ ಸುದ್ದಿ...Recent Notes

8

https://www.highrevenuegate.com/his7kbtc7?key=50a282e312a45be4aa549d301f853be2

Tuesday, October 09, 2018

ಕ್ರೀಡಾಕೂಟದ ಬಹುಮಾನ ಮೊತ್ತ ಹೆಚ್ಚಳ

  Pundalik       Tuesday, October 09, 2018

ಅ.10ರಿಂದ 16ರವರೆಗೆ ದಸರಾ ಸಿ.ಎಂ ಕಪ್‌: 4,500 ಅಥ್ಲೀಟ್‌ಗಳು ನಿರೀಕ್ಷೆ


ಎಂ.ಆರ್.ಪೂವಮ್ಮ

ಪ್ರಜಾವಾಣಿ ವಾರ್ತೆ

ಮೈಸೂರು: ಕ್ರೀಡಾಪಟುಗಳು, ಕೋಚ್‌ಗಳು ಹಾಗೂ ಕ್ರೀಡಾ ಪ್ರೇಮಿಗಳ ಒತ್ತಾಸೆಯಿಂದಾಗಿ ದಸರಾ ಕ್ರೀಡಾಕೂಟದ ಬಹುಮಾನ ಮೊತ್ತದಲ್ಲಿ ಈ ಬಾರಿ ಹೆಚ್ಚಳ ಮಾಡಲಾಗಿದೆ.

ಸಾಂಸ್ಕೃತಿಕ ನಗರದಲ್ಲಿ ಬುಧವಾರ ಆರಂಭವಾಗಲಿರುವ ‘ದಸರಾ ಸಿ.ಎಂ ಕಪ್‌’ ಕ್ರೀಡಾಕೂಟದಿಂದಲೇ ಇದು ಜಾರಿಗೆ ಬರಲಿದೆ.

‘ವೈಯಕ್ತಿಕ ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ಗೆದ್ದವರಿಗೆ ₹ 12,000 (ಚಿನ್ನ), ₹ 6,000 (ಬೆಳ್ಳಿ), ₹ 3,000 (ಕಂಚು) ಬಹು
ಮಾನ ನೀಡಲು ನಿರ್ಧರಿಸಲಾಗಿದೆ’ ಎಂದು ಕ್ರೀಡಾ ಇಲಾಖೆಯ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ. ಈ ಹಿಂದೆ ಕ್ರಮವಾಗಿ ₹ 5,000, ₹ 3,000, ₹ 1,500 ನೀಡಲಾಗುತಿತ್ತು.

ಗುಂಪು ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ಗೆದ್ದ ತಂಡಗಳಿಗೆ ₹ 40,000 (ಚಿನ್ನ), ₹ 20,000 (ಬೆಳ್ಳಿ), ₹ 10,000 (ಕಂಚು) ಬಹುಮಾನ ಲಭಿಸಲಿದೆ.

ಅ.10ರಿಂದ 16ರವರೆಗೆ ಅಥ್ಲೆಟಿಕ್ಸ್‌ ಸೇರಿದಂತೆ 31 ಕ್ರೀಡಾ ವಿಭಾಗಗಳಲ್ಲಿ ಸುಮಾರು 4,500 ಸ್ಪರ್ಧಿ
ಗಳು ಪೈಪೋಟಿ ನಡೆಸಲಿ
ದ್ದಾರೆ. ಸ್ಥಳೀಯ ಕ್ರೀಡಾಸಕ್ತರ ಒತ್ತಡದಿಂದಾಗಿ ಬಾಲ್‌ಬ್ಯಾಡ್ಮಿಂಟನ್‌, ಚೆಸ್‌, ಕರಾಟೆ, ಥ್ರೋಬಾಲ್‌, 
ಹಾಫ್‌ ಮ್ಯಾರಥಾನ್‌, ಸೈಕಲ್‌ ಪೋಲೊ, ದೇಹದಾರ್ಢ್ಯ ಸ್ಪರ್ಧೆಗಳಿಗೆ ಕೊನೆ ಸಮಯದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಇದೇ ಮೊದಲ ಬಾರಿ ಕ್ರೀಡಾಪಟುಗಳ ವಾಸ್ತವ್ಯಕ್ಕೆ ಹೋಟೆಲ್‌ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ 24 ಹೋಟೆಲ್‌ಗಳನ್ನು ಗುರುತಿಸಲಾಗಿದೆ. ಕ್ರೀಡಾ ಸಮವಸ್ತ್ರ, ಷೂ ಹಾಗೂ ಆಹಾರವನ್ನು ಉಚಿತವಾಗಿ ಕಲ್ಪಿಸಲಾಗುತ್ತಿದೆ. ಈ ಹಿಂದೆ ಚೌಲ್ಟ್ರಿ, ಹಾಸ್ಟೆಲ್‌, ಶಾಲಾ ಕಾಲೇಜುಗಳ ಕೊಠಡಿಗಳಲ್ಲಿ ಉಳಿದುಕೊಳ್ಳುತ್ತಿದ್ದರು.

ಕ್ರೀಡಾಕೂಟವನ್ನು ಈ ಬಾರಿ ‘ದಸರಾ ಸಿ.ಎಂ ಕಪ್‌’ ಎಂಬುದಾಗಿ ನಾಮಕರಣ ಮಾಡಲಾಗಿದೆ. ಈ ಮೂಲಕ ಪ್ರಮಾಣಪತ್ರಕ್ಕೆ ಮಾನ್ಯತೆ ಕಲ್ಪಿಸಲಾಗಿದೆ. ಪ್ರತಿ ಕ್ರೀಡಾ ವಿಭಾಗದಿಂದ ಅಗ್ರ ಎಂಟು ತಂಡಗಳು ಪೈಪೋಟಿ ನಡೆಸಲಿವೆ. ‘ಕ್ರೀಡಾಕೂಟದ ಸ್ವರೂಪ ಬದಲಿಸಿರುವುದರಿಂದ ಈ ಬಾರಿ ದಸರೆಯಲ್ಲಿ ಭಾಗವಹಿಸಲು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಲಭಿಸಿಲ್ಲ’ ಎಂಬ ಆಕ್ರೋಶವೂ ಸ್ಥಳೀಯ ಕ್ರೀಡಾಪಟುಗಳು, ಕ್ರೀಡಾ ಪೋಷಕರಿಂದ ವ್ಯಕ್ತವಾಗಿದೆ.

ಪೂವಮ್ಮಗೆ ಕ್ರೀಡಾಕೂಟ ಉದ್ಘಾಟನೆ ಭಾಗ್ಯ

ಮೈಸೂರು: ಅಂತರರಾಷ್ಟ್ರೀಯ ಅಥ್ಲೀಟ್‌ ಎಂ.ಆರ್.ಪೂವಮ್ಮ ಅವರಿಗೆ ಈ ಬಾರಿಯ ದಸರಾ ಸಿ.ಎಂ ಕಪ್‌ ಕ್ರೀಡಾಕೂಟ ಉದ್ಘಾಟಿಸುವ ಭಾಗ್ಯ ಲಭಿಸಿದೆ.

ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಮಂಗಳೂರಿನಲ್ಲಿ ನೆಲೆಸಿರುವ ಕೊಡಗು ಜಿಲ್ಲೆಯ ಪೂವಮ್ಮ, ಇಂಡೊನೇಷ್ಯಾದ ಜಕಾರ್ತದಲ್ಲಿ ಈಚೆಗೆ ನಡೆದ ಏಷ್ಯನ್‌ ಕ್ರೀಡಾಕೂಟದ 4x400 ಮೀಟರ್ಸ್‌ ರಿಲೇನಲ್ಲಿ ಚಿನ್ನ ಹಾಗೂ ಮಿಶ್ರ ರಿಲೇನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

‘ಹಲವಾರು ಪ್ರತಿಭಾವಂತ ಅಥ್ಲೀಟ್‌ಗಳನ್ನು ಬೆಳಕಿಗೆ ತಂದಿರುವ ಕ್ರೀಡಾಕೂಟ ಉದ್ಘಾಟಿಸಲು ಸಹಜವಾಗಿಯೇ ಖುಷಿ ಆಗುತ್ತಿದೆ. ಈ ಕ್ರೀಡಾಕೂಟದಲ್ಲಿ ನಾನೆಂದೂ ಭಾಗವಹಿಸಿಲ್ಲ. ಆದರೆ, ಈಗ ಉದ್ಘಾಟನೆಗೆ ಅವಕಾಶ ಸಿಕ್ಕಿದೆ’ ಎಂದು ಪೂವಮ್ಮ ‘ಪ್ರಜಾವಾಣಿ’ಗೆ ಪ‍್ರತಿಕ್ರಿಯಿಸಿದರು.

logoblog

Thanks for reading ಕ್ರೀಡಾಕೂಟದ ಬಹುಮಾನ ಮೊತ್ತ ಹೆಚ್ಚಳ

Previous
« Prev Post

No comments:

Post a Comment

Disclaimer

Disclaimer/ Notice: This all documents and PDF notes & Magazines (Only Education and Knowledge Propose) we are downloaded from the (whatsApp & Telegram Groups) internet. We are not responsible for any type of copyright issues. If we have any complaint regarding this content. We are trying to remove this content shorty. Contact: pyadavgk@gmail.com

Popular Posts

Followers

Contact Form

Name

Email *

Message *